Homeಮುಖಪುಟಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

- Advertisement -
- Advertisement -

ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಹೇಳಿದ್ದ ಭಾರತೀಯ ಪಶು ಕಲ್ಯಾಣ ಮಂಡಳಿಯು (AWBI) ಶುಕ್ರವಾರ ತನ್ನ ಮನವಿಯನ್ನು ಹಿಂತೆಗೆದುಕೊಂಡಿದೆ. ಇದೀಗ ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವಿಟರ್‌ನಲ್ಲಿ ಕೇಂದ್ರ ಸರ್ಕಾರವನ್ನು ಪದಗಳ ಮೂಲಕ ಲೇವಡಿ ಮಾಡಿದ್ದಾರೆ.

ಮೋದಿ ಸರ್ಕಾರವು ಬೆದರಿತೇ? ಅಥವಾ ಇದು ಸರ್ಕಾರದ ಪುಕ್ಕಲುತನವೇ ಎಂದು ತರೂರ್ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಭಾರತೀಯ ಪಶು ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿಯನ್ನು ಮಾಡಿತ್ತು. ಈ ಮನವಿಯನ್ನು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಗೋವಿನ ಕಾರ್ಯಸೂಚಿಯ ಭಾಗವಾಗಿ ಇತ್ತೀಚಿನ ಕ್ರಮವೆಂದು ಪರಿಗಣಿಸಲಾಗಿದೆ. ಇದು ಪ್ರೇಮಿಗಳ ದಿನ ಎನ್ನುವ ಪಾಶ್ಚಾತ್ಯ ಸಂಸ್ಕೃತಿಯನ್ನು ವಿರೋಧಿಸಿ ಹಿಂದೂತ್ವವನ್ನು ಹೇರುವ ಬಗೆಯಂತೆ ಕಂಡುಬಂದಿದೆ.

ಮೋದಿ ಸರ್ಕಾರದ ನಡೆಯನ್ನು ಟ್ವೀಟ್ ಮಾಡಿರುವ ಶಶಿ ತರೂರ್, ”ಸರ್ಕಾರ ತನ್ನ ವಿರುದ್ಧ ಬಂದ ಜೋಕುಗಳಿಗೆ ಬೆದರಿತೇ (Cow-ed) ಅಥವಾ ಇದು ಕೇವಲ ಸರ್ಕಾರದ ಪುಕ್ಕಲುತನವೇ (Cow-ardice)? ನನ್ನ ಊಹೆಯ ಪ್ರಕಾರ ಮೂಲ ಮನವಿ ಒಂದು ಮಾತಿನ ಸೂಚನೆಯಾಗಿತ್ತು. ‘ಪ್ರೇಮಿಗಳ ದಿನಾಚರಣೆ: ಅವರು ಒಬ್ಬ ವ್ಯಕ್ತಿಯನ್ನು (Guy) ತಬ್ಬಿಕೊಳ್ಳಲಿ’ ಎಂದು ಆದರೆ ಕೊನೆಯ ಪದ Guy ಅನ್ನು ಹಿಂದಿ ರಾಷ್ಟ್ರವಾದಿಗಳು ಗಾಯ್ (ಹಿಂದಿಯಲ್ಲಿ ಹಸು) ಎಂದು ತಪ್ಪಾಗಿ ಕೇಳಿಸಿಕೊಂಡಿದ್ದಾರೆ” ಹೀಗೆ cow ಹಿಡಿದುಕೊಂಡು ತರೂರು ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿ ಮಾಡಿದ ಭಾರತೀಯ ಪಶು ಕಲ್ಯಾಣ ಮಂಡಳಿಯು, ಇದು ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ತರುತ್ತದೆ ಎಂದು ಹೇಳಿತ್ತು. ಇತ್ತೀಚಿನ ವರ್ಷಗಳಲ್ಲಿ ಅದು ಗೋಮೂತ್ರವನ್ನು ಔಷಧವಾಗಿ ಪ್ರಚಾರ ಮಾಡುವುದರಿಂದ ಹಿಡಿದು ಹಸುವಿನ ಸಗಣಿಯಿಂದ ವಿಕಿರಣದ ವಿರುದ್ಧ ರಕ್ಷಣೆ ಪಡೆಯಬಹುದು ಎಂದು ಘೋಷಿಸುವವರೆ ಹಸುವಿನ ಉಪಯೋಗಗಳ ಪಟ್ಟಿ ಮಾಡಿತ್ತು.

