Homeಕರ್ನಾಟಕರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, 'ಜೈ ಸಂವಿಧಾನ' ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಮಾತಾಡುವಾಗ ನನ್ನನ್ನು “ಅಸಹಾಯಕ ಮುಖ್ಯಮಂತ್ರಿ” ಎಂದು ಕರೆದಿದ್ದಾರೆ. ಕೆಲವು ಬಾರಿ, “ಅಸತ್ಯದ ಎದುರು ಸತ್ಯ ಅಸಹಾಯಕವಾಗಿಬಿಡುತ್ತದೆ” ಎಂದರು.

ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ. ಮನರೇಗಾ ಬದಲಾಯಿಸಿ “ವಿಬಿ ಜಿ ರಾಮ್ ಜಿ” ಎಂದು ಮಾಡಿದ್ದಾರೆ. ಇದರಲ್ಲಿರುವ ರಾಮ, ಧಶರಥ ರಾಮನೂ ಅಲ್ಲ. ಅಯೋಧ್ಯೆ ರಾಮನೂ ಅಲ್ಲ. ಹೆಸರು ಬದಲಾಯಿಸುವುದಕ್ಕೇ ಕೆಲವರನ್ನು ಅವರು ಇಟ್ಟುಕೊಂಡಿದ್ದಾರೆ ಅನಿಸುತ್ತೆ ಎಂದು ಹೇಳಿದರು.

ಸಂವಿಧಾನದ ವಿಧಿ 176 ಓದಿದ್ದರೆ ಚೆನ್ನಾಗಿರುತ್ತಿತ್ತು. ಸಂವಿಧಾನ ಜಾರಿಯಾದ ದಿನದಿಂದ ಇವತ್ತಿನವರೆಗೆ ಜಂಟಿ ಅಧಿವೇಶನಗಳು ನಡೆದುಕೊಂಡು ಬಂದಿವೆ. ಇದು ಸಂವಿಧಾನದ ಪ್ರಕಾರ ನಡೆದುಕೊಂಡು ಬರುತ್ತಿರುವ ಪದ್ಧತಿ ಎಂದು ತಿಳಿಸಿದರು.

ಹೆಚ್‌ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ “ನರೇಗ ಉದ್ಯೋಗ ಸಂಜೀವಿನಿ” ಎಂದು ಕರೆದಿದ್ದರು. ಈಗ ಬಿಜೆಪಿ ಜೊತೆ ಸೇರಿ ನರೇಗಾ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯಪಾಲರ ಭಾಷಣದ ಮೇಲೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ 15 ಜನ ಸದಸ್ಯರು ಮಾತನಾಡಿದ್ದಾರೆ. ಕಾಂಗ್ರೆಸ್‌ನ ವಂದನಾ ನಿರ್ಣಯ ಮಂಡಿಸಿದ ಪೊನ್ನಣ್ಣ ಮತ್ತು ಪ್ರದೀಪ್ ಈಶ್ವರ್ ಅವರು ಅನುಮೋದನೆ ಮಾಡಿದ್ದಾರೆ. ಸುಮಾರು 9 ಜನ ಮಾತನಾಡಿದ್ದು, ಜೆಡಿಎಸ್‌ನಿಂದ ಸುರೇಶ್ ಬಾಬುರವರು ಮತ್ತು ಪಕ್ಷೇತರರಲ್ಲಿ ಇಬ್ಬರು ಸೇರಿದಂತೆ ಒಟ್ಟು 27 ಜನ ಮಾತನಾಡಿದ್ದಾರೆ. ಕಾಂಗ್ರೆಸ್ 5 ಗಂಟೆ 18 ನಿಮಿಷ, ಬಿಜೆಪಿಯವರು 8 ಗಂಟೆ 53 ನಿಮಿಷ , ಜೆಡಿಎಸ್‌ನವರು 12 ನಿಮಿಷ ಮತ್ತು ಪಕ್ಷೇತರರು 54 ನಿಮಿಷ ಮಾತನಾಡಿದ್ದು, ಹೀಗೆ ಒಟ್ಟು 15 ಗಂಟೆ 17 ನಿಮಿಷ ಚರ್ಚೆ ನಡೆದಿದೆ ಎಂದು ತಿಳಿಸಿದರು.

