Homeಕರ್ನಾಟಕರಾಜ್ಯಪಾಲರ ನಡೆ ಸಂಪೂರ್ಣ ಅಸಂವಿಧಾನಿಕ; ಕರ್ನಾಟಕಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ: ಬಿ.ಕೆ. ಹರಿಪ್ರಸಾದ್

ರಾಜ್ಯಪಾಲರ ನಡೆ ಸಂಪೂರ್ಣ ಅಸಂವಿಧಾನಿಕ; ಕರ್ನಾಟಕಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ: ಬಿ.ಕೆ. ಹರಿಪ್ರಸಾದ್

- Advertisement -
- Advertisement -

‘ಜಂಟಿ ಸದನಳನ್ನು ಉದ್ದೇಶಿಸಿ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಸಂಪೂರ್ಣ ಅಸಂವಿಧಾನಿಕ; ಅವರು ಕರ್ನಾಟಕದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ರಾಜ್ಯಪಾಲರು ಭಾಷಣ ಮಾಡದೆ ವಿಧಾನಸೌಧದಿಂದ ತೆರಳಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹರಿಪ್ರಸಾದ್, “ಕರ್ನಾಟಕ ರಾಜ್ಯ ಮತ್ತು ವಿಧಾನಮಂಡಲದ ಇತಿಹಾಸಕ್ಕೆ ಮಸಿ ಬಳಿಯುವ ಕೆಲಸವನ್ನು ರಾಜ್ಯಪಾಲರು ಮಾಡಿದ್ದಾರೆ. ಅವರು, ಆರ್‌ಎಸ್‌ಎಸ್‌, ಮೋಹನ್ ಭಾಗವತ್, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ನಿರ್ದೇಶನದ ಭಾಷಣ ಮಾಡಲು ನಿರಾಕರಿಸಿದ್ದಾರೆ” ಎಂದರು.

“ಸಂವಿಧಾನದ ಆರ್ಟಿಕಲ್ 176 ಪ್ರಕಾರ, ರಾಜ್ಯಪಾಲರು ರಾಜ್ಯ ವಿಧಾನಮಂಡಲದ ಮೊದಲ ಅಧಿವೇಶನದಲ್ಲಿ ವಿಶೇಷ ಭಾಷಣ ಮಾಡಬೇಕು ಎಂದು ಕಡ್ಡಾಯಗೊಳಿಸುತ್ತದೆ. ಅವರು ಭಾಷಣ ಓದಲು ನಿರಾಕರಿಸಲು ಸಾಧ್ಯವಿಲ್ಲ. ಕರ್ನಾಟಕ ರಾಜ್ಯದ ಪ್ರಗತಿ ಮತ್ತು ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ರಾಜ್ಯಪಾಲರ ಸ್ಥಾನಮಾನಕ್ಕೆ ಮಸಿ ಬಳಿಯುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ. ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಇರುವ ವವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಭದ್ರತಾ ಪಡೆ ಮತ್ತು ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ. ನನ್ನ ಮೇಲೆ ಕೈ ಮಾಡುವ ಹಂತಕ್ಕೆ ಕೂಡ ಬಂದಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಕೊಡುವಷ್ಟು ಹೇಡಿ ನಾನಲ್ಲ. ಅವರಿಗೆ ಸೂಕ್ತ ಉತ್ತರ ಕೊಡುತ್ತೇನೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...