Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

- Advertisement -
- Advertisement -

ಇಲ್ಲಿ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯುತ್ತದೆ. ಕರ್ನಾಟಕಕ್ಕೆ ರಾಜ್ಯಪಾಲರಾದ ನಂತರ ಎಂದೂ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಸಭೆ ಕರೆಯದ ರಾಜ್ಯಪಾಲ ವಜುಭಾಯಿ ವಾಲಾರವರು ಬುಧವಾರ ಅಂತಹ ಸಭೆಯೊಂದನ್ನು ನಡೆಸಿದರು. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಜವಾಬ್ದಾರಿಯನ್ನು ವಿ.ಸಿ.ಗಳಿಗೆ ವಹಿಸುವ ವಿಷಯಕ್ಕೆ ಈ ಸಭೆ. ಉನ್ನತ ಶಿಕ್ಷಣ ಸಚಿವ ಮತ್ತು ಡಿಸಿಎಂ ಅಶ್ವತ್ ನಾರಾಯಣ್ ಈ ಸಭೆಯನ್ನು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಂಘಟಿಸಿದ್ದರು.

ಇವೆರಡೂ ಘಟನೆಗಳನ್ನು ನೋಡಿದರೆ ಮುಖ್ಯಮಂತ್ರಿ ಬಿಟ್ಟರೆ ರಾಜ್ಯದ ಸಚಿವ ಸಂಪುಟದ ಯಾರಿಗೂ ಅಧಿಕಾರವೇ ಇಲ್ಲವೇ? ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಇಲ್ಲಿ ಆಡಳಿತ ನಡೆಸುತ್ತಿದೆಯೇ? ಇದೇನು ಲೆಫ್ಟಿನೆಂಟ್ ಗವರ್ನರ್‌ಗಳನ್ನು ಹೊಂದಿರುವ ದೆಹಲಿ ಅಥವಾ ಪುದುಚೇರಿಯೇ ಎಂಬ ಪ್ರಶ್ನೆಗಳು ಎದ್ದಿದ್ದು ನಿಜ.

ಈಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಇಲ್ಲಿ ಸಾಂವಿಧಾನಿಕ ಉಲ್ಲಂಘನೆಯಂತೂ ಆಗಿದೆ.
ರಾಜ್ಯದ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯಪಾಲರು ಮಂಗಳವಾರ ಸರ್ವ ಪಕ್ಷ ಸಭೆ ಕರೆದಿದ್ದರು. ಇದು ಅಸಂವಿಧಾನಿಕ ಮಾರ್ಗವೇ ಆಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿ ಇದನ್ನು ಪ್ರಶ್ನಿಸಿಯೂ ರಾಜ್ಯಪಾಲ ಹುದ್ದೆಗೆ ಗೌರವ ಕೊಟ್ಟು ತಮ್ಮ ಅಭಿಪ್ರಾಯ ದಾಖಲಿಸಿದರು. ಈ ಸಭೆ ಕುರಿತಂತೆ ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ರಾಜಕಾರಣಿಗಳು ಆಕ್ಷೇಪ ಎತ್ತಿದ್ದರು.

ಕೇಂದ್ರ ಸರ್ಕಾರದ ಧೋರಣೆಯೇ ಹಾಗಿದೆಯಲ್ಲವೇ? ಅದು ಮುಖ್ಯಮಂತ್ರಿಗಳಿಗಿಂತ ಅಥವಾ ರಾಜ್ಯದ ಇತರ ಚುನಾಯಿತ ಪ್ರತಿನಿಧಿಗಳಿಗಿಂತ ಕೇಂದ್ರದಿಂದ ನೇಮಕಗೊಂಡ ರಾಜ್ಯಪಾಲರುಗಳಿಗೆ ಆದ್ಯತೆ ನೀಡುತ್ತ ಬಂದಿದೆ. ಕೊರೋನಾ ನಿಯಂತ್ರಣ ಕುರಿತಂತೆ ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಪಾಲರೊಂದಿಗೆ ವಿಡಿಯೋ ಸಂವಾದ ನಡೆಸಿದ್ದನ್ನು ಇಲ್ಲಿ ಗಮನಿಸಬಹುದು.

ಇದೇ ಪರಂಪರೆಯಲ್ಲಿ ರಾಜ್ಯ ಸರ್ಕಾರ ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭ ಬಳಸಿಕೊಂಡು ಮಂಗಳವಾರ ಕೋವಿಡ್ ಪರಿಸ್ಥಿತಿ ಚರ್ಚಿಸಲು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಜರುಗಿ, ವಿವಾದಕ್ಕೆ ಕಾರಣವಾಗಿದೆ.

ಆಸ್ಪತ್ರೆಯಲ್ಲಿದ್ದಾಗ ಯಡಿಯೂರಪ್ಪರ ಆರೋಗ್ಯ ಸ್ಥಿರವಾಗಿತ್ತು ಮತ್ತು ಅವರು ಸಂಪುಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದರು. ಆದರೆ ಸರ್ವಪಕ್ಷ ಸಭೆಯಲ್ಲೆಕೆ ವಿಡಿಯೋ ಸಂವಾದದ ನೆರವು ಪಡೆಯಲಿಲ್ಲ?

