Homeಚಳವಳಿರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ಈ ಜನವಿರೋಧಿ ಕಾಯ್ದೆಗೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸಹಿ ಹಾಕಬಾರದು. ಒಂದು ವೇಳೆ ಸಹಿ ಹಾಕಿದ್ದೆ ಆದಲ್ಲಿ ದೆಹಲಿ ರೈತರ ಮಾದರಿಯಲ್ಲಿ ಬೆಂಗಳೂರನ್ನು ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕರ್ನಾಟಕದಲ್ಲಿನ ರೈತರ ಹೋರಾಟ ಮುಂದುವರೆದಿದೆ. ಭೂ ಸುಧಾರಣಾ ಮಸೂದೆಯನ್ನು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ್ದನ್ನು ವಿರೋಧಿಸಿ, ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಇಂದು ರಾಜಭವನ ಚಲೋ ಹೋರಾಟ ಆರಂಭವಾಗಿದೆ.

ಇಂದು ಬೆಳಿಗ್ಗೆಯೇ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಜಮಾಯಿಸಿದ ಸಾವಿರಾರು ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲು ನಿಲ್ದಾಣದಿಂದ ಕೆ.ಆರ್ ಸರ್ಕಲ್ ಮತ್ತು ವಿಧಾನಸೌಧದ ಮುಂಭಾಗದಿಂದ ರಾಜಭವನ ತಲುಪಲು ಯೋಜಿಸಿದ್ದ ರೈತರನ್ನು ಸದ್ಯಕ್ಕೆ ಫ್ರೀಡಂ ಪಾರ್ಕ್‌ ಬಳಿ ಪೊಲೀಸರು ತಡೆದಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಫ್ರೀಡಂ ಪಾರ್ಕ್ ರಸ್ತೆಯಲ್ಲಿ ವಾಹನ ಸಂಚಾರ ಸ್ತಭ್ದಗೊಂಡಿದೆ.

ಕಬ್ಬು ಬೆಳೆಗಾರರ ಸಂಘದ ಕುರುಬೂರು ಶಾಂತಕುಮಾರ್ ಮಾತನಾಡಿ “ಈ ಜನವಿರೋಧಿ ಕಾಯ್ದೆಗೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸಹಿ ಹಾಕಬಾರದು. ಒಂದು ವೇಳೆ ಸಹಿ ಹಾಕಿದ್ದೆ ಆದಲ್ಲಿ ದೆಹಲಿ ರೈತರ ಮಾದರಿಯಲ್ಲಿ ಬೆಂಗಳೂರನ್ನು ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ. ಇನ್ನು ಮಾಜಿ ಸಿಎಂ ಕುಮಾರಸ್ವಾಮಿಯವರು ನಾಟಕ ನಿಲ್ಲಿಸಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ “ಸರ್ಕಾರ ಕಾಯ್ದೆಯನ್ನು ಅಂಗೀಕರಿಸಿ ನಮ್ಮನ್ನು ಮಾತುಕತೆಗೆ ಕರೆದಿದೆ. ಇದು ಸರ್ಕಾರದ ಪೂರ್ವಯೋಜಿತ ನಾಟಕ. ಹಾಗಾಗಿ ನಾವು ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಹೋರಾಟ ಮುಂದುವರೆಸುತ್ತೇವೆ” ಎಂದಿದ್ದಾರೆ.

ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು, ಯುವಜನರು ಜೊತೆಗೂಡಿ “ದೇಶ ಮಾರುವ ಪ್ರಧಾನಿ ಮಂತ್ರಿಗೆ ಧಿಕ್ಕಾರ” ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ. ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಐಕ್ಯ ಹೋರಾಟ ಸಮಿತಿಯ ವತಿಯಿಂದ ಡಾ.ಪ್ರಕಾಶ್ ಕಮ್ಮರಡಿ, ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಕುರುಬುರು ಶಾಂತಕುಮಾರ್, ಕುಮಾರ್ ಸಮತಳ, ಡಿ.ಎಚ್ ಪೂಜಾರ್ ಮುಂತಾದವರು ಹೋರಾಟದ ನೇತೃತ್ವ ವಹಿಸಿದ್ದಾರೆ.


ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...