ಇದನ್ನೂ ಓದಿ: ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

”ಗೋವಿನ ಅಗಾಧವಾದ ಪ್ರಯೋಜನವನ್ನು ದೃಷ್ಟಿಯಲ್ಲಿಟ್ಟುಕೊಂಡು, ಹಸುವನ್ನು ಅಪ್ಪಿಕೊಳ್ಳುವುದರಿಂದ ಭಾವನಾತ್ಮಕ ಶ್ರೀಮಂತಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಗೋವು ಹಗ್ ಡೇ ಎಂದು ಆಚರಿಸಬಹುದು ಮತ್ತು ತಾಯಿ ಹಸುವಿನ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜೀವನದಲ್ಲಿ ಸಂತೋಷ ಮತ್ತು ಸಕಾರಾತ್ಮಕ ಶಕ್ತಿಯನ್ನು ಪಡೆಯಬಹುದು” ಎಂದು ಇಲಾಖೆ ಹೇಳಿದೆ.

ಭಾರತೀಯ ಪಶು ಕಲ್ಯಾಣ ಮಂಡಳಿಯು ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಡಿಯಲ್ಲಿ ಶಾಸನಬದ್ಧ ಸಂಸ್ಥೆಯಾಗಿದೆ. ಪ್ರಾಣಿ ಕಲ್ಯಾಣಕ್ಕಾಗಿ ಕಾನೂನು ನಿಬಂಧನೆಗಳ ಸಲಹೆ ನೀಡುವುದು ಇದರ ಮುಖ್ಯ ಕಾರ್ಯವಾಗಿದೆ.

ಹಿಂದೂ ಬಲಪಂಥೀಯರು ಈ ಗೋಸಂರಕ್ಷಣೆಯನ್ನು ಭಾರತೀಯ ಸಂಸ್ಕೃತಿಗೆ ಸಮಾನಾರ್ಥಕವೆಂದು ಶ್ಲಾಘಿಸಿದ್ದಾರೆ.  ಇದನ್ನು ನೀವು AWBIನ ಪತ್ರದಲ್ಲಿ ಕಾಣಬಹುದು, “ಪಾಶ್ಚಿಮಾತ್ಯ ನಾಗರಿಕತೆಯ ಬೆರಗು” ಅಡಿಯಲ್ಲಿ “ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ. ಹೀಗೆ ಹಸುವಿನ ಹಗ್ ಡೇ, ಹಿಂದೂ ಬಲಪಂಥೀಯರಿಗೆ ಪ್ರಿಯವಾದ ಎರಡು ಸಮಸ್ಯೆಗಳನ್ನು ಒಟ್ಟುಗೂಡಿಸುತ್ತದೆ. ಒಂದು, ಹಸು. ಮತ್ತೊಂದು ಪಾಶ್ಚಿಮಾತ್ಯ ಅತಿಕ್ರಮಣವಾಗಿ ಕಾಣುವ ವ್ಯಾಲೆಂಟೈನ್ಸ್ ಡೇಗೆ ವಿರೋಧ ವ್ಯಕ್ತಪಡಿಸುವುದು.

ತರೂರ್ ತಮ್ಮ ಟ್ವೀಟ್‌ನಲ್ಲಿ ಸಲಿಂಗಕಾಮಕ್ಕೆ ಬಿಜೆಪಿಯ ವಿರೋಧವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಯನ್ನು ವಿರೋಧಿಸಿದೆ. ಬಿಜೆಪಿಯು ಸಲಿಂಗ ವಿವಾಹವನ್ನು “ಎಡ-ಉದಾರವಾದಿ” ಮತ್ತು “ಪಾಶ್ಚಿಮಾತ್ಯ” ಪರಿಕಲ್ಪನೆ ಎಂದು ಗುರುತಿಸಿದೆ.

AWBI ಯ ಕೌ ಹಗ್ ಡೇ ಮನವಿಯು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯಕ್ಕೆ ಕಾರಣವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸಾಕಷ್ಟು ಹಾಸ್ಯಭರಿತ ಸಂದೇಶಗಳು ವಿಡಿಯೋಗಳು ಹರಿದಾಡಿದ ಬಳಿಕ AWBI ತನ್ನ ಹಿಂಪಡೆಯುವಿಕೆಯನ್ನು ಘೋಷಿಸಿತು. “ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ 14 ಫೆಬ್ರವರಿ 2023 ರಂದು ಹಸುವಿನ ಹಗ್ ಡೇ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ನೀಡಿದ ಮನವಿಯನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...