Homeರಾಜಕೀಯತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ

- Advertisement -
- Advertisement -

ತಮಿಳುನಾಡು ರಾಜ್ಯವನ್ನು ತಮಿಳಗಂ ಎಂದು ಉಲ್ಲೇಖಿಸಿದ್ದ ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ. ಇದಲ್ಲದೆ ಸೋಮವಾರದಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಿರುವಾಗಲೆ ಅವರು ಸದನದಿಂದ ಹೊರನಡೆದಿದ್ದರು.

ರಾಜಭವನದ ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದ್ದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ನಿನ್ನೆ ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾಸ ಸೃಷ್ಟಿಸಿದ್ದಾರೆ.

ಈ ನಡುವೆ #GetOutRavi ಎಂಬ ಹ್ಯಾಶ್‌ಟ್ಯಾಗ್ ಕೂಡ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದಲಿತ ಹಕ್ಕುಗಳ ಹೋರಾಟಗಾರ್ತಿ, ಖ್ಯಾತ ಲೇಖಕಿ ಮೀನಾ ಕಂದಸಾಮಿ ಅವರು, “ನಾವು ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಿದಾಗ ಮಾತ್ರ  ನಿಜವಾಗಿಯೂ ವಸಾಹತುಶಾಹಿಯನ್ನು ತೊಡೆದುಹಾಕಲು ಸಾಧ್ಯ. ಗೆಟ್‌ ಓಟ್‌ ರವಿ” ಎಂದು ಟ್ವೀಟ್ ಮಾಡಿದ್ದಾರೆ.

ಆಡಳಿತರೂಢ ಡಿಎಂಕೆ ನಾಯಕ ಇಸೈ ಅವರು, “ಸಾಮಾಜಿಕ ಜಾಲತಾಣದಿಂದ ನಗರಗಳ ಗೋಡೆಗಳ ವರೆಗೂ ಗೆಟ್‌ ಔಟ್ ರವಿ ಎಂದು ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದು ನಗರದ ಗೋಡೆಯೊಂದರಲ್ಲಿನ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ.

ಈ ನಡುವೆ ತೆಲಂಗಾಣದ ಆಡಳಿತರೂಢ ಟಿಆರ್‌ಎಸ್‌ ನಾಯಕರು ಕೂಡಾ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದ್ದು, “ಉತ್ತರಿಸಲು ಸಾಧ್ಯವಾಗದ ತಮಿಳುನಾಡು ರಾಜ್ಯಪಾಲರು ಅಧಿವೇಶನದ ಮಧ್ಯೆಯೇ ಹೊರನಡೆದರು!” ಎಂದು ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ತಮಿಳುನಾಡು ಕಾಂಗ್ರೆಸ್ ನಾಯಕ ಕೆಟಿಎಲ್ ಟ್ವೀಟ್

ನನ್ನ ರಾಜ್ಯವನ್ನು ತಮಿಳುನಾಡು ಎಂದು ಕರೆಯಲು ನಿಮಗೆ ಸಮಸ್ಯೆ ಇದ್ದರೆ, ನೀವು ರಾಜ್ಯವನ್ನು ತೊರೆಯಬಹುದು ಎಂದು ಮೋಹನ್ ವಿನೋದ್ ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...