Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...