Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

- Advertisement -
- Advertisement -

ಇಲ್ಲಿ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯುತ್ತದೆ. ಕರ್ನಾಟಕಕ್ಕೆ ರಾಜ್ಯಪಾಲರಾದ ನಂತರ ಎಂದೂ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಸಭೆ ಕರೆಯದ ರಾಜ್ಯಪಾಲ ವಜುಭಾಯಿ ವಾಲಾರವರು ಬುಧವಾರ ಅಂತಹ ಸಭೆಯೊಂದನ್ನು ನಡೆಸಿದರು. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಜವಾಬ್ದಾರಿಯನ್ನು ವಿ.ಸಿ.ಗಳಿಗೆ ವಹಿಸುವ ವಿಷಯಕ್ಕೆ ಈ ಸಭೆ. ಉನ್ನತ ಶಿಕ್ಷಣ ಸಚಿವ ಮತ್ತು ಡಿಸಿಎಂ ಅಶ್ವತ್ ನಾರಾಯಣ್ ಈ ಸಭೆಯನ್ನು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಂಘಟಿಸಿದ್ದರು.

ಇವೆರಡೂ ಘಟನೆಗಳನ್ನು ನೋಡಿದರೆ ಮುಖ್ಯಮಂತ್ರಿ ಬಿಟ್ಟರೆ ರಾಜ್ಯದ ಸಚಿವ ಸಂಪುಟದ ಯಾರಿಗೂ ಅಧಿಕಾರವೇ ಇಲ್ಲವೇ? ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಇಲ್ಲಿ ಆಡಳಿತ ನಡೆಸುತ್ತಿದೆಯೇ? ಇದೇನು ಲೆಫ್ಟಿನೆಂಟ್ ಗವರ್ನರ್‌ಗಳನ್ನು ಹೊಂದಿರುವ ದೆಹಲಿ ಅಥವಾ ಪುದುಚೇರಿಯೇ ಎಂಬ ಪ್ರಶ್ನೆಗಳು ಎದ್ದಿದ್ದು ನಿಜ.

ಈಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಇಲ್ಲಿ ಸಾಂವಿಧಾನಿಕ ಉಲ್ಲಂಘನೆಯಂತೂ ಆಗಿದೆ.
ರಾಜ್ಯದ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯಪಾಲರು ಮಂಗಳವಾರ ಸರ್ವ ಪಕ್ಷ ಸಭೆ ಕರೆದಿದ್ದರು. ಇದು ಅಸಂವಿಧಾನಿಕ ಮಾರ್ಗವೇ ಆಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿ ಇದನ್ನು ಪ್ರಶ್ನಿಸಿಯೂ ರಾಜ್ಯಪಾಲ ಹುದ್ದೆಗೆ ಗೌರವ ಕೊಟ್ಟು ತಮ್ಮ ಅಭಿಪ್ರಾಯ ದಾಖಲಿಸಿದರು. ಈ ಸಭೆ ಕುರಿತಂತೆ ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ರಾಜಕಾರಣಿಗಳು ಆಕ್ಷೇಪ ಎತ್ತಿದ್ದರು.

ಕೇಂದ್ರ ಸರ್ಕಾರದ ಧೋರಣೆಯೇ ಹಾಗಿದೆಯಲ್ಲವೇ? ಅದು ಮುಖ್ಯಮಂತ್ರಿಗಳಿಗಿಂತ ಅಥವಾ ರಾಜ್ಯದ ಇತರ ಚುನಾಯಿತ ಪ್ರತಿನಿಧಿಗಳಿಗಿಂತ ಕೇಂದ್ರದಿಂದ ನೇಮಕಗೊಂಡ ರಾಜ್ಯಪಾಲರುಗಳಿಗೆ ಆದ್ಯತೆ ನೀಡುತ್ತ ಬಂದಿದೆ. ಕೊರೋನಾ ನಿಯಂತ್ರಣ ಕುರಿತಂತೆ ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಪಾಲರೊಂದಿಗೆ ವಿಡಿಯೋ ಸಂವಾದ ನಡೆಸಿದ್ದನ್ನು ಇಲ್ಲಿ ಗಮನಿಸಬಹುದು.

ಇದೇ ಪರಂಪರೆಯಲ್ಲಿ ರಾಜ್ಯ ಸರ್ಕಾರ ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭ ಬಳಸಿಕೊಂಡು ಮಂಗಳವಾರ ಕೋವಿಡ್ ಪರಿಸ್ಥಿತಿ ಚರ್ಚಿಸಲು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಜರುಗಿ, ವಿವಾದಕ್ಕೆ ಕಾರಣವಾಗಿದೆ.

ಆಸ್ಪತ್ರೆಯಲ್ಲಿದ್ದಾಗ ಯಡಿಯೂರಪ್ಪರ ಆರೋಗ್ಯ ಸ್ಥಿರವಾಗಿತ್ತು ಮತ್ತು ಅವರು ಸಂಪುಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದರು. ಆದರೆ ಸರ್ವಪಕ್ಷ ಸಭೆಯಲ್ಲೆಕೆ ವಿಡಿಯೋ ಸಂವಾದದ ನೆರವು ಪಡೆಯಲಿಲ್ಲ?

