Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

- Advertisement -
- Advertisement -

ದೇಶದಾದ್ಯಂತ ಕೊರೊನಾ ಸೋಂಕಿನ ಎರಡನೆ ಅಲೆ ತೀವ್ರ ರೀತಿಯಲ್ಲಿ ಹಬ್ಬುತ್ತಿದ್ದು, ಹಲವಾರು ರಾಜ್ಯಗಳಲ್ಲಿ ಸೋಂಕಿತರು ಬೆಡ್, ಆಮ್ಲಜನಕ, ಔಷಧಿ ಸಿಗದೇ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಕೂಡಾ ಕೊರೊನಾ ತನ್ನ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹೊತ್ತಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ಹೆಚ್ಚಿನ ಯಾವುದೆ ಸೌಲಭ್ಯಗಳನ್ನು ಮಾಡುತ್ತಿರುವಂತೆ ತೋರುತ್ತಿಲ್ಲ. ಎರಡನೆ ಬಾರಿಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಚುನಾಯಿತ ಸರ್ಕಾರ ಇರಬೇಕಾದರೆ ರಾಜ್ಯಪಾಲರು ಸರ್ವಪಕ್ಷಗಳ ಸಭೆಯನ್ನು ನಡೆಸಿ ಅನಧೀಕೃತವಾಗಿ ರಾಜ್ಯದ ಆಡಳಿತ ಯಂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇದು ರಾಜ್ಯದ ಮುಖ್ಯಮಂತ್ರಿಯ ಬದಲಾವಣೆಗೆ ವೇದಿಕೆ ತಯಾರಾಗುತ್ತಿದೆಯೆ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ನಡೆದಿದ್ದು, ರಾಜ್ಯಗಳು ತಮ್ಮ ಸ್ವಾಯತ್ತತೆ ಕಳೆದುಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ಮಾಡುತ್ತಿದೆ ಎಂದು ಆರೋಪಗಳು ಎದ್ದಿದೆ. ಆರೋಪವನ್ನು ಸಮರ್ಥಿಸುವಂತೆ ಚುನಾಯಿತ ಸರ್ಕಾರ ಇದ್ದಾಗಲು ರಾಜ್ಯಪಾಲರು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಬಿಜೆಪಿ ಪಕ್ಷದೊಳಗೆ ಯಡಿಯೂರಪ್ಪ ವಿರುದ್ದ ಮೊದಲಿನಿಂದಲೂ ಅಸಮಾಧಾನಗಳು ಇದ್ದವು. ಹಲವಾರು ಬಿಜೆಪಿ ನಾಯಕರು ಬಹಿರಂಗವಾಗಿಯೆ ಯಡಿಯೂರಪ್ಪ ಅವರ ವಿರುದ್ದ ಕಿಡಿಕಾರಿದ್ದರು. ಬಿಜೆಪಿಯ ಉನ್ನತ ನಾಯಕರಿಗೂ ಬಿಎಸ್‌ವೈ ಮುಖ್ಯಮಂತ್ರಿ ಆಗುವುದು ಬೇಕಿರಲಿಲ್ಲ. ಆದರೆ ಯಡಿಯೂರಪ್ಪ ಅವರ ಜಾತಿ ಬಲ, ನಾಯಕತ್ವ ಇವೆಲ್ಲವನ್ನು ಕಟ್ಟಿ ಹಾಕುವಂತಾಗಿತ್ತು.

ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಇನ್ನು ರಾಜ್ಯಪಾಲರು ಕರೆದಿದ್ದ ಸರ್ವಪಕ್ಷಗಳ ಸಭೆಗೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಅಂದು ಟ್ವೀಟ್‌‌ ಮಾಡಿದ್ದ ಕಾಂಗ್ರೆಸ್‌, “ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಾಮರ್ಥ್ಯವೇ ಅಥವಾ ಬಿಎಸ್‌ವೈ ಮುಕ್ತ ಬಿಜೆಪಿ ಅಭಿಯಾನದ ಭಾಗವೇ? ಎಂದು ಪ್ರಶ್ನಿಸಿತ್ತು. ಜೊತೆಗೆ ಆಡಳಿತ ಪಕ್ಷದವರಾದ ಸಚಿವ ಈಶ್ವರಪ್ಪ ಕೂಡಾ ಸಭೆಯ ಬಗ್ಗೆ ಅಪಸ್ವರ ಎತ್ತಿದ್ದರು.

ಇಷ್ಟಕ್ಕೆ ನಿಲ್ಲದೆ ರಾಜ್ಯಪಾಲರು, ಬುಧವಾರದಂದು ವಿಶ್ವವಿದ್ಯಾಲಯಗಳಲ್ಲಿ ಕೋವಿಡ್‌ ನಿರ್ವಹಣೆ ಕುರಿತು ಕುಲಪತಿಗಳ ಸಮಾವೇಶವನ್ನು ಕೂಡಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಸಿದ್ದಾರೆ. ರಾಜಭವನದಲ್ಲಿ ಬುಧವಾರ ಸಂಜೆ ರಾಜ್ಯಪಾಲರು ಕರೆದಿದ್ದ ಸಮಾವೇಶದಲ್ಲಿ ವಿಶ್ವವಿದ್ಯಾಲಯಗಳು, ಅವುಗಳ ವ್ಯಾಪ್ತಿಯಲ್ಲಿರುವ ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಲ್ಲ ಕುಲಪತಿಗಳಿಗೆ ಸೂಚಿಸಿದ್ದಾರೆ.

ರಾಜ್ಯಪಾಲರ ಈ ನಡೆಯ ಹಿಂದೆ ಆರ್‌ಎಸ್‌ಎಸ್‌ ಹಿನ್ನೆಲೆಯ ಬಿ.ಎಲ್ ಸಂತೋಷ್ ಇದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದೀಗ ಮುಖ್ಯಮಂತ್ರಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪರಿಸ್ಥಿತಿ ಕೆಟ್ಟದಾಗಿದೆ. ಜೊತೆಗೆ ರಾಜಕೀಯವು ನಡೆಯುತ್ತಿದೆ. ಇದೆಲ್ಲವೂ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...