Homeಮುಖಪುಟರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

"ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ, ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ" ಎಂದು ಐಕ್ಯ ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದರು.

- Advertisement -
- Advertisement -

ಜೆಡಿಎಸ್ ಬೆಂಬಲದಿಂದ ಬಿಜೆಪಿ ಸರ್ಕಾರ ವಿಧಾನಪರಿಷತ್‌ನಲ್ಲಿಯೂ ಅಂಗೀಕರಿಸಿರುವ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ- 2020ಗೆ ಸಹಿ ಹಾಕದಂತೆ ರಾಜ್ಯಪಾಲರ ಮೇಲೆ ಒತ್ತಡ ತರಲು ಇಂದು ಸಂಜೆ 4-6ರವರೆಗೆ ಟ್ವಿಟ್ಟರ್ ದಾಳಿ ನಡೆಸಲು ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿ ನಿರ್ಧಿರಿಸಿದೆ.

ಕಳೆದ ಮಂಗಳವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಭೂಸುಧಾರಣಾ ತಿದ್ದಪಡಿ ಮಸೂದೆ 2020 ಅನ್ನು ಮಂಡಿಸಿತು. ಅದಕ್ಕೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 37 ಮತಗಳೊಂದಿಗೆ ಅಂಗೀಕಾರಗೊಂಡಿತ್ತು. ಇದರಿಂದ ಕ್ರೋಧಗೊಂಡ ಐಕ್ಯ ಹೋರಾಟ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿತ್ತು. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ರೈತರು ಡಿಸೆಂಬರ್ 10 ರಂದು ಇಂದು ರಾಜಭವನ ಚಲೋ ನಡೆಸಿದ್ದರು. ಆಗ 20 ರೈತ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದ ರಾಜ್ಯಪಾಲರು “ಸದ್ಯಕ್ಕೆ ಭೂಸುಧಾರಣಾ ಮಸೂದೆಗೆ ಸಹಿ ಹಾಕುವುದಿಲ್ಲ ಮತ್ತು ರೈತ ಮುಖಂಡರೊಂದಿಗೆ ವಿವರವಾಗಿ ಚರ್ಚಿಸಲು ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ಐಕ್ಯ ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ- 2020ಗೆ ಸಹಿ ಹಾಕಬಾರದು ಎಂದು ಒತ್ತಾಯಿಸಲು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಟ್ವಿಟ್ಟರ್‌ ಟ್ರೆಂಡ್ ಮಾಡಲು ಐಕ್ಯಹೋರಾಟ ಸಮಿತಿ ಕರೆ ನೀಡಿದೆ.

ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ, ಕ್ರಾಂತಿಕಾರಿ ಪಡೆ, ಕನ್ನಡಿಗ ಸೇರಿದಂತೆ ಹಲವು ಸಂಘಟನೆಗಳು ಮತ್ತು ಜನಪ್ರಿಯ ಟ್ವಿಟ್ಟರ್ ಹ್ಯಾಂಡಲ್‌ಗಳು ಐಕ್ಯಸಮಿತಿಯ ಕರೆಗೆ ಓಗೊಟ್ಟಿವೆ. “ಭೂಸುಧಾರಣೆ ಕಾಯ್ದೆಯಿಂದ ಉಳುವವನ ಭೂಮಿ ಉಳ್ಳವನ ಭೂಮಿ ಆಗುತ್ತದೆ. ಬಾಚಿ ಬಾಚಿ‌ ಫಲವತ್ತಾದ ಅನ್ನ ನೀಡುವ ಭೂಮಿಯನ್ನು ಯಂತ್ರ ಮಾಡಲು, ಅನ್ನ ನೀಡುವ ಧಣಿಯಾದ ನೇಗಿಲಯೋಗಿಯನ್ನು ಗುಲಾಮರನ್ನಾಗಿ ಮಾಡಲು ಬಿಡುವುದಿಲ್ಲ. ರೈತನೇ ನಿಜವಾದ ಬಂಡವಾಳಶಾಹಿ ಆಗಬೇಕು” ಎಂದು ಕ್ರಾಂತಿಕಾರಿ ಪಡೆ ಟ್ವೀಟ್ ಮಾಡಿದೆ.

ಉಳುವವನೇ ಹೊಲದೊಡೆಯ ಕಾಯ್ದೆಯಿಂದ ಹಿಂದುಳಿದ ವರ್ಗದವರು ಅಷ್ಟೋ ಇಷ್ಟೋ ತಮ್ಮ ಸ್ವಂತ ನೆಲ ಕಂಡುಕೊಂಡು, ತಮ್ಮ ಶ್ರಮದಿಂದ ತಮ್ಮ ಜೀವನ ರೂಪಿಸಿಕೊಂಡರು. ಆದರೆ ಈ ಕಾನೂನಿಂದ ಉಳುವವನೇ ಅಲ್ಲ ಉಳ್ಳವನೇ ಹೊಲದೊಡೆಯ ಆಗುವನು. ಹಾಗಾದರೆ ಉಳುವವನ ಪರಿಸ್ಥಿತಿ ಏನು? #ಕ್ರಾಂತಿಕಾರಿ_ಪಡೆ ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿಲಿದೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ ವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...