Homeಮುಖಪುಟಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ 'ವೀಟೋ ಅಧಿಕಾರ' ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

- Advertisement -
- Advertisement -

ಚರ್ಚೆಗಳು ನಡೆದ ಬಳಿಕವೂ ಮಸೂದೆಯನ್ನು ತಡೆ ಹಿಡಿಯಲು ರಾಜ್ಯಪಾಲರು ಮುಂದಾದರೆ ಆ ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸಚಿವ ಸಂಪುಟ ಅವರನ್ನು ಒತ್ತಾಯಿಸಬಹುದು ಎಂದು ಕೇರಳ ಸರ್ಕಾರ ಮಂಗಳವಾರ (ಸೆ.9) ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಇದಕ್ಕೆ ಕರ್ನಾಟಕ ದನಿಗೂಡಿಸಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಡಿದ ಶಿಫಾರಸ್ಸನ್ನು ಆಲಿಸುವ ವೇಳೆ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ , ವಿಕ್ರಮ್ ನಾಥ್ , ಪಿ ಎಸ್ ನರಸಿಂಹ ಹಾಗೂ ಅತುಲ್ ಎಸ್ ಚಂದೂರ್ಕರ್ ಅವರಿದ್ದ ಸಾಂವಿಧಾನಿಕ ಪೀಠದೆದುರು ಕೇರಳ ವಾದ ಮಂಡಿಸಿದೆ.

ಕೇರಳ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಕೆ ವೇಣುಗೋಪಾಲ್ ಅವರು, ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಚರ್ಚೆಗಳ ನಂತರವೂ ಯಾವುದೇ ಒಮ್ಮತ ಏರ್ಪಡದಿದ್ದರೆ ಮತ್ತು ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯಲು ಉದ್ದೇಶಿಸಿದರೆ, ಸಚಿವ ಸಂಪುಟ ತಕ್ಷಣವೇ 163ನೇ ವಿಧಿಯಡಿ ಒಪ್ಪಿಗೆ ನೀಡುವಂತೆ ಸಲಹೆ ನೀಡಬಹುದು ಎಂದು ಹೇಳಿದರು.

“ರಾಜ್ಯಪಾಲರಿಗೆ ವಿಧಿ 163ರ ಅಡಿ ಅಂಕಿತವನ್ನು ನೀಡುವುದರ ಹೊರತಾದ ಯಾವುದೇ ಆಯ್ಕೆಗಳಿಲ್ಲ. ನನ್ನ ದೃಷ್ಟಿಕೋನದಲ್ಲಿ ಹೇಳಬೇಕೆಂದರೆ, ಶಾಸನಸಭೆಯಲ್ಲಿ ಮಸೂದೆಯು ಅಂಗೀಕಾರಗೊಂಡ ಬೆನ್ನಿಗೇ, ಚರ್ಚೆಗೆ ಆಸ್ಪದವನ್ನೂ ನೀಡದೆ ಮಂತ್ರಿಪರಿಷತ್ತು163ನೇ ವಿಧಿಯನ್ನು ಬಳಸುವ ಮೂಲಕ ಅಂಕಿತ ಹಾಕುವಂತೆ ರಾಜ್ಯಪಾಲರನ್ನು ಒತ್ತಾಯಿಸುವುದು ಸೂಕ್ತವಲ್ಲವೇನೋ. ರಾಜ್ಯಪಾಲರನ್ನು ಹಾಗೆ ಒತ್ತಾಯಿಸುವುದು… ರಾಜ್ಯದ ಮುಖ್ಯಸ್ಥರಾಗಿ ಅವರು ಹೊಂದಿರುವ ಉನ್ನತ ಸ್ಥಾನಕ್ಕೆ ತಕ್ಕುದಾದುದಲ್ಲ,” ಎಂದು ಅವರು ವಿವರಿಸಿದ್ದಾರೆ. ಆ ಮೂಲಕ 163ರ ಅಡಿ ರಾಜ್ಯಪಾಲರಿಗೆ ಅಂಕಿತ ಹಾಕುವುದರ ಹೊರತಾದ ಆಯ್ಕೆಗಳಿಲ್ಲ ಎನ್ನುವುದನ್ನು ಸ್ಪಷ್ಪಪಡಿಸುವುದರ ಜೊತೆಗೇ, ಸಾಂವಿಧಾನಿಕ ಔಪಚಾರಿಕತೆಯ ಬಗ್ಗೆಯೇ ತಿಳಿಸಿದ್ದಾರೆ.

ಹಣಕಾಸು ಮಸೂದೆಗೆ ಒಪ್ಪಿಗೆ ನೀಡದೆ ಇರುವ ಅಧಿಕಾರ ರಾಜ್ಯಪಾಲರಿಗೆ ಇದೆ ಎಂಬ ಪ್ರಶ್ನೆಯೇ ಇಲ್ಲ ಇದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ ಅವರು ಕೂಡ ವೇಣುಗೋಪಾಲ್ ಅವರ ವಾದಕ್ಕೆ ದನಿಗೂಡಿಸಿದ್ದಾರೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆ ಮೇಲೆ ರಾಜ್ಯಪಾಲರಿಗೆ ವೀಟೋ ಅಧಿಕಾರ ಇಲ್ಲ ಎಂದಿದ್ದಾರೆ.

ರಾಜ್ಯಪಾಲರಿಗೆ ತಕ್ಕುದಲ್ಲದ ವಿಟೋ ಅಧಿಕಾರ  ನೀಡುವಂತೆ ಮಾಡುವ ಯಾವುದೇ ವ್ಯಾಖ್ಯಾನ ಚುನಾಯಿತ ರಾಜ್ಯ ಶಾಸಕಾಂಗಗಳ ಅಸ್ತಿತ್ವಕ್ಕೆ ವಿರುದ್ಧ ಎಂದು ಹೇಳಿದ್ದಾರೆ.

ರಾಜ್ಯಪಾಲರು ಮಸೂದೆಯನ್ನು ಸಚಿವ ಸಂಪುಟದ ಸಲಹೆಯ ಮೇರೆಗೆ ಶಾಸನಸಭೆಗೆ ಹಿಂದಿರುಗಿಸಲು ಮಾತ್ರ ಅಧಿಕಾರ ಹೊಂದಿದ್ದು, ಮರುಪಾಸಾದ ನಂತರ ಅನಿವಾರ್ಯವಾಗಿ ಅನುಮೋದಿಸಬೇಕು ಎಂದು ಸುಬ್ರಮಣಿಯಂ ವಾದಿಸಿದ್ದಾರೆ.

ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರವಿಂದ್ ದಾತಾರ್ ಕೂಡ ರಾಜ್ಯಪಾಲರಿಗೆ 200ನೇ ವಿಧಿಯ ಅಡಿಯಲ್ಲಿ ಮಸೂದೆ ತಡೆಯುವ ಯಾವುದೇ ವಿವೇಚನಾಧಿಕಾರ ಇಲ್ಲ ಎಂದಿದ್ದಾರೆ.

ಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...