Homeಕರ್ನಾಟಕರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

- Advertisement -
- Advertisement -

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ ಎಂದು ಎದ್ದೇಳು ಕರ್ನಾಟಕ ಸಂಘಟನೆ ಕಿಡಿಕಾರಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು (ಆ.22) ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸಂಘಟನೆಯ ಪ್ರಮುಖರು,”ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ರಾಜ್ಯ ವಿರೋಧಿ ಹಾಗೂ ಜನ ವಿರೋಧಿ ನಡೆ ಖಂಡನೀಯ. ಕಾಂಗ್ರೆಸ್‌ ಪಕ್ಷ ತನ್ನ ಮಂಪರಿನಿಂದ ಹೊರಬರಬೇಕು. ದೇಶ ಒಡೆಯುವ ಶಕ್ತಿಗಳ ವಿರುದ್ದ ಕಠಿಣ ಕ್ರಮಗಳಿಗೆ ಮುಂದಾಗಬೇಕು. ಜನಪರ ಆಡಳಿತ ನೀಡುವ ಮೂಲಕ ಅವರ ಸಂಚುಗಳನ್ನು ವಿಫಲಗೊಳಿಸಬೇಕು” ಎಂದರು.

ನ್ಯಾಯಾಲಯವು ರಾಜ್ಯಪಾಲರ ಕೀಳುಮಟ್ಟದ ರಾಜಕೀಯ ನಡೆಯನ್ನು ತಿರಸ್ಕರಿಸುವ ಮೂಲಕ ದೇಶದ ಸಂವಿಧಾನಿಕ ಮೌಲ್ಯಗಳ ಘನತೆಯನ್ನು ಕಾಪಾಡಬೇಕು. ರಾಜ್ಯ ಸರ್ಕಾರ ಜನಪರ ದಿಕ್ಕಿನಲ್ಲಿ ಸಾಗುವಂತೆ ನೋಡಿಕೊಳ್ಳುವುದು ವಿರೋಧ ಪಕ್ಷಗಳ ಜವಾಬ್ದಾರಿ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಕಳೆದ 15 ತಿಂಗಳಲ್ಲಿ ಜನರ ಬದುಕಿನ ಒಂದೇ ಒಂದು ಸಮಸ್ಯೆಯನ್ನು ಕೈಗೆತ್ತಿಕೊಂಡು ವಿಧಾನಸಭೆಯಲ್ಲಿ ಗಟ್ಟಿ ದನಿ ಎತ್ತಿಲ್ಲ ಅಥವಾ ಬೀದಿಗಿಳಿದು ಹೋರಾಟ ನಡೆಸಿಲ್ಲ. ಅದು ಮಾಡುತ್ತಿರುವ ಏಕೈಕ ಕೆಲಸವೆಂದರೆ ಜನರು ಆಯ್ಕೆ ಮಾಡಿರುವ ಸಂವಿಧಾನಿಕ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುವುದು. ಇದು ರಾಜ್ಯದ್ರೋಹಿ ಹಾಗೂ ಜನ ವಿರೋಧಿ ಕೆಲಸವಾಗಿದೆ ಎಂದು ಆರೋಪಿಸಿದರು.

ಭ್ರಷ್ಟ ಹಾಗೂ ದುಷ್ಟ ಶಕ್ತಿಗಳಿಗೆ ಆಶ್ರಯತಾಣವಾಗಿರುವ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ ವಿಚಾರವಾಗಿದೆ. ಸಿಬಿಐ, ಇಡಿ, ಐಟಿಗಳಂತಹ ಸಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುವುದು, ಆಪರೇಷನ್‌ ಕಮಲ ಮಾಡಿ ಜನರು ಆಯ್ಕೆ ಮಾಡಿದ ಸರ್ಕಾರಗಳನ್ನು ಕೆಡವುದು ಅದರ ಹವ್ಯಾಸವಾಗಿಬಿಟ್ಟಿದೆ. ಇಲ್ಲಿ ಈ ಬಾರಿ ರಾಜ್ಯಪಾಲರನ್ನು ಬಳಸಿಕೊಂಡು ಜನರು ಆರಿಸಿದ ಸರ್ಕಾರವನ್ನು ಕೆಡವುವ ಪ್ರಯತ್ನದಲ್ಲಿ ತೊಡಗಿದೆ ಎಂದು ಹೇಳಿದರು.

