Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....