Homeರಾಜಕೀಯಸಚಿವ ಬಾಲಗೋಪಾಲ್ ಅವರನ್ನು ವಜಾಗೊಳಿಸುವಂತೆ ಕೇಳಿದ ರಾಜ್ಯಪಾಲ; ನಿರಾಕರಿಸಿದ ಸಿಎಂ ಪಿಣರಾಯಿ!

ಸಚಿವ ಬಾಲಗೋಪಾಲ್ ಅವರನ್ನು ವಜಾಗೊಳಿಸುವಂತೆ ಕೇಳಿದ ರಾಜ್ಯಪಾಲ; ನಿರಾಕರಿಸಿದ ಸಿಎಂ ಪಿಣರಾಯಿ!

- Advertisement -
- Advertisement -

ಕೇರಳ ಸರ್ಕಾರದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರನ್ನು ಸಂಪುಟದಿಂದ ಕೈಬಿಡುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ. “ಸಚಿವರು ತಮ್ಮ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದು, ಭಾರತದ ಏಕತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ರಾಜ್ಯಪಾಲರ ವಿರುದ್ಧ ಸಚಿವರು ಇತ್ತೀಚೆಗೆ ಮಾಡಿದ ಟೀಕೆಗಳನ್ನು ಉಲ್ಲೇಖಿಸಿರುವ ಅವರು ಬಾಲಗೋಪಾಲ್ ಅವರು ಸಚಿವರಾಗಿ ಮುಂದುವರೆಯುವುದರ ಬಗ್ಗೆ ಭರವಸೆ ಕಳೆದುಕೊಂಡಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ಸಂವಿಧಾನದ 164 ನೇ ವಿಧಿಯ ಪ್ರಕಾರ, ಮುಖ್ಯಮಂತ್ರಿಯನ್ನು ರಾಜ್ಯಪಾಲರು ನೇಮಕ ಮಾಡುತ್ತಾರೆ. ಇತರ ಮಂತ್ರಿಗಳನ್ನು ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ನೇಮಕ ಮಾಡುತ್ತಾರೆ. ರಾಜ್ಯಪಾಲರಿಗೆ ಭರವಸೆ ಹೊಂದಿರುವವರೆಗೆ ಮಂತ್ರಿಗಳು ಅಧಿಕಾರವನ್ನು ಹೊಂದಿರುತ್ತಾರೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ರಾಜ್ಯಪಾಲರ ಬೇಡಿಕೆಯನ್ನು ಕೇಳರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಾರಾಸಗಟಾಗಿ ನಿರಾಕರಿಸಿದ್ದಾರೆ ಎಂದು ಕೇರಳದ ಮಾಧ್ಯಮಗಳು ವರದಿ ಮಾಡಿವೆ.

ಸಚಿವ ಕೆ.ಎನ್. ಬಾಲಗೋಪಾಲ್ ಅವರು ವಿಶ್ವವಿದ್ಯಾಲಯದಲ್ಲಿ ಮಾತನಾಡುತ್ತಾ, ರಾಜ್ಯಪಾಲರನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಅವರು ತಮ್ಮ ಭಾಷಣದಲ್ಲಿ, “ಉತ್ತರ ಪ್ರದೇಶದಿಂದ ಬಂದವರಿಗೆ ಕೇರಳದ ಶಿಕ್ಷಣ ಸಂಸ್ಥೆಗಳನ್ನು ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ಕಿಡಿ ಕಾರಿದ್ದರು. ಸಚಿವರ ಈ ಹೇಳಿಕೆ ರಾಜ್ಯಪಾಲರನ್ನು ಕೆರಳಿಸಿದೆ ಎನ್ನಲಾಗಿದೆ.

ರಾಜ್ಯಪಾಲ ಆರಿಫ್ ಖಾನ್ ಅವರು ಕಳೆದ ವಾರ ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಮಂತ್ರಿಗಳನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು. “ರಾಜ್ಯದ ಕ್ಯಾಬಿನೆಟ್ ಸಚಿವರು ಮತ್ತು ಮುಖ್ಯಮಂತ್ರಿ ರಾಜ್ಯಪಾಲರ ಕಚೇರಿಯ ಘನತೆಗೆ ಕುಂದುಂಟು ಮಾಡುವ ಹೇಳಿಕೆಗಳನ್ನು ನೀಡಿದರೆ ಕಠಿಣ ಕ್ರಮ ಅನುಸರಿಸಲಾಗುವುದು” ಎಂದು ಎಚ್ಚರಿಸಿದ್ದರು.

“ರಾಜ್ಯಪಾಲರಿಗೆ ಸಲಹೆ ನೀಡಲು ಸಿಎಂ ಮತ್ತು ಮಂತ್ರಿ ಮಂಡಳಕ್ಕೆ ಎಲ್ಲ ಹಕ್ಕುಗಳಿವೆ. ಆದರೆ ರಾಜ್ಯಪಾಲರ ಕಚೇರಿಯ ಘನತೆಗೆ ಕುಂದುಂಟು ಮಾಡುವ ಸಚಿವರ ವೈಯಕ್ತಿಕ ಹೇಳಿಕೆಗಳು ಅವರನ್ನು ಅಧಿಕಾರದಿಂದ ವಜಾಗೊಳಿಸುವುದು ಸೇರಿದಂತೆ ಇತರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ರಾಜ್ಯಪಾಲರ ಈ ಹೇಳಿಕೆಯ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್ ಅವರು,“ರಾಜ್ಯಪಾಲರನ್ನು ರಾಜಕೀಯಕ್ಕೆ ಬಳಸುವುದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಇತ್ತೀಚೆಗೆ ಕೇರಳ, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಕೂಡಾ ಹೀಗೆ ಮಾಡಲಾಗಿದೆ. ರಾಜ್ಯಪಾಲರು ಸರ್ವಾಧಿಕಾರಿಗಳಲ್ಲ, ಅವರು ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನು ಮಾತ್ರ ನೀಡಬಹುದಷ್ಟೆ” ಎಂದು ಹೇಳಿದ್ದಾರೆ.

“ಭರವಸೆ ಕಳೆದುಕೊಂಡಿದ್ದೇನೆ ಎಂದು ರಾಜ್ಯಪಾಲರು ತನಗೆ ಇಷ್ಟ ಬಂದ ಹಾಗೆ ಸಚಿವರನ್ನು ವಜಾಗೊಳಿಸುವ ಹಾಗೆ ಇಲ್ಲ. ಅವರನ್ನು ವಜಾಗೊಳಿಸಬೇಕು ಎಂದರೆ ಅದಕ್ಕೊಂದು ವಿಧಾನವಿದೆ. ರಾಜ್ಯಪಾಲರು ನಿರಂಕುಶವಾಗಿ ವರ್ತಿಸುವ ಹಾಗೆ ಇಲ್ಲ” ಎಂದು ಜಸ್ಟಿಸ್ ನಾಗಮೋಹನ್‌ ದಾಸ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...