Homeಕರ್ನಾಟಕಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

- Advertisement -
- Advertisement -

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ-2025ಕ್ಕೆ ರಾಜ್ಯಪಾಲರು ಬುಧವಾರ (ಜ.29) ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರ ಇದನ್ನು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಸುಗ್ರೀವಾಜ್ಞೆ ಹಿನ್ನೆಲೆ, ಸಾರ್ವಜನಿಕ ಉದ್ದೇಶಕ್ಕಾಗಿ ಬೆಂಗಳೂರು ಅರಮನೆಗೆ ಸಂಬಂಧಿಸಿದ ಜಾಗದ ಯಾವುದೇ ಭಾಗವನ್ನು ಬಳಕೆ ಮಾಡುವ ಮತ್ತು ಅದನ್ನು ನಿಯಂತ್ರಣಕ್ಕೆ ಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ದೊರೆತಿದೆ.

ರಸ್ತೆ ಅಗಲೀಕರಣದ ಉದ್ದೇಶಕ್ಕೆ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದಕ್ಕೆ ಟಿಡಿಆರ್‌ ಕೊಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ ಜಾರಿಗೊಳಿಸಿದರೆ ಸರ್ಕಾರಕ್ಕೆ ಸುಮಾರು 3,011 ಕೋಟಿ ರೂಪಾಯಿ ಹೊರೆ ಬೀಳಲಿದೆ. ಅದರಿಂದ ಪಾರಾಗಲು ಶುಕ್ರವಾರ (ಜ.24) ನಡೆದ ಸಚಿವ ಸಂಪುಟ ಸಭೆಯಲ್ಲ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿತ್ತು.

ಸುಗ್ರೀವಾಜ್ಞೆಯ ಮೂಲಕ ಅರಮನೆ ಮೈದಾನ ಟಿಡಿಆರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ವರ್ಗದ ವಿರುದ್ಧ ಯಾರೂ ಸಿವಿಲ್‌, ಕ್ರಿಮಿನಲ್‌ ದಾವೆ ಹೂಡಲು ಅವಕಾಶ ಇರದಂತೆ ಮಾಡಲಾಗಿದೆ. ಟಿಡಿಆರ್‌ ವಿಚಾರದಲ್ಲಿ ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಆದೇಶ ಬಂದರೂ ಅಥವಾ ರಾಜ್ಯ ಸರ್ಕಾರವು ಈ ಹಿಂದೆ ತೆಗೆದುಕೊಂಡ ಯಾವುದೇ ತೀರ್ಮಾನದಲ್ಲಿ ಏನೇ ಇದ್ದರೂ ಸರ್ಕಾರವು 1ನೇ ಉಪ ಪ್ರಕರಣದಲ್ಲಿನ ಯಾವುದೇ ಮೂಲ ಸೌಕರ್ಯ ಯೋಜನೆಗೆ ಸಂಪೂರ್ಣ ಅಥವಾ ಭಾಗಶಃ ಮುಂದುವರಿಯದಿರಯಲು ಅಧಿಕಾರ ಇರಲಿದೆ ಎಂದು ಸುಗ್ರೀವಾಜ್ಞೆಯಲ್ಲಿ ವಿವರಿಸಲಾಗಿದೆ.

ಬೆಂಗಳೂರು ಅರಮನೆಯ ಒಟ್ಟಾರೆ ವ್ಯಾಪ್ತಿಯ 427 ಎಕರೆ ಮತ್ತು 16 ಗುಂಟೆಗಳ ಒಟ್ಟು ಮೌಲ್ಯವನ್ನು ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ 8 & 9ನೇ ಪ್ರಕರಣಗಳ ಅನುಸಾರ 11 ಕೋಟಿ ರೂಪಾಯಿ ಎಂದು ನಿರ್ಧರಿಸಲಾಗಿದೆ. ಕಾಯಿದೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್‌ ಈ ಕಾಯಿದೆಗೆ ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂದು ಸುಗ್ರೀವಾಜ್ಞೆಯಲ್ಲಿ ತಿಳಿಸಲಾಗಿದೆ.

1996 ರಲ್ಲಿ ಬೆಂಗಳೂರು ಅರಮನೆ ವ್ಯಾಪ್ತಿಯ 472 ಎಕರೆ ಮತ್ತು 16 ಗುಂಟೆ ಭೂಮಿಯನ್ನು ಸರ್ಕಾರ ವಶಕ್ಕೆ ಪಡೆಯಲು ಒಟ್ಟು 11 ಕೋಟಿ ರೂಪಾಯಿ ನಿಗದಿಪಡಿಸಿತ್ತು. ಅಂದು ಎಕರೆಗೆ 2.30 ಲಕ್ಷ ರೂ.ನಂತೆ ದರ ನಿಗದಿ ಮಾಡಲಾಗಿತ್ತು. ಆದರೆ, ರಾಜಮನೆತನ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಇಂದಿನ ಮಾರುಕಟ್ಟೆ ದರ ಪ್ರತಿ ಎಕರೆಗೆ 200 ಕೋಟಿ ರೂ. ಆಗುತ್ತದೆ.

ರಸ್ತೆ ಅಗಲಿಕರಣಕ್ಕೆ ಬೇಕಾದ 15 ಎಕರೆ 36 ಗುಂಟೆ ಜಾಗವನ್ನೇ ವಶಕ್ಕೆ ಪಡೆಯುವುದಾದರೆ ಎಕರೆಗೆ 200 ಕೋಟಿ ಬೆಲೆ ನೀಡಬೇಕಾಗುತ್ತದೆ. ಒಟ್ಟು ಜಾಗದ ಮೌಲ್ಯ 3,011 ಕೋಟಿ ರೂ. ಆಗಲಿದೆ. ಇದು ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾಗವನ್ನು ವಶಕ್ಕೆ ಪಡೆಯಲು ಮುಂದಾಗಿದೆ.

ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...