Homeರಾಜಕೀಯತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ

- Advertisement -
- Advertisement -

ತಮಿಳುನಾಡು ರಾಜ್ಯವನ್ನು ತಮಿಳಗಂ ಎಂದು ಉಲ್ಲೇಖಿಸಿದ್ದ ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ. ಇದಲ್ಲದೆ ಸೋಮವಾರದಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಿರುವಾಗಲೆ ಅವರು ಸದನದಿಂದ ಹೊರನಡೆದಿದ್ದರು.

ರಾಜಭವನದ ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದ್ದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ನಿನ್ನೆ ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾಸ ಸೃಷ್ಟಿಸಿದ್ದಾರೆ.

ಈ ನಡುವೆ #GetOutRavi ಎಂಬ ಹ್ಯಾಶ್‌ಟ್ಯಾಗ್ ಕೂಡ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದಲಿತ ಹಕ್ಕುಗಳ ಹೋರಾಟಗಾರ್ತಿ, ಖ್ಯಾತ ಲೇಖಕಿ ಮೀನಾ ಕಂದಸಾಮಿ ಅವರು, “ನಾವು ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಿದಾಗ ಮಾತ್ರ  ನಿಜವಾಗಿಯೂ ವಸಾಹತುಶಾಹಿಯನ್ನು ತೊಡೆದುಹಾಕಲು ಸಾಧ್ಯ. ಗೆಟ್‌ ಓಟ್‌ ರವಿ” ಎಂದು ಟ್ವೀಟ್ ಮಾಡಿದ್ದಾರೆ.

ಆಡಳಿತರೂಢ ಡಿಎಂಕೆ ನಾಯಕ ಇಸೈ ಅವರು, “ಸಾಮಾಜಿಕ ಜಾಲತಾಣದಿಂದ ನಗರಗಳ ಗೋಡೆಗಳ ವರೆಗೂ ಗೆಟ್‌ ಔಟ್ ರವಿ ಎಂದು ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದು ನಗರದ ಗೋಡೆಯೊಂದರಲ್ಲಿನ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ.

ಈ ನಡುವೆ ತೆಲಂಗಾಣದ ಆಡಳಿತರೂಢ ಟಿಆರ್‌ಎಸ್‌ ನಾಯಕರು ಕೂಡಾ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದ್ದು, “ಉತ್ತರಿಸಲು ಸಾಧ್ಯವಾಗದ ತಮಿಳುನಾಡು ರಾಜ್ಯಪಾಲರು ಅಧಿವೇಶನದ ಮಧ್ಯೆಯೇ ಹೊರನಡೆದರು!” ಎಂದು ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ತಮಿಳುನಾಡು ಕಾಂಗ್ರೆಸ್ ನಾಯಕ ಕೆಟಿಎಲ್ ಟ್ವೀಟ್

ನನ್ನ ರಾಜ್ಯವನ್ನು ತಮಿಳುನಾಡು ಎಂದು ಕರೆಯಲು ನಿಮಗೆ ಸಮಸ್ಯೆ ಇದ್ದರೆ, ನೀವು ರಾಜ್ಯವನ್ನು ತೊರೆಯಬಹುದು ಎಂದು ಮೋಹನ್ ವಿನೋದ್ ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...