Homeಕರ್ನಾಟಕರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, 'ಜೈ ಸಂವಿಧಾನ' ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಮಾತಾಡುವಾಗ ನನ್ನನ್ನು “ಅಸಹಾಯಕ ಮುಖ್ಯಮಂತ್ರಿ” ಎಂದು ಕರೆದಿದ್ದಾರೆ. ಕೆಲವು ಬಾರಿ, “ಅಸತ್ಯದ ಎದುರು ಸತ್ಯ ಅಸಹಾಯಕವಾಗಿಬಿಡುತ್ತದೆ” ಎಂದರು.

ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ. ಮನರೇಗಾ ಬದಲಾಯಿಸಿ “ವಿಬಿ ಜಿ ರಾಮ್ ಜಿ” ಎಂದು ಮಾಡಿದ್ದಾರೆ. ಇದರಲ್ಲಿರುವ ರಾಮ, ಧಶರಥ ರಾಮನೂ ಅಲ್ಲ. ಅಯೋಧ್ಯೆ ರಾಮನೂ ಅಲ್ಲ. ಹೆಸರು ಬದಲಾಯಿಸುವುದಕ್ಕೇ ಕೆಲವರನ್ನು ಅವರು ಇಟ್ಟುಕೊಂಡಿದ್ದಾರೆ ಅನಿಸುತ್ತೆ ಎಂದು ಹೇಳಿದರು.

ಸಂವಿಧಾನದ ವಿಧಿ 176 ಓದಿದ್ದರೆ ಚೆನ್ನಾಗಿರುತ್ತಿತ್ತು. ಸಂವಿಧಾನ ಜಾರಿಯಾದ ದಿನದಿಂದ ಇವತ್ತಿನವರೆಗೆ ಜಂಟಿ ಅಧಿವೇಶನಗಳು ನಡೆದುಕೊಂಡು ಬಂದಿವೆ. ಇದು ಸಂವಿಧಾನದ ಪ್ರಕಾರ ನಡೆದುಕೊಂಡು ಬರುತ್ತಿರುವ ಪದ್ಧತಿ ಎಂದು ತಿಳಿಸಿದರು.

ಹೆಚ್‌ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ “ನರೇಗ ಉದ್ಯೋಗ ಸಂಜೀವಿನಿ” ಎಂದು ಕರೆದಿದ್ದರು. ಈಗ ಬಿಜೆಪಿ ಜೊತೆ ಸೇರಿ ನರೇಗಾ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯಪಾಲರ ಭಾಷಣದ ಮೇಲೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ 15 ಜನ ಸದಸ್ಯರು ಮಾತನಾಡಿದ್ದಾರೆ. ಕಾಂಗ್ರೆಸ್‌ನ ವಂದನಾ ನಿರ್ಣಯ ಮಂಡಿಸಿದ ಪೊನ್ನಣ್ಣ ಮತ್ತು ಪ್ರದೀಪ್ ಈಶ್ವರ್ ಅವರು ಅನುಮೋದನೆ ಮಾಡಿದ್ದಾರೆ. ಸುಮಾರು 9 ಜನ ಮಾತನಾಡಿದ್ದು, ಜೆಡಿಎಸ್‌ನಿಂದ ಸುರೇಶ್ ಬಾಬುರವರು ಮತ್ತು ಪಕ್ಷೇತರರಲ್ಲಿ ಇಬ್ಬರು ಸೇರಿದಂತೆ ಒಟ್ಟು 27 ಜನ ಮಾತನಾಡಿದ್ದಾರೆ. ಕಾಂಗ್ರೆಸ್ 5 ಗಂಟೆ 18 ನಿಮಿಷ, ಬಿಜೆಪಿಯವರು 8 ಗಂಟೆ 53 ನಿಮಿಷ , ಜೆಡಿಎಸ್‌ನವರು 12 ನಿಮಿಷ ಮತ್ತು ಪಕ್ಷೇತರರು 54 ನಿಮಿಷ ಮಾತನಾಡಿದ್ದು, ಹೀಗೆ ಒಟ್ಟು 15 ಗಂಟೆ 17 ನಿಮಿಷ ಚರ್ಚೆ ನಡೆದಿದೆ ಎಂದು ತಿಳಿಸಿದರು.

