Homeಕರ್ನಾಟಕರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

- Advertisement -
- Advertisement -

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ ಎಂದು ಎದ್ದೇಳು ಕರ್ನಾಟಕ ಸಂಘಟನೆ ಕಿಡಿಕಾರಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು (ಆ.22) ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸಂಘಟನೆಯ ಪ್ರಮುಖರು,”ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ರಾಜ್ಯ ವಿರೋಧಿ ಹಾಗೂ ಜನ ವಿರೋಧಿ ನಡೆ ಖಂಡನೀಯ. ಕಾಂಗ್ರೆಸ್‌ ಪಕ್ಷ ತನ್ನ ಮಂಪರಿನಿಂದ ಹೊರಬರಬೇಕು. ದೇಶ ಒಡೆಯುವ ಶಕ್ತಿಗಳ ವಿರುದ್ದ ಕಠಿಣ ಕ್ರಮಗಳಿಗೆ ಮುಂದಾಗಬೇಕು. ಜನಪರ ಆಡಳಿತ ನೀಡುವ ಮೂಲಕ ಅವರ ಸಂಚುಗಳನ್ನು ವಿಫಲಗೊಳಿಸಬೇಕು” ಎಂದರು.

ನ್ಯಾಯಾಲಯವು ರಾಜ್ಯಪಾಲರ ಕೀಳುಮಟ್ಟದ ರಾಜಕೀಯ ನಡೆಯನ್ನು ತಿರಸ್ಕರಿಸುವ ಮೂಲಕ ದೇಶದ ಸಂವಿಧಾನಿಕ ಮೌಲ್ಯಗಳ ಘನತೆಯನ್ನು ಕಾಪಾಡಬೇಕು. ರಾಜ್ಯ ಸರ್ಕಾರ ಜನಪರ ದಿಕ್ಕಿನಲ್ಲಿ ಸಾಗುವಂತೆ ನೋಡಿಕೊಳ್ಳುವುದು ವಿರೋಧ ಪಕ್ಷಗಳ ಜವಾಬ್ದಾರಿ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಕಳೆದ 15 ತಿಂಗಳಲ್ಲಿ ಜನರ ಬದುಕಿನ ಒಂದೇ ಒಂದು ಸಮಸ್ಯೆಯನ್ನು ಕೈಗೆತ್ತಿಕೊಂಡು ವಿಧಾನಸಭೆಯಲ್ಲಿ ಗಟ್ಟಿ ದನಿ ಎತ್ತಿಲ್ಲ ಅಥವಾ ಬೀದಿಗಿಳಿದು ಹೋರಾಟ ನಡೆಸಿಲ್ಲ. ಅದು ಮಾಡುತ್ತಿರುವ ಏಕೈಕ ಕೆಲಸವೆಂದರೆ ಜನರು ಆಯ್ಕೆ ಮಾಡಿರುವ ಸಂವಿಧಾನಿಕ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುವುದು. ಇದು ರಾಜ್ಯದ್ರೋಹಿ ಹಾಗೂ ಜನ ವಿರೋಧಿ ಕೆಲಸವಾಗಿದೆ ಎಂದು ಆರೋಪಿಸಿದರು.

ಭ್ರಷ್ಟ ಹಾಗೂ ದುಷ್ಟ ಶಕ್ತಿಗಳಿಗೆ ಆಶ್ರಯತಾಣವಾಗಿರುವ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ ವಿಚಾರವಾಗಿದೆ. ಸಿಬಿಐ, ಇಡಿ, ಐಟಿಗಳಂತಹ ಸಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುವುದು, ಆಪರೇಷನ್‌ ಕಮಲ ಮಾಡಿ ಜನರು ಆಯ್ಕೆ ಮಾಡಿದ ಸರ್ಕಾರಗಳನ್ನು ಕೆಡವುದು ಅದರ ಹವ್ಯಾಸವಾಗಿಬಿಟ್ಟಿದೆ. ಇಲ್ಲಿ ಈ ಬಾರಿ ರಾಜ್ಯಪಾಲರನ್ನು ಬಳಸಿಕೊಂಡು ಜನರು ಆರಿಸಿದ ಸರ್ಕಾರವನ್ನು ಕೆಡವುವ ಪ್ರಯತ್ನದಲ್ಲಿ ತೊಡಗಿದೆ ಎಂದು ಹೇಳಿದರು.

