Homeಕರ್ನಾಟಕಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

- Advertisement -
- Advertisement -

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ-2025ಕ್ಕೆ ರಾಜ್ಯಪಾಲರು ಬುಧವಾರ (ಜ.29) ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರ ಇದನ್ನು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಸುಗ್ರೀವಾಜ್ಞೆ ಹಿನ್ನೆಲೆ, ಸಾರ್ವಜನಿಕ ಉದ್ದೇಶಕ್ಕಾಗಿ ಬೆಂಗಳೂರು ಅರಮನೆಗೆ ಸಂಬಂಧಿಸಿದ ಜಾಗದ ಯಾವುದೇ ಭಾಗವನ್ನು ಬಳಕೆ ಮಾಡುವ ಮತ್ತು ಅದನ್ನು ನಿಯಂತ್ರಣಕ್ಕೆ ಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ದೊರೆತಿದೆ.

ರಸ್ತೆ ಅಗಲೀಕರಣದ ಉದ್ದೇಶಕ್ಕೆ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದಕ್ಕೆ ಟಿಡಿಆರ್‌ ಕೊಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ ಜಾರಿಗೊಳಿಸಿದರೆ ಸರ್ಕಾರಕ್ಕೆ ಸುಮಾರು 3,011 ಕೋಟಿ ರೂಪಾಯಿ ಹೊರೆ ಬೀಳಲಿದೆ. ಅದರಿಂದ ಪಾರಾಗಲು ಶುಕ್ರವಾರ (ಜ.24) ನಡೆದ ಸಚಿವ ಸಂಪುಟ ಸಭೆಯಲ್ಲ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿತ್ತು.

ಸುಗ್ರೀವಾಜ್ಞೆಯ ಮೂಲಕ ಅರಮನೆ ಮೈದಾನ ಟಿಡಿಆರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ವರ್ಗದ ವಿರುದ್ಧ ಯಾರೂ ಸಿವಿಲ್‌, ಕ್ರಿಮಿನಲ್‌ ದಾವೆ ಹೂಡಲು ಅವಕಾಶ ಇರದಂತೆ ಮಾಡಲಾಗಿದೆ. ಟಿಡಿಆರ್‌ ವಿಚಾರದಲ್ಲಿ ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಆದೇಶ ಬಂದರೂ ಅಥವಾ ರಾಜ್ಯ ಸರ್ಕಾರವು ಈ ಹಿಂದೆ ತೆಗೆದುಕೊಂಡ ಯಾವುದೇ ತೀರ್ಮಾನದಲ್ಲಿ ಏನೇ ಇದ್ದರೂ ಸರ್ಕಾರವು 1ನೇ ಉಪ ಪ್ರಕರಣದಲ್ಲಿನ ಯಾವುದೇ ಮೂಲ ಸೌಕರ್ಯ ಯೋಜನೆಗೆ ಸಂಪೂರ್ಣ ಅಥವಾ ಭಾಗಶಃ ಮುಂದುವರಿಯದಿರಯಲು ಅಧಿಕಾರ ಇರಲಿದೆ ಎಂದು ಸುಗ್ರೀವಾಜ್ಞೆಯಲ್ಲಿ ವಿವರಿಸಲಾಗಿದೆ.

ಬೆಂಗಳೂರು ಅರಮನೆಯ ಒಟ್ಟಾರೆ ವ್ಯಾಪ್ತಿಯ 427 ಎಕರೆ ಮತ್ತು 16 ಗುಂಟೆಗಳ ಒಟ್ಟು ಮೌಲ್ಯವನ್ನು ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ 8 & 9ನೇ ಪ್ರಕರಣಗಳ ಅನುಸಾರ 11 ಕೋಟಿ ರೂಪಾಯಿ ಎಂದು ನಿರ್ಧರಿಸಲಾಗಿದೆ. ಕಾಯಿದೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್‌ ಈ ಕಾಯಿದೆಗೆ ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂದು ಸುಗ್ರೀವಾಜ್ಞೆಯಲ್ಲಿ ತಿಳಿಸಲಾಗಿದೆ.

1996 ರಲ್ಲಿ ಬೆಂಗಳೂರು ಅರಮನೆ ವ್ಯಾಪ್ತಿಯ 472 ಎಕರೆ ಮತ್ತು 16 ಗುಂಟೆ ಭೂಮಿಯನ್ನು ಸರ್ಕಾರ ವಶಕ್ಕೆ ಪಡೆಯಲು ಒಟ್ಟು 11 ಕೋಟಿ ರೂಪಾಯಿ ನಿಗದಿಪಡಿಸಿತ್ತು. ಅಂದು ಎಕರೆಗೆ 2.30 ಲಕ್ಷ ರೂ.ನಂತೆ ದರ ನಿಗದಿ ಮಾಡಲಾಗಿತ್ತು. ಆದರೆ, ರಾಜಮನೆತನ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಇಂದಿನ ಮಾರುಕಟ್ಟೆ ದರ ಪ್ರತಿ ಎಕರೆಗೆ 200 ಕೋಟಿ ರೂ. ಆಗುತ್ತದೆ.

ರಸ್ತೆ ಅಗಲಿಕರಣಕ್ಕೆ ಬೇಕಾದ 15 ಎಕರೆ 36 ಗುಂಟೆ ಜಾಗವನ್ನೇ ವಶಕ್ಕೆ ಪಡೆಯುವುದಾದರೆ ಎಕರೆಗೆ 200 ಕೋಟಿ ಬೆಲೆ ನೀಡಬೇಕಾಗುತ್ತದೆ. ಒಟ್ಟು ಜಾಗದ ಮೌಲ್ಯ 3,011 ಕೋಟಿ ರೂ. ಆಗಲಿದೆ. ಇದು ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾಗವನ್ನು ವಶಕ್ಕೆ ಪಡೆಯಲು ಮುಂದಾಗಿದೆ.

ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...