Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

- Advertisement -
- Advertisement -

ಇಲ್ಲಿ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯುತ್ತದೆ. ಕರ್ನಾಟಕಕ್ಕೆ ರಾಜ್ಯಪಾಲರಾದ ನಂತರ ಎಂದೂ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಸಭೆ ಕರೆಯದ ರಾಜ್ಯಪಾಲ ವಜುಭಾಯಿ ವಾಲಾರವರು ಬುಧವಾರ ಅಂತಹ ಸಭೆಯೊಂದನ್ನು ನಡೆಸಿದರು. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಜವಾಬ್ದಾರಿಯನ್ನು ವಿ.ಸಿ.ಗಳಿಗೆ ವಹಿಸುವ ವಿಷಯಕ್ಕೆ ಈ ಸಭೆ. ಉನ್ನತ ಶಿಕ್ಷಣ ಸಚಿವ ಮತ್ತು ಡಿಸಿಎಂ ಅಶ್ವತ್ ನಾರಾಯಣ್ ಈ ಸಭೆಯನ್ನು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಂಘಟಿಸಿದ್ದರು.

ಇವೆರಡೂ ಘಟನೆಗಳನ್ನು ನೋಡಿದರೆ ಮುಖ್ಯಮಂತ್ರಿ ಬಿಟ್ಟರೆ ರಾಜ್ಯದ ಸಚಿವ ಸಂಪುಟದ ಯಾರಿಗೂ ಅಧಿಕಾರವೇ ಇಲ್ಲವೇ? ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಇಲ್ಲಿ ಆಡಳಿತ ನಡೆಸುತ್ತಿದೆಯೇ? ಇದೇನು ಲೆಫ್ಟಿನೆಂಟ್ ಗವರ್ನರ್‌ಗಳನ್ನು ಹೊಂದಿರುವ ದೆಹಲಿ ಅಥವಾ ಪುದುಚೇರಿಯೇ ಎಂಬ ಪ್ರಶ್ನೆಗಳು ಎದ್ದಿದ್ದು ನಿಜ.

ಈಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಇಲ್ಲಿ ಸಾಂವಿಧಾನಿಕ ಉಲ್ಲಂಘನೆಯಂತೂ ಆಗಿದೆ.
ರಾಜ್ಯದ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯಪಾಲರು ಮಂಗಳವಾರ ಸರ್ವ ಪಕ್ಷ ಸಭೆ ಕರೆದಿದ್ದರು. ಇದು ಅಸಂವಿಧಾನಿಕ ಮಾರ್ಗವೇ ಆಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿ ಇದನ್ನು ಪ್ರಶ್ನಿಸಿಯೂ ರಾಜ್ಯಪಾಲ ಹುದ್ದೆಗೆ ಗೌರವ ಕೊಟ್ಟು ತಮ್ಮ ಅಭಿಪ್ರಾಯ ದಾಖಲಿಸಿದರು. ಈ ಸಭೆ ಕುರಿತಂತೆ ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ರಾಜಕಾರಣಿಗಳು ಆಕ್ಷೇಪ ಎತ್ತಿದ್ದರು.

ಕೇಂದ್ರ ಸರ್ಕಾರದ ಧೋರಣೆಯೇ ಹಾಗಿದೆಯಲ್ಲವೇ? ಅದು ಮುಖ್ಯಮಂತ್ರಿಗಳಿಗಿಂತ ಅಥವಾ ರಾಜ್ಯದ ಇತರ ಚುನಾಯಿತ ಪ್ರತಿನಿಧಿಗಳಿಗಿಂತ ಕೇಂದ್ರದಿಂದ ನೇಮಕಗೊಂಡ ರಾಜ್ಯಪಾಲರುಗಳಿಗೆ ಆದ್ಯತೆ ನೀಡುತ್ತ ಬಂದಿದೆ. ಕೊರೋನಾ ನಿಯಂತ್ರಣ ಕುರಿತಂತೆ ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಪಾಲರೊಂದಿಗೆ ವಿಡಿಯೋ ಸಂವಾದ ನಡೆಸಿದ್ದನ್ನು ಇಲ್ಲಿ ಗಮನಿಸಬಹುದು.

ಇದೇ ಪರಂಪರೆಯಲ್ಲಿ ರಾಜ್ಯ ಸರ್ಕಾರ ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭ ಬಳಸಿಕೊಂಡು ಮಂಗಳವಾರ ಕೋವಿಡ್ ಪರಿಸ್ಥಿತಿ ಚರ್ಚಿಸಲು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಜರುಗಿ, ವಿವಾದಕ್ಕೆ ಕಾರಣವಾಗಿದೆ.

ಆಸ್ಪತ್ರೆಯಲ್ಲಿದ್ದಾಗ ಯಡಿಯೂರಪ್ಪರ ಆರೋಗ್ಯ ಸ್ಥಿರವಾಗಿತ್ತು ಮತ್ತು ಅವರು ಸಂಪುಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದರು. ಆದರೆ ಸರ್ವಪಕ್ಷ ಸಭೆಯಲ್ಲೆಕೆ ವಿಡಿಯೋ ಸಂವಾದದ ನೆರವು ಪಡೆಯಲಿಲ್ಲ?

