Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...