ರಾಜ್ಯಪಾಲರು ಚುನಾಯಿತ ಪ್ರತಿನಿಧಿಯಲ್ಲ. ಅವರು ಕೇಂದ್ರಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರಪತಿಗಳಿಂದ ನೇಮಕಗೊಂಡವರು. ಮುಖ್ಯಮಂತ್ರಿ ಅನುಪಸ್ಥಿತಿಯಲ್ಲಿ ಸಭಾಪತಿ ಅಥವಾ ಉಪ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಸಬಹುದಿತ್ತು ಅಲ್ಲವೇ? ಮೂವರು ಡಿಸಿಎಂಗಳ ಪೈಕಿ ಹಿರಿಯರಾದ ಗೋವಿಂದ ಕಾರಜೋಳರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬಹುದಿತ್ತಲ್ಲ? ಅಥವಾ ನಮ್ಮ ಸಚಿವರೆಲ್ಲರೂ ಜನರಿಗೆ ಉತ್ತರಿಸುವ ನೈತಿಕತೆಯನ್ನೇ ಕಳೆದುಕೊಂಡು ತಮ್ಮ ಜವಾಬ್ದಾರಿಯನ್ನು ರಾಜ್ಯಪಾಲರಿಗೆ ವರ್ಗಾಯಿಸಿದರೆ?

ಕೇಂದ್ರ ಸರ್ಕಾರ ಹಾಕಿಕೊಟ್ಟ ಅಪ್ರಜಾತಾಂತ್ರಿಕ ಮಾದರಿ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಮಂಗಳವಾರದ ಸಭೆ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಸ್.ವೈ. ಗುರುಶಾಂತ್, ಇದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಮುಖ್ಯಮಂತ್ರಿ ಇಲ್ಲವೆಂದರೆ ಒಬ್ಬ ಡಿಸಿಎಂ ಅವರಿಗೆ ಈ ಜವಾಬ್ದಾರಿ ನೀಡಬೇಕಿತ್ತು. ಡಿಸಿಎಂಗಳು ಇರುವುದಾದರೂ ಏತಕ್ಕೆ? ಸರ್ವಪಕ್ಷ ಸಭೆ ಎಂದರೆ ಅದು ರಾಜಕೀಯ ಪ್ರತಿನಿಧಿಗಳ ಸಭೆ. ಅಲ್ಲಿ ರಾಜ್ಯಪಾಲರಿಗೇನು ಕೆಲಸ? ರಾಜ್ಯಪಾಲರ ಮೂಲಕ ಹೇಳಿಸುವಂತಹ ದಿವಾಳಿತನಕ್ಕೆ ಈ ಸರ್ಕಾರ ತಲುಪಿದೆ. ಇದೊಂದು ಕೆಟ್ಟ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು’ ಹೇಳಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಮಾತನಾಡಿ, ‘ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿ ಸರ್ಕಾರವಿದು. ತಮ್ಮ ಜವಾಬ್ದಾರಿಯನ್ನು ಚುನಾಯಿತರಲ್ಲದ ರಾಜ್ಯಪಾಲರಿಗೆ ವರ್ಗಾಯಿಸುವ ಮೂಲಕ ಕೈ ತೊಳೆದುಕೊಂಡು, ಮತದಾರರಿಗೆ ಅವಮಾನ ಮಾಡಿದೆ ಈ ಸರ್ಕಾರ. ಶುದ್ಧ ಶತಮೂರ್ಖ ಜನಪ್ರತಿನಿಧಿಗಳ ಸರ್ಕಾರವಿದು’ ಎಂದು ಕಿಡಿಕಾರಿದ್ದಾರೆ.

ಸಿಎಂ ಬಂದಾಯ್ತು, ಮುಂದೆ?

ಈಗ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಬಂದಿದ್ದಾರೆ. ಈಗಲೂ ರಾಜ್ಯಪಾಲರ ಮೂಲಕವೇ ಆಡಳಿತ ನಡೆಯಲಿದೆಯೇ? ಅಥವಾ ಈ ಹಿಂದೆಯೂ ಯಡಿಯೂರಪ್ಪ ರಾಜ್ಯಪಾಲರು, ಆ ಮೂಲಕ ಪರೋಕ್ಷವಾಗಿ ಕೇಂದ್ರ ಬಿಜೆಪಿ ಹೇಳಿದಂತೆಯೇ ದಿನನಿತ್ಯದ ತೀರ್ಮಾನ ತೆಗೆದುಕೊಳ್ಳುತ್ತಿದ್ದರೇ?

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ಬಿಜೆಪಿ ಕರ್ನಾಟಕವನ್ನು ಆಳುತ್ತಿದೆಯಾ ಎಂಬ ಸಂಶಯ ಕಾಡುತ್ತಿದೆಯಲ್ಲವೆ?

  • ಪಿ.ಕೆ.ಮಲ್ಲನಗೌಡರ್

ಇದನ್ನು ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...