ಅವಕಾಶವಾದವನ್ನು ಅರೆದು ಕುಡಿದಿರುವ ಜೆಡಿಎಸ್‌ ಆತ್ಮವಂಚನೆ ಮಾಡಿಕೊಳ್ಳುತ್ತಾ ಬಿಜೆಪಿಯ ದುಷ್ಟ ರಾಜಕಾರಣಕ್ಕೆ ವೇದಿಕೆಯನ್ನು ಒದಗಿಸುತ್ತಿದೆ. ಈ ಎರಡು ಪಕ್ಷಗಳ ಕಪಟ ರಾಜಕಾರಣವನ್ನು ನಾವು ತೀವ್ರ ರೀತಿಯಲ್ಲಿ ಖಂಡಿಸುತ್ತೇವೆ. ಈ ನಡತೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಈ ಕೂಡಲೇ ತಿದ್ದಿಕೊಳ್ಳದಿದ್ದಲ್ಲಿ ರಾಜ್ಯದ ಜನತೆಯಿಂದ ಇನ್ನೂ ತೀವ್ರ ಸ್ವರೂಪದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಾವು ಕಾಂಗ್ರೆಸ್‌ ಪಕ್ಷದ ಆಡಳಿತದಿಂದ ಸಂತುಷ್ಟರಾಗಿದ್ದೇವೆ ಎಂದಲ್ಲ. 2023ರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡುವುದರಲ್ಲಿ ನಾಗರಿಕ ಸಂಘಟನೆಗಳ ದೊಡ್ಡ ಪಾತ್ರವಿದೆ. ನಮ್ಮೆಲ್ಲರ ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್‌ ಆಡಳಿತ ನೀಡುತ್ತಿಲ್ಲ ಎಂಬ ಪ್ರಜ್ಞೆ ನಮಗಿದೆ. ಸೂಕ್ತ ಸಂದರ್ಭದಲ್ಲಿ ನಾವದನ್ನು ಮುಂದಿಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದ ಗಮನಕ್ಕೆ ಒಂದು ಮುಖ್ಯ ವಿಚಾರ ತರಲೇಬೇಕಿದೆ. ಬಿಜೆಪಿ ಮತ್ತು ಸಂಘಪರಿವಾರದ ಶಕ್ತಿಗಳ ಬಗೆಗಿನ ನಿಮ್ಮ ಮೃದು ಧೋರಣೆಯನ್ನು ಈಗಲಾದರೂ ಕೈಬಿಡಿ. ನಿಮ್ಮ ಪಕ್ಷದ ಹಲವು ಸ್ತರಗಳಲ್ಲಿ ಬಲಪಂಥೀಯ ಶಕ್ತಿಗಳ ಜೊತೆ ಮುಂದುವರೆಸಿಕೊಂಡು ಬರುತ್ತಿರುವ ಒಳ ಸಂಬಂಧಗಳನ್ನು, ಒಳ ಒಪ್ಪಂದಗಳನ್ನು ಈಗಲಾದರೂ ತುಂಡರಿಸಿಕೊಳ್ಳಿ. ಸಂವಿಧಾನಿಕ ಆಶಯಗಳ ಜೊತೆ ದೃಢವಾಗಿ ನಿಲ್ಲಿ. ದೇಶ ಒಡೆಯುವ ಶಕ್ತಿಗಳ ಮೇಲೆ ಕಠಿಣ ಕ್ರಮಗಳಿಗೆ ಮುಂದಾಗಿ. ನಿಜವಾಗಿಯೂ ನೀವು ಬಿಜೆಪಿಗಿಂತ ಭಿನ್ನ ಎಂಬುವುದನ್ನು ಸಾಬೀತುಪಡಿಸುವಂತಹ ಜನಪರ ನಡತೆಗಳ ಮೂಲಕ ಆ ಶಕ್ತಿಗಳಿಗೆ ಈ ರಾಜ್ಯದಲ್ಲಿ ಜಾಗವಿಲ್ಲದಂತೆ ಮಾಡಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...