Homeಮುಖಪುಟರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

"ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ, ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ" ಎಂದು ಐಕ್ಯ ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದರು.

- Advertisement -
- Advertisement -

ಜೆಡಿಎಸ್ ಬೆಂಬಲದಿಂದ ಬಿಜೆಪಿ ಸರ್ಕಾರ ವಿಧಾನಪರಿಷತ್‌ನಲ್ಲಿಯೂ ಅಂಗೀಕರಿಸಿರುವ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ- 2020ಗೆ ಸಹಿ ಹಾಕದಂತೆ ರಾಜ್ಯಪಾಲರ ಮೇಲೆ ಒತ್ತಡ ತರಲು ಇಂದು ಸಂಜೆ 4-6ರವರೆಗೆ ಟ್ವಿಟ್ಟರ್ ದಾಳಿ ನಡೆಸಲು ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿ ನಿರ್ಧಿರಿಸಿದೆ.

ಕಳೆದ ಮಂಗಳವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಭೂಸುಧಾರಣಾ ತಿದ್ದಪಡಿ ಮಸೂದೆ 2020 ಅನ್ನು ಮಂಡಿಸಿತು. ಅದಕ್ಕೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 37 ಮತಗಳೊಂದಿಗೆ ಅಂಗೀಕಾರಗೊಂಡಿತ್ತು. ಇದರಿಂದ ಕ್ರೋಧಗೊಂಡ ಐಕ್ಯ ಹೋರಾಟ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿತ್ತು. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ರೈತರು ಡಿಸೆಂಬರ್ 10 ರಂದು ಇಂದು ರಾಜಭವನ ಚಲೋ ನಡೆಸಿದ್ದರು. ಆಗ 20 ರೈತ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದ ರಾಜ್ಯಪಾಲರು “ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ಐಕ್ಯ ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ- 2020ಗೆ ಸಹಿ ಹಾಕಬಾರದು ಎಂದು ಒತ್ತಾಯಿಸಲು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಟ್ವಿಟ್ಟರ್‌ ಟ್ರೆಂಡ್ ಮಾಡಲು ಐಕ್ಯಹೋರಾಟ ಸಮಿತಿ ಕರೆ ನೀಡಿದೆ.

ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ, ಕ್ರಾಂತಿಕಾರಿ ಪಡೆ, ಕನ್ನಡಿಗ ಸೇರಿದಂತೆ ಹಲವು ಸಂಘಟನೆಗಳು ಮತ್ತು ಜನಪ್ರಿಯ ಟ್ವಿಟ್ಟರ್ ಹ್ಯಾಂಡಲ್‌ಗಳು ಐಕ್ಯಸಮಿತಿಯ ಕರೆಗೆ ಓಗೊಟ್ಟಿವೆ. “ಭೂಸುಧಾರಣೆ ಕಾಯ್ದೆಯಿಂದ ಉಳುವವನ ಭೂಮಿ ಉಳ್ಳವನ ಭೂಮಿ ಆಗುತ್ತದೆ. ಬಾಚಿ ಬಾಚಿ‌ ಫಲವತ್ತಾದ ಅನ್ನ ನೀಡುವ ಭೂಮಿಯನ್ನು ಯಂತ್ರ ಮಾಡಲು, ಅನ್ನ ನೀಡುವ ಧಣಿಯಾದ ನೇಗಿಲಯೋಗಿಯನ್ನು ಗುಲಾಮರನ್ನಾಗಿ ಮಾಡಲು ಬಿಡುವುದಿಲ್ಲ. ರೈತನೇ ನಿಜವಾದ ಬಂಡವಾಳಶಾಹಿ ಆಗಬೇಕು” ಎಂದು ಕ್ರಾಂತಿಕಾರಿ ಪಡೆ ಟ್ವೀಟ್ ಮಾಡಿದೆ.

ಉಳುವವನೇ ಹೊಲದೊಡೆಯ ಕಾಯ್ದೆಯಿಂದ ಹಿಂದುಳಿದ ವರ್ಗದವರು ಅಷ್ಟೋ ಇಷ್ಟೋ ತಮ್ಮ ಸ್ವಂತ ನೆಲ ಕಂಡುಕೊಂಡು, ತಮ್ಮ ಶ್ರಮದಿಂದ ತಮ್ಮ ಜೀವನ ರೂಪಿಸಿಕೊಂಡರು. ಆದರೆ ಈ ಕಾನೂನಿಂದ ಉಳುವವನೇ ಅಲ್ಲ ಉಳ್ಳವನೇ ಹೊಲದೊಡೆಯ ಆಗುವನು. ಹಾಗಾದರೆ ಉಳುವವನ ಪರಿಸ್ಥಿತಿ ಏನು? #ಕ್ರಾಂತಿಕಾರಿ_ಪಡೆ ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿಲಿದೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...