Homeಮುಖಪುಟಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

- Advertisement -
- Advertisement -

ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಹೇಳಿದ್ದ ಭಾರತೀಯ ಪಶು ಕಲ್ಯಾಣ ಮಂಡಳಿಯು (AWBI) ಶುಕ್ರವಾರ ತನ್ನ ಮನವಿಯನ್ನು ಹಿಂತೆಗೆದುಕೊಂಡಿದೆ. ಇದೀಗ ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವಿಟರ್‌ನಲ್ಲಿ ಕೇಂದ್ರ ಸರ್ಕಾರವನ್ನು ಪದಗಳ ಮೂಲಕ ಲೇವಡಿ ಮಾಡಿದ್ದಾರೆ.

ಮೋದಿ ಸರ್ಕಾರವು ಬೆದರಿತೇ? ಅಥವಾ ಇದು ಸರ್ಕಾರದ ಪುಕ್ಕಲುತನವೇ ಎಂದು ತರೂರ್ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಭಾರತೀಯ ಪಶು ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿಯನ್ನು ಮಾಡಿತ್ತು. ಈ ಮನವಿಯನ್ನು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಗೋವಿನ ಕಾರ್ಯಸೂಚಿಯ ಭಾಗವಾಗಿ ಇತ್ತೀಚಿನ ಕ್ರಮವೆಂದು ಪರಿಗಣಿಸಲಾಗಿದೆ. ಇದು ಪ್ರೇಮಿಗಳ ದಿನ ಎನ್ನುವ ಪಾಶ್ಚಾತ್ಯ ಸಂಸ್ಕೃತಿಯನ್ನು ವಿರೋಧಿಸಿ ಹಿಂದೂತ್ವವನ್ನು ಹೇರುವ ಬಗೆಯಂತೆ ಕಂಡುಬಂದಿದೆ.

ಮೋದಿ ಸರ್ಕಾರದ ನಡೆಯನ್ನು ಟ್ವೀಟ್ ಮಾಡಿರುವ ಶಶಿ ತರೂರ್, ”ಸರ್ಕಾರ ತನ್ನ ವಿರುದ್ಧ ಬಂದ ಜೋಕುಗಳಿಗೆ ಬೆದರಿತೇ (Cow-ed) ಅಥವಾ ಇದು ಕೇವಲ ಸರ್ಕಾರದ ಪುಕ್ಕಲುತನವೇ (Cow-ardice)? ನನ್ನ ಊಹೆಯ ಪ್ರಕಾರ ಮೂಲ ಮನವಿ ಒಂದು ಮಾತಿನ ಸೂಚನೆಯಾಗಿತ್ತು. ‘ಪ್ರೇಮಿಗಳ ದಿನಾಚರಣೆ: ಅವರು ಒಬ್ಬ ವ್ಯಕ್ತಿಯನ್ನು (Guy) ತಬ್ಬಿಕೊಳ್ಳಲಿ’ ಎಂದು ಆದರೆ ಕೊನೆಯ ಪದ Guy ಅನ್ನು ಹಿಂದಿ ರಾಷ್ಟ್ರವಾದಿಗಳು ಗಾಯ್ (ಹಿಂದಿಯಲ್ಲಿ ಹಸು) ಎಂದು ತಪ್ಪಾಗಿ ಕೇಳಿಸಿಕೊಂಡಿದ್ದಾರೆ” ಹೀಗೆ cow ಹಿಡಿದುಕೊಂಡು ತರೂರು ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿ ಮಾಡಿದ ಭಾರತೀಯ ಪಶು ಕಲ್ಯಾಣ ಮಂಡಳಿಯು, ಇದು ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ತರುತ್ತದೆ ಎಂದು ಹೇಳಿತ್ತು. ಇತ್ತೀಚಿನ ವರ್ಷಗಳಲ್ಲಿ ಅದು ಗೋಮೂತ್ರವನ್ನು ಔಷಧವಾಗಿ ಪ್ರಚಾರ ಮಾಡುವುದರಿಂದ ಹಿಡಿದು ಹಸುವಿನ ಸಗಣಿಯಿಂದ ವಿಕಿರಣದ ವಿರುದ್ಧ ರಕ್ಷಣೆ ಪಡೆಯಬಹುದು ಎಂದು ಘೋಷಿಸುವವರೆ ಹಸುವಿನ ಉಪಯೋಗಗಳ ಪಟ್ಟಿ ಮಾಡಿತ್ತು.

