Homeಮುಖಪುಟತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ...

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್‌.ಎನ್‌.ರವಿ

- Advertisement -
- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ರಾಜ್ಯಪಾಲ ಆರ್‌.ಎನ್‌ ರವಿ ಮತ್ತು ಸರ್ಕಾರದ ನಡುವೆ ಜಟಾಪಟಿ ನಡೆದಿದೆ. ಸತತ 3ನೇ ಬಾರಿಗೆ ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ಮಾಡಬೇಕಾದ ಸಾಂಪ್ರದಾಯಿಕ ಭಾಷಣ ಮಾಡದೆ ಮಂಗಳವಾರ (ಜ.20) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ಡಿಎಂಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ‘ತಪ್ಪುಗಳಿವೆ’ ಎಂದು ಆರೋಪಿಸಿ, ಅದನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದು, ವರ್ಷದ ಮೊದಲ ಅಧಿವೇಶನದ ಆರಂಭದಲ್ಲೇ ಗದ್ದಲ ಉಂಟಾಗಿದೆ.

ವರದಿಗಳ ಪ್ರಕಾರ, ಸದನಕ್ಕೆ ಪ್ರವೇಶಿಸಿದ ಕೂಡಲೇ, ರಾಷ್ಟ್ರಗೀತೆಗೆ ಸರಿಯಾದ ಗೌರವ ನೀಡಲಾಗಿಲ್ಲ ಎಂದು ರಾಜ್ಯಪಾಲ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನನಗೆ ನಿರಾಶೆಯಾಗಿದೆ. ರಾಷ್ಟ್ರಗೀತೆಯನ್ನು ಸರಿಯಾಗಿ ಗೌರವಿಸಬೇಕು” ಎಂದು ಹೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಅಪ್ಪಾವು ಅವರು, ರಾಜ್ಯ ಸರ್ಕಾರ ಸಿದ್ಧಪಡಿಸಿದ ಸಾಂಪ್ರದಾಯಿಕ ಭಾಷಣ ಓದುವುದಕ್ಕೆ ಮಾತ್ರ ರಾಜ್ಯಪಾಲರು ತಮ್ಮನ್ನು ಸೀಮಿತಗೊಳಿಸಬೇಕು. ಸದನದ ಸ್ಥಾಪಿತ ನಿಯಮಗಳು ಮತ್ತು ಸಂಪ್ರದಾಯಗಳನ್ನು ಅನುಸರಿಸಬೇಕು. ವಿಧಾನಸಭೆಯಲ್ಲಿ ಚುನಾಯಿತ ಸದಸ್ಯರು ಮಾತ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅನುಮತಿ ಇದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು, “ನನ್ನ ಭಾಷಣಕ್ಕೆ ಅಡ್ಡಿಪಡಿಸಲಾಗಿದೆ. ಮೈಕ್ರೊಫೋನ್ (ಮೈಕ್) ಸ್ವಿಚ್ ಆಫ್ ಮಾಡಲಾಗಿದೆ. ಇದರಿಂದ ನನಗೆ ಅವಮಾನವಾಗಿದೆ. ತಪ್ಪುಗಳಿಂದ ತುಂಬಿರುವ ಭಾಷಣವನ್ನು ನಾನು ಓದಲು ಸಾಧ್ಯವಿಲ್ಲ” ಎಂದು ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯಪಾಲರ ನಡೆಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಟೀಕಿಸಿದ್ದು, ರಾಜ್ಯಪಾಲರು ಸಂಪ್ರದಾಯ ಮತ್ತು ನಿಯಮಗಳನ್ನು ಉಲ್ಲಂಘಿಸಿ ಹೊರನಡೆದಿದ್ದಾರೆ ಎಂದಿದ್ದಾರೆ. ನಂತರ ಭಾಷಣದ ಇಂಗ್ಲಿಷ್ ಆವೃತ್ತಿಯನ್ನು ಓದಲಾಗಿದೆ ಎಂದು ಭಾವಿಸಲಾಗಿದೆ ಎಂದು ಹೇಳುವ ನಿರ್ಣಯವನ್ನು ಮಂಡಿಸಿದ್ದಾರೆ.

“ರಾಜ್ಯಪಾಲರು ಸಂಪ್ರದಾಯಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿ ಹೊರನಡೆದಿದ್ದಾರೆ. ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ, ರಾಜ್ಯಪಾಲರು ತಮ್ಮ ಅಭಿಪ್ರಾಯಗಳನ್ನು ಸೇರಿಸಲು ಅಥವಾ ಬೇರೆ ಏನನ್ನಾದರೂ ಹೇಳಲು ಯಾವುದೇ ಅವಕಾಶವಿಲ್ಲ” ಎಂದು ಸ್ಟಾಲಿನ್ ಹೇಳಿದ್ದಾರೆ.

ರಾಜ್ಯಪಾಲರ ರವಿ ಅವರು ಉದ್ದೇಶಪೂರ್ವಕವಾಗಿ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ನಡವಳಿಕೆ ಸದನವನ್ನು ಅವಮಾನಿಸಿದಂತೆ ಎಂದು ಸಿಎಂ ಸ್ಟಾಲಿನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ಅಗತ್ಯವಿಲ್ಲ ಎಂಬ ಆಡಳಿತಾರೂಢ ಡಿಎಂಕೆಯ ನಿಲುವನ್ನು ಸ್ಟಾಲಿನ್ ಪುನರುಚ್ಚರಿಸಿದ್ದು, ಈ ಹಿಂದಿನ ಮುಖ್ಯಮಂತ್ರಿಗಳಾದ ದಿವಂಗತ ಸಿಎನ್ ಅಣ್ಣಾದೊರೈ ಮತ್ತು ಎಂ ಕರುಣಾನಿಧಿ ಅವರು ರಾಜ್ಯಪಾಲರ ಸ್ಥಾನವನ್ನು ಗೌರವಿಸಿದ್ದರು. ಹಾಗಾಗಿ, ನಾವು ಅದನ್ನು ಅನುಸರಿಸುತ್ತಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...