Homeರಾಜಕೀಯತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ

- Advertisement -
- Advertisement -

ತಮಿಳುನಾಡು ರಾಜ್ಯವನ್ನು ತಮಿಳಗಂ ಎಂದು ಉಲ್ಲೇಖಿಸಿದ್ದ ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ. ಇದಲ್ಲದೆ ಸೋಮವಾರದಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಿರುವಾಗಲೆ ಅವರು ಸದನದಿಂದ ಹೊರನಡೆದಿದ್ದರು.

ರಾಜಭವನದ ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದ್ದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ನಿನ್ನೆ ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾಸ ಸೃಷ್ಟಿಸಿದ್ದಾರೆ.

ಈ ನಡುವೆ #GetOutRavi ಎಂಬ ಹ್ಯಾಶ್‌ಟ್ಯಾಗ್ ಕೂಡ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದಲಿತ ಹಕ್ಕುಗಳ ಹೋರಾಟಗಾರ್ತಿ, ಖ್ಯಾತ ಲೇಖಕಿ ಮೀನಾ ಕಂದಸಾಮಿ ಅವರು, “ನಾವು ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಿದಾಗ ಮಾತ್ರ  ನಿಜವಾಗಿಯೂ ವಸಾಹತುಶಾಹಿಯನ್ನು ತೊಡೆದುಹಾಕಲು ಸಾಧ್ಯ. ಗೆಟ್‌ ಓಟ್‌ ರವಿ” ಎಂದು ಟ್ವೀಟ್ ಮಾಡಿದ್ದಾರೆ.

ಆಡಳಿತರೂಢ ಡಿಎಂಕೆ ನಾಯಕ ಇಸೈ ಅವರು, “ಸಾಮಾಜಿಕ ಜಾಲತಾಣದಿಂದ ನಗರಗಳ ಗೋಡೆಗಳ ವರೆಗೂ ಗೆಟ್‌ ಔಟ್ ರವಿ ಎಂದು ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದು ನಗರದ ಗೋಡೆಯೊಂದರಲ್ಲಿನ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ.

ಈ ನಡುವೆ ತೆಲಂಗಾಣದ ಆಡಳಿತರೂಢ ಟಿಆರ್‌ಎಸ್‌ ನಾಯಕರು ಕೂಡಾ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದ್ದು, “ಉತ್ತರಿಸಲು ಸಾಧ್ಯವಾಗದ ತಮಿಳುನಾಡು ರಾಜ್ಯಪಾಲರು ಅಧಿವೇಶನದ ಮಧ್ಯೆಯೇ ಹೊರನಡೆದರು!” ಎಂದು ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ತಮಿಳುನಾಡು ಕಾಂಗ್ರೆಸ್ ನಾಯಕ ಕೆಟಿಎಲ್ ಟ್ವೀಟ್

ನನ್ನ ರಾಜ್ಯವನ್ನು ತಮಿಳುನಾಡು ಎಂದು ಕರೆಯಲು ನಿಮಗೆ ಸಮಸ್ಯೆ ಇದ್ದರೆ, ನೀವು ರಾಜ್ಯವನ್ನು ತೊರೆಯಬಹುದು ಎಂದು ಮೋಹನ್ ವಿನೋದ್ ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...