ರಾಜ್ಯಪಾಲರು ಚುನಾಯಿತ ಪ್ರತಿನಿಧಿಯಲ್ಲ. ಅವರು ಕೇಂದ್ರಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರಪತಿಗಳಿಂದ ನೇಮಕಗೊಂಡವರು. ಮುಖ್ಯಮಂತ್ರಿ ಅನುಪಸ್ಥಿತಿಯಲ್ಲಿ ಸಭಾಪತಿ ಅಥವಾ ಉಪ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಸಬಹುದಿತ್ತು ಅಲ್ಲವೇ? ಮೂವರು ಡಿಸಿಎಂಗಳ ಪೈಕಿ ಹಿರಿಯರಾದ ಗೋವಿಂದ ಕಾರಜೋಳರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬಹುದಿತ್ತಲ್ಲ? ಅಥವಾ ನಮ್ಮ ಸಚಿವರೆಲ್ಲರೂ ಜನರಿಗೆ ಉತ್ತರಿಸುವ ನೈತಿಕತೆಯನ್ನೇ ಕಳೆದುಕೊಂಡು ತಮ್ಮ ಜವಾಬ್ದಾರಿಯನ್ನು ರಾಜ್ಯಪಾಲರಿಗೆ ವರ್ಗಾಯಿಸಿದರೆ?

ಕೇಂದ್ರ ಸರ್ಕಾರ ಹಾಕಿಕೊಟ್ಟ ಅಪ್ರಜಾತಾಂತ್ರಿಕ ಮಾದರಿ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಮಂಗಳವಾರದ ಸಭೆ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಸ್.ವೈ. ಗುರುಶಾಂತ್, ಇದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಮುಖ್ಯಮಂತ್ರಿ ಇಲ್ಲವೆಂದರೆ ಒಬ್ಬ ಡಿಸಿಎಂ ಅವರಿಗೆ ಈ ಜವಾಬ್ದಾರಿ ನೀಡಬೇಕಿತ್ತು. ಡಿಸಿಎಂಗಳು ಇರುವುದಾದರೂ ಏತಕ್ಕೆ? ಸರ್ವಪಕ್ಷ ಸಭೆ ಎಂದರೆ ಅದು ರಾಜಕೀಯ ಪ್ರತಿನಿಧಿಗಳ ಸಭೆ. ಅಲ್ಲಿ ರಾಜ್ಯಪಾಲರಿಗೇನು ಕೆಲಸ? ರಾಜ್ಯಪಾಲರ ಮೂಲಕ ಹೇಳಿಸುವಂತಹ ದಿವಾಳಿತನಕ್ಕೆ ಈ ಸರ್ಕಾರ ತಲುಪಿದೆ. ಇದೊಂದು ಕೆಟ್ಟ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು’ ಹೇಳಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಮಾತನಾಡಿ, ‘ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿ ಸರ್ಕಾರವಿದು. ತಮ್ಮ ಜವಾಬ್ದಾರಿಯನ್ನು ಚುನಾಯಿತರಲ್ಲದ ರಾಜ್ಯಪಾಲರಿಗೆ ವರ್ಗಾಯಿಸುವ ಮೂಲಕ ಕೈ ತೊಳೆದುಕೊಂಡು, ಮತದಾರರಿಗೆ ಅವಮಾನ ಮಾಡಿದೆ ಈ ಸರ್ಕಾರ. ಶುದ್ಧ ಶತಮೂರ್ಖ ಜನಪ್ರತಿನಿಧಿಗಳ ಸರ್ಕಾರವಿದು’ ಎಂದು ಕಿಡಿಕಾರಿದ್ದಾರೆ.

ಸಿಎಂ ಬಂದಾಯ್ತು, ಮುಂದೆ?

ಈಗ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಬಂದಿದ್ದಾರೆ. ಈಗಲೂ ರಾಜ್ಯಪಾಲರ ಮೂಲಕವೇ ಆಡಳಿತ ನಡೆಯಲಿದೆಯೇ? ಅಥವಾ ಈ ಹಿಂದೆಯೂ ಯಡಿಯೂರಪ್ಪ ರಾಜ್ಯಪಾಲರು, ಆ ಮೂಲಕ ಪರೋಕ್ಷವಾಗಿ ಕೇಂದ್ರ ಬಿಜೆಪಿ ಹೇಳಿದಂತೆಯೇ ದಿನನಿತ್ಯದ ತೀರ್ಮಾನ ತೆಗೆದುಕೊಳ್ಳುತ್ತಿದ್ದರೇ?

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ಬಿಜೆಪಿ ಕರ್ನಾಟಕವನ್ನು ಆಳುತ್ತಿದೆಯಾ ಎಂಬ ಸಂಶಯ ಕಾಡುತ್ತಿದೆಯಲ್ಲವೆ?

  • ಪಿ.ಕೆ.ಮಲ್ಲನಗೌಡರ್

ಇದನ್ನು ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...