Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...