Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...