ರಾಜ್ಯಪಾಲರು ಚುನಾಯಿತ ಪ್ರತಿನಿಧಿಯಲ್ಲ. ಅವರು ಕೇಂದ್ರಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರಪತಿಗಳಿಂದ ನೇಮಕಗೊಂಡವರು. ಮುಖ್ಯಮಂತ್ರಿ ಅನುಪಸ್ಥಿತಿಯಲ್ಲಿ ಸಭಾಪತಿ ಅಥವಾ ಉಪ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಸಬಹುದಿತ್ತು ಅಲ್ಲವೇ? ಮೂವರು ಡಿಸಿಎಂಗಳ ಪೈಕಿ ಹಿರಿಯರಾದ ಗೋವಿಂದ ಕಾರಜೋಳರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬಹುದಿತ್ತಲ್ಲ? ಅಥವಾ ನಮ್ಮ ಸಚಿವರೆಲ್ಲರೂ ಜನರಿಗೆ ಉತ್ತರಿಸುವ ನೈತಿಕತೆಯನ್ನೇ ಕಳೆದುಕೊಂಡು ತಮ್ಮ ಜವಾಬ್ದಾರಿಯನ್ನು ರಾಜ್ಯಪಾಲರಿಗೆ ವರ್ಗಾಯಿಸಿದರೆ?

ಕೇಂದ್ರ ಸರ್ಕಾರ ಹಾಕಿಕೊಟ್ಟ ಅಪ್ರಜಾತಾಂತ್ರಿಕ ಮಾದರಿ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಮಂಗಳವಾರದ ಸಭೆ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಸ್.ವೈ. ಗುರುಶಾಂತ್, ಇದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಮುಖ್ಯಮಂತ್ರಿ ಇಲ್ಲವೆಂದರೆ ಒಬ್ಬ ಡಿಸಿಎಂ ಅವರಿಗೆ ಈ ಜವಾಬ್ದಾರಿ ನೀಡಬೇಕಿತ್ತು. ಡಿಸಿಎಂಗಳು ಇರುವುದಾದರೂ ಏತಕ್ಕೆ? ಸರ್ವಪಕ್ಷ ಸಭೆ ಎಂದರೆ ಅದು ರಾಜಕೀಯ ಪ್ರತಿನಿಧಿಗಳ ಸಭೆ. ಅಲ್ಲಿ ರಾಜ್ಯಪಾಲರಿಗೇನು ಕೆಲಸ? ರಾಜ್ಯಪಾಲರ ಮೂಲಕ ಹೇಳಿಸುವಂತಹ ದಿವಾಳಿತನಕ್ಕೆ ಈ ಸರ್ಕಾರ ತಲುಪಿದೆ. ಇದೊಂದು ಕೆಟ್ಟ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು’ ಹೇಳಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಮಾತನಾಡಿ, ‘ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿ ಸರ್ಕಾರವಿದು. ತಮ್ಮ ಜವಾಬ್ದಾರಿಯನ್ನು ಚುನಾಯಿತರಲ್ಲದ ರಾಜ್ಯಪಾಲರಿಗೆ ವರ್ಗಾಯಿಸುವ ಮೂಲಕ ಕೈ ತೊಳೆದುಕೊಂಡು, ಮತದಾರರಿಗೆ ಅವಮಾನ ಮಾಡಿದೆ ಈ ಸರ್ಕಾರ. ಶುದ್ಧ ಶತಮೂರ್ಖ ಜನಪ್ರತಿನಿಧಿಗಳ ಸರ್ಕಾರವಿದು’ ಎಂದು ಕಿಡಿಕಾರಿದ್ದಾರೆ.

ಸಿಎಂ ಬಂದಾಯ್ತು, ಮುಂದೆ?

ಈಗ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಬಂದಿದ್ದಾರೆ. ಈಗಲೂ ರಾಜ್ಯಪಾಲರ ಮೂಲಕವೇ ಆಡಳಿತ ನಡೆಯಲಿದೆಯೇ? ಅಥವಾ ಈ ಹಿಂದೆಯೂ ಯಡಿಯೂರಪ್ಪ ರಾಜ್ಯಪಾಲರು, ಆ ಮೂಲಕ ಪರೋಕ್ಷವಾಗಿ ಕೇಂದ್ರ ಬಿಜೆಪಿ ಹೇಳಿದಂತೆಯೇ ದಿನನಿತ್ಯದ ತೀರ್ಮಾನ ತೆಗೆದುಕೊಳ್ಳುತ್ತಿದ್ದರೇ?

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ಬಿಜೆಪಿ ಕರ್ನಾಟಕವನ್ನು ಆಳುತ್ತಿದೆಯಾ ಎಂಬ ಸಂಶಯ ಕಾಡುತ್ತಿದೆಯಲ್ಲವೆ?

  • ಪಿ.ಕೆ.ಮಲ್ಲನಗೌಡರ್

ಇದನ್ನು ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....