Homeಮುಖಪುಟಮಹಾರಾಷ್ಟ್ರ ರಾಜ್ಯಪಾಲರ ಪತ್ರ ವಿವಾದ; ಸ್ವಾಭಿಮಾನಿಗಳು ಹುದ್ದೆಯಲ್ಲಿ ಮುಂದುವರಿಯುವುದಿಲ್ಲ: ಶರದ್ ಪವಾರ್!

ಮಹಾರಾಷ್ಟ್ರ ರಾಜ್ಯಪಾಲರ ಪತ್ರ ವಿವಾದ; ಸ್ವಾಭಿಮಾನಿಗಳು ಹುದ್ದೆಯಲ್ಲಿ ಮುಂದುವರಿಯುವುದಿಲ್ಲ: ಶರದ್ ಪವಾರ್!

ಕೆಲವು ಪದಗಳ ಬಳಕೆಯನ್ನು ನಿಯಂತ್ರಿಸಬೇಕಿತ್ತು ಎಂದು ರಾಜ್ಯಪಾಲರು ಬರೆದ ಪತ್ರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮೇಲೆ ಇಂದು ನೇರ ದಾಳಿ ನಡೆಸಿದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, “ಸ್ವಾಭಿಮಾನ ಹೊಂದಿರುವ ಯಾರಾದರೂ ಈ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವೆ ಇತ್ತೀಚೆಗೆ ಉಂಟಾದ ಪತ್ರ-ಯುದ್ಧದ ಪ್ರಶ್ನೆಗೆ ಉತ್ತರಿಸಿದ ಪವಾರ್, “ಸ್ವಾಭಿಮಾನ ಹೊಂದಿರುವ ಯಾರಾದರೂ ಈ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ. ಅವರನ್ನು ತೆಗೆದುಹಾಕುವ ಯಾವುದೇ ಬೇಡಿಕೆಗಳನ್ನು ಸಲ್ಲಿಸಲು ನಾವು ಯಾರು” ಎಂದು ಹೇಳಿದ್ದಾರೆ.

“ಕೆಲವು ಪದಗಳ ಬಳಕೆಯನ್ನು ನಿಯಂತ್ರಿಸಬೇಕಿತ್ತು ಎಂದು ರಾಜ್ಯಪಾಲರು ಬರೆದ ಪತ್ರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಅವರು ಉಲ್ಲೇಖಿಸಿದರು.

“ಅಮಿತ್ ಶಾ ಅವರ ಹೇಳಿಕೆಯ ನಂತರ, ಸ್ವಾಭಿಮಾನ ಹೊಂದಿರುವ ಯಾರಾದರೂ (ರಾಜ್ಯಪಾಲರ) ಹುದ್ದೆಯಲ್ಲಿ ಮುಂದುವರಿಯಬೇಕೇ” ಎಂದು ಶರದ್ ಪವಾರ್ ಹೇಳಿದರು.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಆದರೆ, ಶರದ್ ಪವಾರ್ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯಪಾಲರ ಬಗ್ಗೆ ದೂರು ನೀಡಿ ಪತ್ರವೊಂದನ್ನು ಬರೆದಿದ್ದರು. ಇದಾದ ನಂತರ ಅಮಿತ್ ಶಾ ರಾಜ್ಯಪಾಲರ ಭಾಷೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಶಿವಸೇನೆ ಮುಖ್ಯ ವಕ್ತಾರ ಮತ್ತು ಸಂಸದ ಸಂಜಯ್ ರಾವತ್, ಅಮಿತ್ ಶಾ ಅವರ ಹೇಳಿಕೆಗಳನ್ನು ಶ್ಲಾಘಿಸಿದ್ದಾರೆ.

ರಾಜ್ಯದ ಪೂಜಾ ಸ್ಥಳಗಳನ್ನು ಪುನಃ ತೆರೆಯುವ ವಿಷಯದ ಬಗ್ಗೆ ಕೊಶಾರಿ ಅಕ್ಟೋಬರ್ 12 ರಂದು ಠಾಕ್ರೆ ಅವರಿಗೆ ಪತ್ರ ಬರೆದಿದ್ದು, ಠಾಕ್ರೆಯ ಹಿಂದುತ್ವ ರುಜುವಾತುಗಳನ್ನು ಪ್ರಶ್ನಿಸಿ, ಸಿಎಂ ಇದ್ದಕ್ಕಿದ್ದಂತೆ ಜಾತ್ಯತೀತವಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದರು.

ತನಗೆ ಯಾರಿಂದಲೂ ‘ಹಿಂದುತ್ವದ’ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಠಾಕ್ರೆ ತಿರುಗೇಟು ನೀಡಿದ್ದರು. ಆದರೆ ಕೊರೊನಾ ಸಾಂಕ್ರಾಮಿಕದ ಸಮಸ್ಯೆಯನ್ನು ಗಣನೆಗೆ ತೆಗೆದುಕೊಂಡು ಪೂಜಾ ಸ್ಥಳಗಳನ್ನು ಪುನಃ ತೆರೆಯುವ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದರು. ಕೊರೊನಾ ಸೋಂಕಿತರ ಪ್ರಮಾಣದಲ್ಲಿ ದೇಶದಲ್ಲಿಯೇ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದೆ.


ಇದನ್ನೂ ಓದಿ: ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...