ಅವಕಾಶವಾದವನ್ನು ಅರೆದು ಕುಡಿದಿರುವ ಜೆಡಿಎಸ್‌ ಆತ್ಮವಂಚನೆ ಮಾಡಿಕೊಳ್ಳುತ್ತಾ ಬಿಜೆಪಿಯ ದುಷ್ಟ ರಾಜಕಾರಣಕ್ಕೆ ವೇದಿಕೆಯನ್ನು ಒದಗಿಸುತ್ತಿದೆ. ಈ ಎರಡು ಪಕ್ಷಗಳ ಕಪಟ ರಾಜಕಾರಣವನ್ನು ನಾವು ತೀವ್ರ ರೀತಿಯಲ್ಲಿ ಖಂಡಿಸುತ್ತೇವೆ. ಈ ನಡತೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಈ ಕೂಡಲೇ ತಿದ್ದಿಕೊಳ್ಳದಿದ್ದಲ್ಲಿ ರಾಜ್ಯದ ಜನತೆಯಿಂದ ಇನ್ನೂ ತೀವ್ರ ಸ್ವರೂಪದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಾವು ಕಾಂಗ್ರೆಸ್‌ ಪಕ್ಷದ ಆಡಳಿತದಿಂದ ಸಂತುಷ್ಟರಾಗಿದ್ದೇವೆ ಎಂದಲ್ಲ. 2023ರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡುವುದರಲ್ಲಿ ನಾಗರಿಕ ಸಂಘಟನೆಗಳ ದೊಡ್ಡ ಪಾತ್ರವಿದೆ. ನಮ್ಮೆಲ್ಲರ ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್‌ ಆಡಳಿತ ನೀಡುತ್ತಿಲ್ಲ ಎಂಬ ಪ್ರಜ್ಞೆ ನಮಗಿದೆ. ಸೂಕ್ತ ಸಂದರ್ಭದಲ್ಲಿ ನಾವದನ್ನು ಮುಂದಿಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದ ಗಮನಕ್ಕೆ ಒಂದು ಮುಖ್ಯ ವಿಚಾರ ತರಲೇಬೇಕಿದೆ. ಬಿಜೆಪಿ ಮತ್ತು ಸಂಘಪರಿವಾರದ ಶಕ್ತಿಗಳ ಬಗೆಗಿನ ನಿಮ್ಮ ಮೃದು ಧೋರಣೆಯನ್ನು ಈಗಲಾದರೂ ಕೈಬಿಡಿ. ನಿಮ್ಮ ಪಕ್ಷದ ಹಲವು ಸ್ತರಗಳಲ್ಲಿ ಬಲಪಂಥೀಯ ಶಕ್ತಿಗಳ ಜೊತೆ ಮುಂದುವರೆಸಿಕೊಂಡು ಬರುತ್ತಿರುವ ಒಳ ಸಂಬಂಧಗಳನ್ನು, ಒಳ ಒಪ್ಪಂದಗಳನ್ನು ಈಗಲಾದರೂ ತುಂಡರಿಸಿಕೊಳ್ಳಿ. ಸಂವಿಧಾನಿಕ ಆಶಯಗಳ ಜೊತೆ ದೃಢವಾಗಿ ನಿಲ್ಲಿ. ದೇಶ ಒಡೆಯುವ ಶಕ್ತಿಗಳ ಮೇಲೆ ಕಠಿಣ ಕ್ರಮಗಳಿಗೆ ಮುಂದಾಗಿ. ನಿಜವಾಗಿಯೂ ನೀವು ಬಿಜೆಪಿಗಿಂತ ಭಿನ್ನ ಎಂಬುವುದನ್ನು ಸಾಬೀತುಪಡಿಸುವಂತಹ ಜನಪರ ನಡತೆಗಳ ಮೂಲಕ ಆ ಶಕ್ತಿಗಳಿಗೆ ಈ ರಾಜ್ಯದಲ್ಲಿ ಜಾಗವಿಲ್ಲದಂತೆ ಮಾಡಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...