Homeಮುಖಪುಟಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ 'ವೀಟೋ ಅಧಿಕಾರ' ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

- Advertisement -
- Advertisement -

ಚರ್ಚೆಗಳು ನಡೆದ ಬಳಿಕವೂ ಮಸೂದೆಯನ್ನು ತಡೆ ಹಿಡಿಯಲು ರಾಜ್ಯಪಾಲರು ಮುಂದಾದರೆ ಆ ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸಚಿವ ಸಂಪುಟ ಅವರನ್ನು ಒತ್ತಾಯಿಸಬಹುದು ಎಂದು ಕೇರಳ ಸರ್ಕಾರ ಮಂಗಳವಾರ (ಸೆ.9) ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಇದಕ್ಕೆ ಕರ್ನಾಟಕ ದನಿಗೂಡಿಸಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಡಿದ ಶಿಫಾರಸ್ಸನ್ನು ಆಲಿಸುವ ವೇಳೆ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ , ವಿಕ್ರಮ್ ನಾಥ್ , ಪಿ ಎಸ್ ನರಸಿಂಹ ಹಾಗೂ ಅತುಲ್ ಎಸ್ ಚಂದೂರ್ಕರ್ ಅವರಿದ್ದ ಸಾಂವಿಧಾನಿಕ ಪೀಠದೆದುರು ಕೇರಳ ವಾದ ಮಂಡಿಸಿದೆ.

ಕೇರಳ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಕೆ ವೇಣುಗೋಪಾಲ್ ಅವರು, ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಚರ್ಚೆಗಳ ನಂತರವೂ ಯಾವುದೇ ಒಮ್ಮತ ಏರ್ಪಡದಿದ್ದರೆ ಮತ್ತು ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯಲು ಉದ್ದೇಶಿಸಿದರೆ, ಸಚಿವ ಸಂಪುಟ ತಕ್ಷಣವೇ 163ನೇ ವಿಧಿಯಡಿ ಒಪ್ಪಿಗೆ ನೀಡುವಂತೆ ಸಲಹೆ ನೀಡಬಹುದು ಎಂದು ಹೇಳಿದರು.

“ರಾಜ್ಯಪಾಲರಿಗೆ ವಿಧಿ 163ರ ಅಡಿ ಅಂಕಿತವನ್ನು ನೀಡುವುದರ ಹೊರತಾದ ಯಾವುದೇ ಆಯ್ಕೆಗಳಿಲ್ಲ. ನನ್ನ ದೃಷ್ಟಿಕೋನದಲ್ಲಿ ಹೇಳಬೇಕೆಂದರೆ, ಶಾಸನಸಭೆಯಲ್ಲಿ ಮಸೂದೆಯು ಅಂಗೀಕಾರಗೊಂಡ ಬೆನ್ನಿಗೇ, ಚರ್ಚೆಗೆ ಆಸ್ಪದವನ್ನೂ ನೀಡದೆ ಮಂತ್ರಿಪರಿಷತ್ತು163ನೇ ವಿಧಿಯನ್ನು ಬಳಸುವ ಮೂಲಕ ಅಂಕಿತ ಹಾಕುವಂತೆ ರಾಜ್ಯಪಾಲರನ್ನು ಒತ್ತಾಯಿಸುವುದು ಸೂಕ್ತವಲ್ಲವೇನೋ. ರಾಜ್ಯಪಾಲರನ್ನು ಹಾಗೆ ಒತ್ತಾಯಿಸುವುದು… ರಾಜ್ಯದ ಮುಖ್ಯಸ್ಥರಾಗಿ ಅವರು ಹೊಂದಿರುವ ಉನ್ನತ ಸ್ಥಾನಕ್ಕೆ ತಕ್ಕುದಾದುದಲ್ಲ,” ಎಂದು ಅವರು ವಿವರಿಸಿದ್ದಾರೆ. ಆ ಮೂಲಕ 163ರ ಅಡಿ ರಾಜ್ಯಪಾಲರಿಗೆ ಅಂಕಿತ ಹಾಕುವುದರ ಹೊರತಾದ ಆಯ್ಕೆಗಳಿಲ್ಲ ಎನ್ನುವುದನ್ನು ಸ್ಪಷ್ಪಪಡಿಸುವುದರ ಜೊತೆಗೇ, ಸಾಂವಿಧಾನಿಕ ಔಪಚಾರಿಕತೆಯ ಬಗ್ಗೆಯೇ ತಿಳಿಸಿದ್ದಾರೆ.

ಹಣಕಾಸು ಮಸೂದೆಗೆ ಒಪ್ಪಿಗೆ ನೀಡದೆ ಇರುವ ಅಧಿಕಾರ ರಾಜ್ಯಪಾಲರಿಗೆ ಇದೆ ಎಂಬ ಪ್ರಶ್ನೆಯೇ ಇಲ್ಲ ಇದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ ಅವರು ಕೂಡ ವೇಣುಗೋಪಾಲ್ ಅವರ ವಾದಕ್ಕೆ ದನಿಗೂಡಿಸಿದ್ದಾರೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆ ಮೇಲೆ ರಾಜ್ಯಪಾಲರಿಗೆ ವೀಟೋ ಅಧಿಕಾರ ಇಲ್ಲ ಎಂದಿದ್ದಾರೆ.

ರಾಜ್ಯಪಾಲರಿಗೆ ತಕ್ಕುದಲ್ಲದ ವಿಟೋ ಅಧಿಕಾರ  ನೀಡುವಂತೆ ಮಾಡುವ ಯಾವುದೇ ವ್ಯಾಖ್ಯಾನ ಚುನಾಯಿತ ರಾಜ್ಯ ಶಾಸಕಾಂಗಗಳ ಅಸ್ತಿತ್ವಕ್ಕೆ ವಿರುದ್ಧ ಎಂದು ಹೇಳಿದ್ದಾರೆ.

ರಾಜ್ಯಪಾಲರು ಮಸೂದೆಯನ್ನು ಸಚಿವ ಸಂಪುಟದ ಸಲಹೆಯ ಮೇರೆಗೆ ಶಾಸನಸಭೆಗೆ ಹಿಂದಿರುಗಿಸಲು ಮಾತ್ರ ಅಧಿಕಾರ ಹೊಂದಿದ್ದು, ಮರುಪಾಸಾದ ನಂತರ ಅನಿವಾರ್ಯವಾಗಿ ಅನುಮೋದಿಸಬೇಕು ಎಂದು ಸುಬ್ರಮಣಿಯಂ ವಾದಿಸಿದ್ದಾರೆ.

ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರವಿಂದ್ ದಾತಾರ್ ಕೂಡ ರಾಜ್ಯಪಾಲರಿಗೆ 200ನೇ ವಿಧಿಯ ಅಡಿಯಲ್ಲಿ ಮಸೂದೆ ತಡೆಯುವ ಯಾವುದೇ ವಿವೇಚನಾಧಿಕಾರ ಇಲ್ಲ ಎಂದಿದ್ದಾರೆ.

ಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...