Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...