ಇದನ್ನೂ ಓದಿ: ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

”ಗೋವಿನ ಅಗಾಧವಾದ ಪ್ರಯೋಜನವನ್ನು ದೃಷ್ಟಿಯಲ್ಲಿಟ್ಟುಕೊಂಡು, ಹಸುವನ್ನು ಅಪ್ಪಿಕೊಳ್ಳುವುದರಿಂದ ಭಾವನಾತ್ಮಕ ಶ್ರೀಮಂತಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಗೋವು ಹಗ್ ಡೇ ಎಂದು ಆಚರಿಸಬಹುದು ಮತ್ತು ತಾಯಿ ಹಸುವಿನ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜೀವನದಲ್ಲಿ ಸಂತೋಷ ಮತ್ತು ಸಕಾರಾತ್ಮಕ ಶಕ್ತಿಯನ್ನು ಪಡೆಯಬಹುದು” ಎಂದು ಇಲಾಖೆ ಹೇಳಿದೆ.

ಭಾರತೀಯ ಪಶು ಕಲ್ಯಾಣ ಮಂಡಳಿಯು ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಡಿಯಲ್ಲಿ ಶಾಸನಬದ್ಧ ಸಂಸ್ಥೆಯಾಗಿದೆ. ಪ್ರಾಣಿ ಕಲ್ಯಾಣಕ್ಕಾಗಿ ಕಾನೂನು ನಿಬಂಧನೆಗಳ ಸಲಹೆ ನೀಡುವುದು ಇದರ ಮುಖ್ಯ ಕಾರ್ಯವಾಗಿದೆ.

ಹಿಂದೂ ಬಲಪಂಥೀಯರು ಈ ಗೋಸಂರಕ್ಷಣೆಯನ್ನು ಭಾರತೀಯ ಸಂಸ್ಕೃತಿಗೆ ಸಮಾನಾರ್ಥಕವೆಂದು ಶ್ಲಾಘಿಸಿದ್ದಾರೆ.  ಇದನ್ನು ನೀವು AWBIನ ಪತ್ರದಲ್ಲಿ ಕಾಣಬಹುದು, “ಪಾಶ್ಚಿಮಾತ್ಯ ನಾಗರಿಕತೆಯ ಬೆರಗು” ಅಡಿಯಲ್ಲಿ “ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ. ಹೀಗೆ ಹಸುವಿನ ಹಗ್ ಡೇ, ಹಿಂದೂ ಬಲಪಂಥೀಯರಿಗೆ ಪ್ರಿಯವಾದ ಎರಡು ಸಮಸ್ಯೆಗಳನ್ನು ಒಟ್ಟುಗೂಡಿಸುತ್ತದೆ. ಒಂದು, ಹಸು. ಮತ್ತೊಂದು ಪಾಶ್ಚಿಮಾತ್ಯ ಅತಿಕ್ರಮಣವಾಗಿ ಕಾಣುವ ವ್ಯಾಲೆಂಟೈನ್ಸ್ ಡೇಗೆ ವಿರೋಧ ವ್ಯಕ್ತಪಡಿಸುವುದು.

ತರೂರ್ ತಮ್ಮ ಟ್ವೀಟ್‌ನಲ್ಲಿ ಸಲಿಂಗಕಾಮಕ್ಕೆ ಬಿಜೆಪಿಯ ವಿರೋಧವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಯನ್ನು ವಿರೋಧಿಸಿದೆ. ಬಿಜೆಪಿಯು ಸಲಿಂಗ ವಿವಾಹವನ್ನು “ಎಡ-ಉದಾರವಾದಿ” ಮತ್ತು “ಪಾಶ್ಚಿಮಾತ್ಯ” ಪರಿಕಲ್ಪನೆ ಎಂದು ಗುರುತಿಸಿದೆ.

AWBI ಯ ಕೌ ಹಗ್ ಡೇ ಮನವಿಯು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯಕ್ಕೆ ಕಾರಣವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸಾಕಷ್ಟು ಹಾಸ್ಯಭರಿತ ಸಂದೇಶಗಳು ವಿಡಿಯೋಗಳು ಹರಿದಾಡಿದ ಬಳಿಕ AWBI ತನ್ನ ಹಿಂಪಡೆಯುವಿಕೆಯನ್ನು ಘೋಷಿಸಿತು. “ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ 14 ಫೆಬ್ರವರಿ 2023 ರಂದು ಹಸುವಿನ ಹಗ್ ಡೇ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ನೀಡಿದ ಮನವಿಯನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...