ರಾಜ್ಯಪಾಲರು ಪೂರ್ಣ ಭಾಷಣವನ್ನು ಓದದೇ, ಮೊದಲನೇ ಹಾಗೂ ಕಡೆಯ ಜೈಹಿಂದ್, ಜೈಕರ್ನಾಟಕ ಎಂದು ಓದಿದರು. ಭಾಷಣದಲ್ಲಿ ಬರೆದುಕೊಡಲಾಗಿದ್ದ ‘ಜೈಸಂವಿಧಾನ’ವನ್ನು ಹೇಳಿಲ್ಲ. ರಾಷ್ಟ್ರಗೀತೆ ಮುಗಿದ ಬಳಿಕ ರಾಜ್ಯಪಾಲರು ತೆರಳಬಹುದಿತ್ತು. ಈ ಬಗ್ಗೆ ಸಂವಿಧಾನದ ಕಲಂ 176 , 163 ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ ಎಂದರು.

ಶಾಸಕ ಸುನಿಲ್ ಕುಮಾರ್ ಅವರು ‘ಸರ್ಕಾರ ಆಡಳಿತ ಹದಗೆಟ್ಟಿದೆ ಮತ್ತು ಸಂವಿಧಾನರಹಿತ ಸರ್ಕಾರ’ , ‘ಅಸಹಾಯಕ ಮುಖ್ಯಮಂತ್ರಿ’ ಎಂದಿದ್ದಾರೆ. ಕೆಲವೊಮ್ಮ ಅಸತ್ಯದ ಎದುರು ಸತ್ಯ ಅಸಹಾಯಕವಾಗುತ್ತದೆ. ಜನರು ನಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ. ವಿರೋಧಪಕ್ಷದವರ ಮತ್ತು ಸರ್ಕಾರದವರ ಸಿದ್ಧಾಂತಗಳು ವಿಭಿನ್ನವಾಗಿರುತ್ತವೆ. ನಾವಿಬ್ಬರೂ ಪರಸ್ಪರ ಒಪ್ಪಲೇಬೇಕೆಂಬ ಷರತ್ತಿಲ್ಲ. ಆದರೆ ನಾವೆಲ್ಲರೂ ಸಂವಿಧಾನ ಒಪ್ಪಲೇಬೇಕು. ಸಂವಿಧಾನಬದ್ಧವಾಗಿ ಸರ್ಕಾರ, ಆಡಳಿತ ನಡೆಯಲೇಬೇಕು. ಸಂವಿಧಾನವನ್ನು ಯಾವುದೇ ಕಾರಣಕ್ಕೂ ವಿರೋಧಿಸಬಾರದು. ರಾಜ್ಯಪಾಲರು ಮೂಲತ: ಉತ್ತಮ ವ್ಯಕ್ತಿಯೇ. ನಾವು ರಾಜ್ಯಪಾಲರ ವಿರುದ್ಧವಿಲ್ಲ. ಆದರೆ ಕೇಂದ್ರ ಸರ್ಕಾರಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದರು.

ಭಾಷಣದಲ್ಲಿ ಮನರೇಗಾ ರದ್ದುಪಡಿಸಿ ವಿಬಿ-ಜಿರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ)ವನ್ನು ಕೇಂದ್ರ ಜಾರಿಗೊಳಿಸಿದೆ. ಅದರಲ್ಲಿ ‘ಗ್ರಾಮ’ ಎನ್ನುವ ಪದವೂ ಇಲ್ಲ. ಈ ಕಾಯ್ದೆ ಜಾರಿಗೆ ಮುನ್ನ 176 ಕಲಂ ಅನ್ನು ಕೇಂದ್ರ ವಿಶ್ಲೇಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...