Homeಮುಖಪುಟಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ 'ವೀಟೋ ಅಧಿಕಾರ' ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

- Advertisement -
- Advertisement -

ಚರ್ಚೆಗಳು ನಡೆದ ಬಳಿಕವೂ ಮಸೂದೆಯನ್ನು ತಡೆ ಹಿಡಿಯಲು ರಾಜ್ಯಪಾಲರು ಮುಂದಾದರೆ ಆ ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸಚಿವ ಸಂಪುಟ ಅವರನ್ನು ಒತ್ತಾಯಿಸಬಹುದು ಎಂದು ಕೇರಳ ಸರ್ಕಾರ ಮಂಗಳವಾರ (ಸೆ.9) ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಇದಕ್ಕೆ ಕರ್ನಾಟಕ ದನಿಗೂಡಿಸಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಡಿದ ಶಿಫಾರಸ್ಸನ್ನು ಆಲಿಸುವ ವೇಳೆ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ , ವಿಕ್ರಮ್ ನಾಥ್ , ಪಿ ಎಸ್ ನರಸಿಂಹ ಹಾಗೂ ಅತುಲ್ ಎಸ್ ಚಂದೂರ್ಕರ್ ಅವರಿದ್ದ ಸಾಂವಿಧಾನಿಕ ಪೀಠದೆದುರು ಕೇರಳ ವಾದ ಮಂಡಿಸಿದೆ.

ಕೇರಳ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಕೆ ವೇಣುಗೋಪಾಲ್ ಅವರು, ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಚರ್ಚೆಗಳ ನಂತರವೂ ಯಾವುದೇ ಒಮ್ಮತ ಏರ್ಪಡದಿದ್ದರೆ ಮತ್ತು ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯಲು ಉದ್ದೇಶಿಸಿದರೆ, ಸಚಿವ ಸಂಪುಟ ತಕ್ಷಣವೇ 163ನೇ ವಿಧಿಯಡಿ ಒಪ್ಪಿಗೆ ನೀಡುವಂತೆ ಸಲಹೆ ನೀಡಬಹುದು ಎಂದು ಹೇಳಿದರು.

“ರಾಜ್ಯಪಾಲರಿಗೆ ವಿಧಿ 163ರ ಅಡಿ ಅಂಕಿತವನ್ನು ನೀಡುವುದರ ಹೊರತಾದ ಯಾವುದೇ ಆಯ್ಕೆಗಳಿಲ್ಲ. ನನ್ನ ದೃಷ್ಟಿಕೋನದಲ್ಲಿ ಹೇಳಬೇಕೆಂದರೆ, ಶಾಸನಸಭೆಯಲ್ಲಿ ಮಸೂದೆಯು ಅಂಗೀಕಾರಗೊಂಡ ಬೆನ್ನಿಗೇ, ಚರ್ಚೆಗೆ ಆಸ್ಪದವನ್ನೂ ನೀಡದೆ ಮಂತ್ರಿಪರಿಷತ್ತು163ನೇ ವಿಧಿಯನ್ನು ಬಳಸುವ ಮೂಲಕ ಅಂಕಿತ ಹಾಕುವಂತೆ ರಾಜ್ಯಪಾಲರನ್ನು ಒತ್ತಾಯಿಸುವುದು ಸೂಕ್ತವಲ್ಲವೇನೋ. ರಾಜ್ಯಪಾಲರನ್ನು ಹಾಗೆ ಒತ್ತಾಯಿಸುವುದು… ರಾಜ್ಯದ ಮುಖ್ಯಸ್ಥರಾಗಿ ಅವರು ಹೊಂದಿರುವ ಉನ್ನತ ಸ್ಥಾನಕ್ಕೆ ತಕ್ಕುದಾದುದಲ್ಲ,” ಎಂದು ಅವರು ವಿವರಿಸಿದ್ದಾರೆ. ಆ ಮೂಲಕ 163ರ ಅಡಿ ರಾಜ್ಯಪಾಲರಿಗೆ ಅಂಕಿತ ಹಾಕುವುದರ ಹೊರತಾದ ಆಯ್ಕೆಗಳಿಲ್ಲ ಎನ್ನುವುದನ್ನು ಸ್ಪಷ್ಪಪಡಿಸುವುದರ ಜೊತೆಗೇ, ಸಾಂವಿಧಾನಿಕ ಔಪಚಾರಿಕತೆಯ ಬಗ್ಗೆಯೇ ತಿಳಿಸಿದ್ದಾರೆ.

ಹಣಕಾಸು ಮಸೂದೆಗೆ ಒಪ್ಪಿಗೆ ನೀಡದೆ ಇರುವ ಅಧಿಕಾರ ರಾಜ್ಯಪಾಲರಿಗೆ ಇದೆ ಎಂಬ ಪ್ರಶ್ನೆಯೇ ಇಲ್ಲ ಇದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ ಅವರು ಕೂಡ ವೇಣುಗೋಪಾಲ್ ಅವರ ವಾದಕ್ಕೆ ದನಿಗೂಡಿಸಿದ್ದಾರೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆ ಮೇಲೆ ರಾಜ್ಯಪಾಲರಿಗೆ ವೀಟೋ ಅಧಿಕಾರ ಇಲ್ಲ ಎಂದಿದ್ದಾರೆ.

ರಾಜ್ಯಪಾಲರಿಗೆ ತಕ್ಕುದಲ್ಲದ ವಿಟೋ ಅಧಿಕಾರ  ನೀಡುವಂತೆ ಮಾಡುವ ಯಾವುದೇ ವ್ಯಾಖ್ಯಾನ ಚುನಾಯಿತ ರಾಜ್ಯ ಶಾಸಕಾಂಗಗಳ ಅಸ್ತಿತ್ವಕ್ಕೆ ವಿರುದ್ಧ ಎಂದು ಹೇಳಿದ್ದಾರೆ.

ರಾಜ್ಯಪಾಲರು ಮಸೂದೆಯನ್ನು ಸಚಿವ ಸಂಪುಟದ ಸಲಹೆಯ ಮೇರೆಗೆ ಶಾಸನಸಭೆಗೆ ಹಿಂದಿರುಗಿಸಲು ಮಾತ್ರ ಅಧಿಕಾರ ಹೊಂದಿದ್ದು, ಮರುಪಾಸಾದ ನಂತರ ಅನಿವಾರ್ಯವಾಗಿ ಅನುಮೋದಿಸಬೇಕು ಎಂದು ಸುಬ್ರಮಣಿಯಂ ವಾದಿಸಿದ್ದಾರೆ.

ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರವಿಂದ್ ದಾತಾರ್ ಕೂಡ ರಾಜ್ಯಪಾಲರಿಗೆ 200ನೇ ವಿಧಿಯ ಅಡಿಯಲ್ಲಿ ಮಸೂದೆ ತಡೆಯುವ ಯಾವುದೇ ವಿವೇಚನಾಧಿಕಾರ ಇಲ್ಲ ಎಂದಿದ್ದಾರೆ.

ಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...