Homeಕರ್ನಾಟಕರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆದಿದ್ದು, ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸದನದಿಂದ ರಾಜ್ಯಪಾಲರು ಹೊರನಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯಾ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ 176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿ ರಾಮ್ ಜಿ ( ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ” ಎಂದರು.

“ಮೊದಲನೆಯದಾಗಿ, ಉದ್ಯೋಗ ಖಾತ್ರಿ ಕಾಯ್ದೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗಿತ್ತು” ಎಂದು ಹೇಳಿದರು.

“ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿಯೇ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಳಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೆ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ” ಎಂದು ವಿವರಿಸಿದರು.

“ರಾಜ್ಯಪಾಲರು ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು. ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮನರೇಗಾ ಮರುಸ್ಥಾಪನೆ ಮಾಡುವವರೆಗೆ ನಮ್ಮ ಹೋರಾಟ ನಿರಂತರವಾಗಿರಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ” ಎಂದರು.

“ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಕಲಂ 176 ಮತ್ತು 163 ರಂತೆ ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡು ಬಂದಿರುವ ಪದ್ಧತಿ, ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

“ಇದನ್ನು ನಮ್ಮ ಪಕ್ಷ ಮತ್ತು ಸರ್ಕಾರ, ಶಾಸಕರು, ಎಂಎಲ್‌ಸಿ ಗಳು ಪ್ರತಿಭಟನೆ ಮೂಲಕ ವಿರೋಧಿಸುತ್ತೇವೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ. ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್ ಸಿಗಳಿಗೆ ವಿತರಿಸಲಾಗಿದೆ. ಇದರ ಬಗ್ಗೆ ಚರ್ಚಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...