Homeಕರ್ನಾಟಕಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

- Advertisement -
- Advertisement -

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮಸೂದೆಯ ಮೂಲಕ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ತನ್ನ ಆದೇಶಕ್ಕೆ ಕಾನೂನು ಬಲ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು.

ಮಸೂದೆ ವಾಪಸ್ ಕಳುಹಿಸಿರುವ ರಾಜ್ಯಪಾಲರ ನಿರ್ಧಾರದ ಕುರಿತು ಒಳ ಮೀಸಲಾತಿ ಹೋರಾಟಗಾರರು ಮತ್ತು ದಲಿತ ಸಮುದಾಯದ ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಬಸವರಾಜ್ ಕೌತಾಳ್ ಅವರು, “ರಾಜ್ಯಪಾಲರು ಮಸೂದೆಯನ್ನು ತಿರಸ್ಕರಿಸಿಲ್ಲ, ಸರ್ಕಾರದಿಂದ ಕೆಲವೊಂದು ಸ್ಪಷ್ಟನೆಗಳನ್ನು ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಮಸೂದೆ ಪ್ರಸ್ತುತ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ ಪಾಟೀಲ್ ಬಳಿ ಇದೆ ಎಂದು ಗೊತ್ತಾಗಿದೆ. ಸರ್ಕಾರ ತಕ್ಷಣ ರಾಜ್ಯಪಾಲರು ಕೇಳಿರುವ ಸ್ಪಷ್ಟನೆಯನ್ನು ಕೊಡಬೇಕು, ರಾಜ್ಯಪಾಲರು ರಾಜಕೀಯವನ್ನು ಬದಿಗಿಟ್ಟು ಅದಕ್ಕೆ ಅಂಕಿತ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಒಳ ಮೀಸಲಾತಿ ವಿಷಯ ತಾರ್ಕಿಕ ಅಂತ್ಯ ಕಾಣದೆ ನೇಮಕಾತಿಗಳು, ಬಡ್ತಿ ನಿಂತು ಹೋಗಿದೆ. ಇದರಿಂದ ಉದ್ಯೋಗಕಾಂಕ್ಷಿ ಯುವಜನತೆ ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ಒಳಮೀಸಲಾತಿಯ ಸರಿಯಾದ ಹಂಚಿಕೆಗೆ ಸಂಬಂಧಿಸಿದಂತೆ ನಮ್ಮ ಹೋರಾಟಗಳು ಮುಂದುವರಿಯುತ್ತದೆ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಬಹುದು. ಹಾಗಾಗಿ, ಸರ್ಕಾರ ಮತ್ತು ರಾಜ್ಯಪಾಲರು ಸಮನ್ವಯ ಸಾಧಿಸಿಕೊಂಡು ತಕ್ಷಣಕ್ಕೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬಿಜೆಪಿಯವರು ನಾಗಮೋಹನ್‌ದಾಸ್ ಸಮಿತಿಯ ವರದಿಯನ್ನೇ ಅವೈಜ್ಞಾನಿಕ ಎಂದಿದ್ದರು. ಮಸೂದೆ ವಾಪಸ್ ಬಂದಿರುವುದರ ಹಿಂದೆ ಅವರ ಕ್ರೆಡಿಟ್ ವಾರ್‌ ಕೂಡ ಇರಬಹುದು ಎಂದಿದ್ದಾರೆ.

ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ನಿರ್ಧಾರ ತೆಗೆದುಕೊಳ್ಳುವ ಅವಕಾಶ ಈಗ ಸರ್ಕಾರದ ಹಂತದಲ್ಲಿದೆ. ರಾಜ್ಯಪಾಲರು ಏನು ಸ್ಪಷ್ಟನೆ ಕೇಳಿದ್ದಾರೋ, ಅದನ್ನು ಕೊಟ್ಟು ಸರ್ಕಾರ ಮಸೂದೆಗೆ ಅಂಕಿತ ಪಡೆಯುವ ಕೆಲಸ ತುರ್ತಾಗಿ ಮಾಡಬೇಕು. ಒಳಮೀಸಲಾತಿ ವಿಚಾರ ಬಗೆಹರಿಯದೆ ನೇಮಕಾತಿ ಮತ್ತು ಬಡ್ತಿಯಲ್ಲಿ ಸಮಸ್ಯೆ ಉಂಟಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಸೂದೆ ಕುರಿತು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಪ್ರಧಾನ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವುದರ ಹಿಂದೆ ನೇರವಾಗಿ ಬಿಜೆಪಿಯವರ ಕೈವಾಡವಿದೆ. ಅವರು ರಾಜ್ಯಪಾಲರ ಮೇಲೆ ಒತ್ತಡ ಹೇರಿ ಅಂಕಿತ ಬೀಳದಂತೆ ಮಾಡಿದ್ದಾರೆ. ಬಿಜೆಪಿಯವರು ಒಳ ಮೀಸಲಾತಿ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದಿದ್ದಾರೆ. ಸರ್ಕಾರ ರಾಜ್ಯಪಾಲರು ಕೇಳಿದ ಸ್ಪಷ್ಟನೆಯನ್ನು ಕೊಟ್ಟು ಕಾನೂನು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...