Homeರಾಜಕೀಯತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ

- Advertisement -
- Advertisement -

ತಮಿಳುನಾಡು ರಾಜ್ಯವನ್ನು ತಮಿಳಗಂ ಎಂದು ಉಲ್ಲೇಖಿಸಿದ್ದ ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ. ಇದಲ್ಲದೆ ಸೋಮವಾರದಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಿರುವಾಗಲೆ ಅವರು ಸದನದಿಂದ ಹೊರನಡೆದಿದ್ದರು.

ರಾಜಭವನದ ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದ್ದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ನಿನ್ನೆ ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾಸ ಸೃಷ್ಟಿಸಿದ್ದಾರೆ.

ಈ ನಡುವೆ #GetOutRavi ಎಂಬ ಹ್ಯಾಶ್‌ಟ್ಯಾಗ್ ಕೂಡ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದಲಿತ ಹಕ್ಕುಗಳ ಹೋರಾಟಗಾರ್ತಿ, ಖ್ಯಾತ ಲೇಖಕಿ ಮೀನಾ ಕಂದಸಾಮಿ ಅವರು, “ನಾವು ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಿದಾಗ ಮಾತ್ರ  ನಿಜವಾಗಿಯೂ ವಸಾಹತುಶಾಹಿಯನ್ನು ತೊಡೆದುಹಾಕಲು ಸಾಧ್ಯ. ಗೆಟ್‌ ಓಟ್‌ ರವಿ” ಎಂದು ಟ್ವೀಟ್ ಮಾಡಿದ್ದಾರೆ.

ಆಡಳಿತರೂಢ ಡಿಎಂಕೆ ನಾಯಕ ಇಸೈ ಅವರು, “ಸಾಮಾಜಿಕ ಜಾಲತಾಣದಿಂದ ನಗರಗಳ ಗೋಡೆಗಳ ವರೆಗೂ ಗೆಟ್‌ ಔಟ್ ರವಿ ಎಂದು ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದು ನಗರದ ಗೋಡೆಯೊಂದರಲ್ಲಿನ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ.

ಈ ನಡುವೆ ತೆಲಂಗಾಣದ ಆಡಳಿತರೂಢ ಟಿಆರ್‌ಎಸ್‌ ನಾಯಕರು ಕೂಡಾ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದ್ದು, “ಉತ್ತರಿಸಲು ಸಾಧ್ಯವಾಗದ ತಮಿಳುನಾಡು ರಾಜ್ಯಪಾಲರು ಅಧಿವೇಶನದ ಮಧ್ಯೆಯೇ ಹೊರನಡೆದರು!” ಎಂದು ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ತಮಿಳುನಾಡು ಕಾಂಗ್ರೆಸ್ ನಾಯಕ ಕೆಟಿಎಲ್ ಟ್ವೀಟ್

ನನ್ನ ರಾಜ್ಯವನ್ನು ತಮಿಳುನಾಡು ಎಂದು ಕರೆಯಲು ನಿಮಗೆ ಸಮಸ್ಯೆ ಇದ್ದರೆ, ನೀವು ರಾಜ್ಯವನ್ನು ತೊರೆಯಬಹುದು ಎಂದು ಮೋಹನ್ ವಿನೋದ್ ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...