Homeಮುಖಪುಟಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

- Advertisement -
- Advertisement -

ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಮಣಿಪುರ ಮತ್ತು ಹರಿಯಾಣದಲ್ಲಿ ಅವರ ಸಹವರ್ತಿಗಳು ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮೌನ ವಹಿಸುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ ಮತ್ತು ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಶುಕ್ರವಾರ ಭಗವಂತ್ ಮಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಪುರೋಹಿತ್ ತಮ್ಮ ಅಧಿಕಾರದ ವ್ಯಾಪ್ತಿಯ ಹೊರತಾದ ಏಳು ಪತ್ರಗಳಿಗೆ ನಾನು ಪ್ರತಿಕ್ರಿಯಿಸಲಿಲ್ಲ, ಇನ್ನುಳಿದ ಎಲ್ಲದಕ್ಕೂ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ಮಾನ್ ಹೇಳಿದ್ದಾರೆ.

“ರಾಜ್ಯಪಾಲರು ಪಂಜಾಬ್‌ನ ಶಾಂತಿಪ್ರಿಯ ಜನರ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇನೆ ಎನ್ನುವುದನ್ನು ನಾನು ಬೆದರಿಕೆ” ಎಂದು ಕರೆಯುತ್ತೇನೆ.

”ಅವರು 356ನೇ ವಿಧಿಯನ್ನು ಶಿಫಾರಸು ಮಾಡುತ್ತೇನೆ ಮತ್ತು ರಾಜ್ಯಪಾಲರ ಆಳ್ವಿಕೆಯನ್ನು ಶಿಫಾರಸು ಮಾಡುತ್ತೇನೆ ಎಂದು ಹೇಳಿದ್ದಾರೆ” ಎಂದು ಮಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

”ರಾಜ್ಯಪಾಲರು ನಮಗೆ 16 ಪತ್ರಗಳನ್ನು ಬರೆದಿದ್ದಾರೆ. ಅವುಗಳಲ್ಲಿ ಒಂಬತ್ತು ಪತ್ರಗಳಿಗೆ ಪ್ರತಿಕ್ರಿಯಿಸಲಾಗಿದೆ ಮತ್ತು ಉಳಿದವುಗಳಿಗೂ ವಿವರವಾದ ಉತ್ತರ ನೀಡುತ್ತೇವೆ. ರಾಜ್ಯಪಾಲರು ಆತುರದಿಂದ ಪತ್ರ ಬರೆದು ತಕ್ಷಣ ಉತ್ತರ ನಿರೀಕ್ಷಿಸುವುದು ಬೇಡ” ಎಂದರು.

”ನಮ್ಮ ಸರ್ಕಾರವು ಡ್ರಗ್ಸ್ ಹಾವಳಿಯನ್ನು ನಿಭಾಯಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಕಳ್ಳಸಾಗಣೆದಾರರ ಆಸ್ತಿಗಳನ್ನು ವಶಪಡಿಸಿಕೊಳ್ಳುವುದು, ದಾಳಿ ಮಾಡುವುದು ಮತ್ತು ದರೋಡೆಕೋರರ ವಿರುದ್ಧದ ಕಾರ್ಯಪಡೆಯ ರಚನೆಯೊಂದಿಗೆ ದರೋಡೆಕೋರರ ಹಿಂದೆ ಹೋಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ ಎಂದು ರಾಜ್ಯಪಾಲರು ಆರೋಪಿಸುವುದು ಸರಿಯಲ್ಲ” ಎಂದು ಮಾನ್ ಹೇಳಿದ್ದಾರೆ.

“ನಾನು ಗವರ್ನರ್ ಸಾಹಬ್ ಅವರನ್ನು ಕೇಳಲು ಬಯಸುತ್ತೇನೆ, ನುಹ್ ನಲ್ಲಿ ಏನಾಯಿತು? ಅಲ್ಲಿ ನಡೆದ ಕೋಮು ಘರ್ಷಣೆಗಳು, ಹಿಂಸಾಚಾರ ಮತ್ತು ಕರ್ಫ್ಯೂ ವಿಧಿಸಬೇಕಾದ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಖಟ್ಟರ್ ಅವರಿಗೆ ಹರಿಯಾಣ ರಾಜ್ಯಪಾಲರು ನೋಟಿಸ್ ನೀಡಿದ್ದಾರೆಯೇ? ಹರಿಯಾಣ ರಾಜ್ಯಪಾಲರು ಖಟ್ಟರ್‌ಗೆ ಯಾವುದಾದರೂ ಪತ್ರ ಬರೆದಿದ್ದಾರೆಯೇ? ಇಲ್ಲ, ಏಕೆಂದರೆ ಕೇಂದ್ರದಲ್ಲಿ ಅವರದೇ ಸರ್ಕಾರ ಆಡಳಿತ ನಡೆಸುತ್ತಿದೆ” ಎಂದು ಅವರು ಹೇಳಿದರು.

”ನಮ್ಮ ರಾಜ್ಯಪಾಲರು ಪಂಜಾಬ್‌ನಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಕಾಳಜಿವಹಿಸಿದ್ದಾರೆ, ಆದರೆ ಜನಾಂಗೀಯ ಹಿಂಸಾಚಾರದಿಂದ ಕೂಡಿದ ಮಣಿಪುರದ ಬಗ್ಗೆ ಎಂದಿಗೂ ಹೇಳಿಕೆ ನೀಡಲಿಲ್ಲ. ಮಣಿಪುರದಲ್ಲಿ ಸಂವಿಧಾನವು ಅನ್ವಯಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

”ಉತ್ತರ ಪ್ರದೇಶದಲ್ಲಿ ಪತ್ರಕರ್ತರ ಮುಂದೆಯೇ ಕೊಲೆ ನಡೆಯುತ್ತದೆ, ಅಲ್ಲಿಯ ರಾಜ್ಯಪಾಲರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರಶ್ನಿಸುವ ಯಾವುದೇ ಪತ್ರವನ್ನು ನೀಡಲು ಧೈರ್ಯ ಮಾಡುತ್ತಾರೆಯೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಪಂಜಾಬ್, ದೆಹಲಿ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಹೊರತುಪಡಿಸಿ ಹೆಚ್ಚಿನ ಜನರಿಗೆ ಬೇರೆ ರಾಜ್ಯಪಾಲರ ಹೆಸರುಗಳು ತಿಳಿದಿರುವುದಿಲ್ಲ. ಆ ಆರು ರಾಜ್ಯದ ರಾಜ್ಯಪಾಲರ ಹೆಸರು ತಿಳಿದಿರಲು ಕಾರಣ ಅಲ್ಲಿ ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುತ್ತದೆ” ಎಂದು ಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...