Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

- Advertisement -
- Advertisement -

ದೇಶದಾದ್ಯಂತ ಕೊರೊನಾ ಸೋಂಕಿನ ಎರಡನೆ ಅಲೆ ತೀವ್ರ ರೀತಿಯಲ್ಲಿ ಹಬ್ಬುತ್ತಿದ್ದು, ಹಲವಾರು ರಾಜ್ಯಗಳಲ್ಲಿ ಸೋಂಕಿತರು ಬೆಡ್, ಆಮ್ಲಜನಕ, ಔಷಧಿ ಸಿಗದೇ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಕೂಡಾ ಕೊರೊನಾ ತನ್ನ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹೊತ್ತಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ಹೆಚ್ಚಿನ ಯಾವುದೆ ಸೌಲಭ್ಯಗಳನ್ನು ಮಾಡುತ್ತಿರುವಂತೆ ತೋರುತ್ತಿಲ್ಲ. ಎರಡನೆ ಬಾರಿಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಚುನಾಯಿತ ಸರ್ಕಾರ ಇರಬೇಕಾದರೆ ರಾಜ್ಯಪಾಲರು ಸರ್ವಪಕ್ಷಗಳ ಸಭೆಯನ್ನು ನಡೆಸಿ ಅನಧೀಕೃತವಾಗಿ ರಾಜ್ಯದ ಆಡಳಿತ ಯಂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇದು ರಾಜ್ಯದ ಮುಖ್ಯಮಂತ್ರಿಯ ಬದಲಾವಣೆಗೆ ವೇದಿಕೆ ತಯಾರಾಗುತ್ತಿದೆಯೆ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ನಡೆದಿದ್ದು, ರಾಜ್ಯಗಳು ತಮ್ಮ ಸ್ವಾಯತ್ತತೆ ಕಳೆದುಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ಮಾಡುತ್ತಿದೆ ಎಂದು ಆರೋಪಗಳು ಎದ್ದಿದೆ. ಆರೋಪವನ್ನು ಸಮರ್ಥಿಸುವಂತೆ ಚುನಾಯಿತ ಸರ್ಕಾರ ಇದ್ದಾಗಲು ರಾಜ್ಯಪಾಲರು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಬಿಜೆಪಿ ಪಕ್ಷದೊಳಗೆ ಯಡಿಯೂರಪ್ಪ ವಿರುದ್ದ ಮೊದಲಿನಿಂದಲೂ ಅಸಮಾಧಾನಗಳು ಇದ್ದವು. ಹಲವಾರು ಬಿಜೆಪಿ ನಾಯಕರು ಬಹಿರಂಗವಾಗಿಯೆ ಯಡಿಯೂರಪ್ಪ ಅವರ ವಿರುದ್ದ ಕಿಡಿಕಾರಿದ್ದರು. ಬಿಜೆಪಿಯ ಉನ್ನತ ನಾಯಕರಿಗೂ ಬಿಎಸ್‌ವೈ ಮುಖ್ಯಮಂತ್ರಿ ಆಗುವುದು ಬೇಕಿರಲಿಲ್ಲ. ಆದರೆ ಯಡಿಯೂರಪ್ಪ ಅವರ ಜಾತಿ ಬಲ, ನಾಯಕತ್ವ ಇವೆಲ್ಲವನ್ನು ಕಟ್ಟಿ ಹಾಕುವಂತಾಗಿತ್ತು.

ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಇನ್ನು ರಾಜ್ಯಪಾಲರು ಕರೆದಿದ್ದ ಸರ್ವಪಕ್ಷಗಳ ಸಭೆಗೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಅಂದು ಟ್ವೀಟ್‌‌ ಮಾಡಿದ್ದ ಕಾಂಗ್ರೆಸ್‌, “ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಾಮರ್ಥ್ಯವೇ ಅಥವಾ ಬಿಎಸ್‌ವೈ ಮುಕ್ತ ಬಿಜೆಪಿ ಅಭಿಯಾನದ ಭಾಗವೇ? ಎಂದು ಪ್ರಶ್ನಿಸಿತ್ತು. ಜೊತೆಗೆ ಆಡಳಿತ ಪಕ್ಷದವರಾದ ಸಚಿವ ಈಶ್ವರಪ್ಪ ಕೂಡಾ ಸಭೆಯ ಬಗ್ಗೆ ಅಪಸ್ವರ ಎತ್ತಿದ್ದರು.

ಇಷ್ಟಕ್ಕೆ ನಿಲ್ಲದೆ ರಾಜ್ಯಪಾಲರು, ಬುಧವಾರದಂದು ವಿಶ್ವವಿದ್ಯಾಲಯಗಳಲ್ಲಿ ಕೋವಿಡ್‌ ನಿರ್ವಹಣೆ ಕುರಿತು ಕುಲಪತಿಗಳ ಸಮಾವೇಶವನ್ನು ಕೂಡಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಸಿದ್ದಾರೆ. ರಾಜಭವನದಲ್ಲಿ ಬುಧವಾರ ಸಂಜೆ ರಾಜ್ಯಪಾಲರು ಕರೆದಿದ್ದ ಸಮಾವೇಶದಲ್ಲಿ ವಿಶ್ವವಿದ್ಯಾಲಯಗಳು, ಅವುಗಳ ವ್ಯಾಪ್ತಿಯಲ್ಲಿರುವ ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಲ್ಲ ಕುಲಪತಿಗಳಿಗೆ ಸೂಚಿಸಿದ್ದಾರೆ.

ರಾಜ್ಯಪಾಲರ ಈ ನಡೆಯ ಹಿಂದೆ ಆರ್‌ಎಸ್‌ಎಸ್‌ ಹಿನ್ನೆಲೆಯ ಬಿ.ಎಲ್ ಸಂತೋಷ್ ಇದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದೀಗ ಮುಖ್ಯಮಂತ್ರಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪರಿಸ್ಥಿತಿ ಕೆಟ್ಟದಾಗಿದೆ. ಜೊತೆಗೆ ರಾಜಕೀಯವು ನಡೆಯುತ್ತಿದೆ. ಇದೆಲ್ಲವೂ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...