Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...