Homeರಾಜಕೀಯಸಚಿವ ಬಾಲಗೋಪಾಲ್ ಅವರನ್ನು ವಜಾಗೊಳಿಸುವಂತೆ ಕೇಳಿದ ರಾಜ್ಯಪಾಲ; ನಿರಾಕರಿಸಿದ ಸಿಎಂ ಪಿಣರಾಯಿ!

ಸಚಿವ ಬಾಲಗೋಪಾಲ್ ಅವರನ್ನು ವಜಾಗೊಳಿಸುವಂತೆ ಕೇಳಿದ ರಾಜ್ಯಪಾಲ; ನಿರಾಕರಿಸಿದ ಸಿಎಂ ಪಿಣರಾಯಿ!

- Advertisement -
- Advertisement -

ಕೇರಳ ಸರ್ಕಾರದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರನ್ನು ಸಂಪುಟದಿಂದ ಕೈಬಿಡುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ. “ಸಚಿವರು ತಮ್ಮ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದು, ಭಾರತದ ಏಕತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ರಾಜ್ಯಪಾಲರ ವಿರುದ್ಧ ಸಚಿವರು ಇತ್ತೀಚೆಗೆ ಮಾಡಿದ ಟೀಕೆಗಳನ್ನು ಉಲ್ಲೇಖಿಸಿರುವ ಅವರು ಬಾಲಗೋಪಾಲ್ ಅವರು ಸಚಿವರಾಗಿ ಮುಂದುವರೆಯುವುದರ ಬಗ್ಗೆ ಭರವಸೆ ಕಳೆದುಕೊಂಡಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ಸಂವಿಧಾನದ 164 ನೇ ವಿಧಿಯ ಪ್ರಕಾರ, ಮುಖ್ಯಮಂತ್ರಿಯನ್ನು ರಾಜ್ಯಪಾಲರು ನೇಮಕ ಮಾಡುತ್ತಾರೆ. ಇತರ ಮಂತ್ರಿಗಳನ್ನು ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ನೇಮಕ ಮಾಡುತ್ತಾರೆ. ರಾಜ್ಯಪಾಲರಿಗೆ ಭರವಸೆ ಹೊಂದಿರುವವರೆಗೆ ಮಂತ್ರಿಗಳು ಅಧಿಕಾರವನ್ನು ಹೊಂದಿರುತ್ತಾರೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ರಾಜ್ಯಪಾಲರ ಬೇಡಿಕೆಯನ್ನು ಕೇಳರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಾರಾಸಗಟಾಗಿ ನಿರಾಕರಿಸಿದ್ದಾರೆ ಎಂದು ಕೇರಳದ ಮಾಧ್ಯಮಗಳು ವರದಿ ಮಾಡಿವೆ.

ಸಚಿವ ಕೆ.ಎನ್. ಬಾಲಗೋಪಾಲ್ ಅವರು ವಿಶ್ವವಿದ್ಯಾಲಯದಲ್ಲಿ ಮಾತನಾಡುತ್ತಾ, ರಾಜ್ಯಪಾಲರನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಅವರು ತಮ್ಮ ಭಾಷಣದಲ್ಲಿ, “ಉತ್ತರ ಪ್ರದೇಶದಿಂದ ಬಂದವರಿಗೆ ಕೇರಳದ ಶಿಕ್ಷಣ ಸಂಸ್ಥೆಗಳನ್ನು ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ಕಿಡಿ ಕಾರಿದ್ದರು. ಸಚಿವರ ಈ ಹೇಳಿಕೆ ರಾಜ್ಯಪಾಲರನ್ನು ಕೆರಳಿಸಿದೆ ಎನ್ನಲಾಗಿದೆ.

ರಾಜ್ಯಪಾಲ ಆರಿಫ್ ಖಾನ್ ಅವರು ಕಳೆದ ವಾರ ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಮಂತ್ರಿಗಳನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು. “ರಾಜ್ಯದ ಕ್ಯಾಬಿನೆಟ್ ಸಚಿವರು ಮತ್ತು ಮುಖ್ಯಮಂತ್ರಿ ರಾಜ್ಯಪಾಲರ ಕಚೇರಿಯ ಘನತೆಗೆ ಕುಂದುಂಟು ಮಾಡುವ ಹೇಳಿಕೆಗಳನ್ನು ನೀಡಿದರೆ ಕಠಿಣ ಕ್ರಮ ಅನುಸರಿಸಲಾಗುವುದು” ಎಂದು ಎಚ್ಚರಿಸಿದ್ದರು.

“ರಾಜ್ಯಪಾಲರಿಗೆ ಸಲಹೆ ನೀಡಲು ಸಿಎಂ ಮತ್ತು ಮಂತ್ರಿ ಮಂಡಳಕ್ಕೆ ಎಲ್ಲ ಹಕ್ಕುಗಳಿವೆ. ಆದರೆ ರಾಜ್ಯಪಾಲರ ಕಚೇರಿಯ ಘನತೆಗೆ ಕುಂದುಂಟು ಮಾಡುವ ಸಚಿವರ ವೈಯಕ್ತಿಕ ಹೇಳಿಕೆಗಳು ಅವರನ್ನು ಅಧಿಕಾರದಿಂದ ವಜಾಗೊಳಿಸುವುದು ಸೇರಿದಂತೆ ಇತರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ರಾಜ್ಯಪಾಲರ ಈ ಹೇಳಿಕೆಯ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್ ಅವರು,“ರಾಜ್ಯಪಾಲರನ್ನು ರಾಜಕೀಯಕ್ಕೆ ಬಳಸುವುದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಇತ್ತೀಚೆಗೆ ಕೇರಳ, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಕೂಡಾ ಹೀಗೆ ಮಾಡಲಾಗಿದೆ. ರಾಜ್ಯಪಾಲರು ಸರ್ವಾಧಿಕಾರಿಗಳಲ್ಲ, ಅವರು ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನು ಮಾತ್ರ ನೀಡಬಹುದಷ್ಟೆ” ಎಂದು ಹೇಳಿದ್ದಾರೆ.

“ಭರವಸೆ ಕಳೆದುಕೊಂಡಿದ್ದೇನೆ ಎಂದು ರಾಜ್ಯಪಾಲರು ತನಗೆ ಇಷ್ಟ ಬಂದ ಹಾಗೆ ಸಚಿವರನ್ನು ವಜಾಗೊಳಿಸುವ ಹಾಗೆ ಇಲ್ಲ. ಅವರನ್ನು ವಜಾಗೊಳಿಸಬೇಕು ಎಂದರೆ ಅದಕ್ಕೊಂದು ವಿಧಾನವಿದೆ. ರಾಜ್ಯಪಾಲರು ನಿರಂಕುಶವಾಗಿ ವರ್ತಿಸುವ ಹಾಗೆ ಇಲ್ಲ” ಎಂದು ಜಸ್ಟಿಸ್ ನಾಗಮೋಹನ್‌ ದಾಸ್‌ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...