ರಾಜ್ಯಪಾಲರು ಪೂರ್ಣ ಭಾಷಣವನ್ನು ಓದದೇ, ಮೊದಲನೇ ಹಾಗೂ ಕಡೆಯ ಜೈಹಿಂದ್, ಜೈಕರ್ನಾಟಕ ಎಂದು ಓದಿದರು. ಭಾಷಣದಲ್ಲಿ ಬರೆದುಕೊಡಲಾಗಿದ್ದ ‘ಜೈಸಂವಿಧಾನ’ವನ್ನು ಹೇಳಿಲ್ಲ. ರಾಷ್ಟ್ರಗೀತೆ ಮುಗಿದ ಬಳಿಕ ರಾಜ್ಯಪಾಲರು ತೆರಳಬಹುದಿತ್ತು. ಈ ಬಗ್ಗೆ ಸಂವಿಧಾನದ ಕಲಂ 176 , 163 ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ ಎಂದರು.

ಶಾಸಕ ಸುನಿಲ್ ಕುಮಾರ್ ಅವರು ‘ಸರ್ಕಾರ ಆಡಳಿತ ಹದಗೆಟ್ಟಿದೆ ಮತ್ತು ಸಂವಿಧಾನರಹಿತ ಸರ್ಕಾರ’ , ‘ಅಸಹಾಯಕ ಮುಖ್ಯಮಂತ್ರಿ’ ಎಂದಿದ್ದಾರೆ. ಕೆಲವೊಮ್ಮ ಅಸತ್ಯದ ಎದುರು ಸತ್ಯ ಅಸಹಾಯಕವಾಗುತ್ತದೆ. ಜನರು ನಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ. ವಿರೋಧಪಕ್ಷದವರ ಮತ್ತು ಸರ್ಕಾರದವರ ಸಿದ್ಧಾಂತಗಳು ವಿಭಿನ್ನವಾಗಿರುತ್ತವೆ. ನಾವಿಬ್ಬರೂ ಪರಸ್ಪರ ಒಪ್ಪಲೇಬೇಕೆಂಬ ಷರತ್ತಿಲ್ಲ. ಆದರೆ ನಾವೆಲ್ಲರೂ ಸಂವಿಧಾನ ಒಪ್ಪಲೇಬೇಕು. ಸಂವಿಧಾನಬದ್ಧವಾಗಿ ಸರ್ಕಾರ, ಆಡಳಿತ ನಡೆಯಲೇಬೇಕು. ಸಂವಿಧಾನವನ್ನು ಯಾವುದೇ ಕಾರಣಕ್ಕೂ ವಿರೋಧಿಸಬಾರದು. ರಾಜ್ಯಪಾಲರು ಮೂಲತ: ಉತ್ತಮ ವ್ಯಕ್ತಿಯೇ. ನಾವು ರಾಜ್ಯಪಾಲರ ವಿರುದ್ಧವಿಲ್ಲ. ಆದರೆ ಕೇಂದ್ರ ಸರ್ಕಾರಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದರು.

ಭಾಷಣದಲ್ಲಿ ಮನರೇಗಾ ರದ್ದುಪಡಿಸಿ ವಿಬಿ-ಜಿರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ)ವನ್ನು ಕೇಂದ್ರ ಜಾರಿಗೊಳಿಸಿದೆ. ಅದರಲ್ಲಿ ‘ಗ್ರಾಮ’ ಎನ್ನುವ ಪದವೂ ಇಲ್ಲ. ಈ ಕಾಯ್ದೆ ಜಾರಿಗೆ ಮುನ್ನ 176 ಕಲಂ ಅನ್ನು ಕೇಂದ್ರ ವಿಶ್ಲೇಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...