Homeಮುಖಪುಟಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

- Advertisement -
- Advertisement -

ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಹೇಳಿದ್ದ ಭಾರತೀಯ ಪಶು ಕಲ್ಯಾಣ ಮಂಡಳಿಯು (AWBI) ಶುಕ್ರವಾರ ತನ್ನ ಮನವಿಯನ್ನು ಹಿಂತೆಗೆದುಕೊಂಡಿದೆ. ಇದೀಗ ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವಿಟರ್‌ನಲ್ಲಿ ಕೇಂದ್ರ ಸರ್ಕಾರವನ್ನು ಪದಗಳ ಮೂಲಕ ಲೇವಡಿ ಮಾಡಿದ್ದಾರೆ.

ಮೋದಿ ಸರ್ಕಾರವು ಬೆದರಿತೇ? ಅಥವಾ ಇದು ಸರ್ಕಾರದ ಪುಕ್ಕಲುತನವೇ ಎಂದು ತರೂರ್ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಭಾರತೀಯ ಪಶು ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿಯನ್ನು ಮಾಡಿತ್ತು. ಈ ಮನವಿಯನ್ನು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಗೋವಿನ ಕಾರ್ಯಸೂಚಿಯ ಭಾಗವಾಗಿ ಇತ್ತೀಚಿನ ಕ್ರಮವೆಂದು ಪರಿಗಣಿಸಲಾಗಿದೆ. ಇದು ಪ್ರೇಮಿಗಳ ದಿನ ಎನ್ನುವ ಪಾಶ್ಚಾತ್ಯ ಸಂಸ್ಕೃತಿಯನ್ನು ವಿರೋಧಿಸಿ ಹಿಂದೂತ್ವವನ್ನು ಹೇರುವ ಬಗೆಯಂತೆ ಕಂಡುಬಂದಿದೆ.

ಮೋದಿ ಸರ್ಕಾರದ ನಡೆಯನ್ನು ಟ್ವೀಟ್ ಮಾಡಿರುವ ಶಶಿ ತರೂರ್, ”ಸರ್ಕಾರ ತನ್ನ ವಿರುದ್ಧ ಬಂದ ಜೋಕುಗಳಿಗೆ ಬೆದರಿತೇ (Cow-ed) ಅಥವಾ ಇದು ಕೇವಲ ಸರ್ಕಾರದ ಪುಕ್ಕಲುತನವೇ (Cow-ardice)? ನನ್ನ ಊಹೆಯ ಪ್ರಕಾರ ಮೂಲ ಮನವಿ ಒಂದು ಮಾತಿನ ಸೂಚನೆಯಾಗಿತ್ತು. ‘ಪ್ರೇಮಿಗಳ ದಿನಾಚರಣೆ: ಅವರು ಒಬ್ಬ ವ್ಯಕ್ತಿಯನ್ನು (Guy) ತಬ್ಬಿಕೊಳ್ಳಲಿ’ ಎಂದು ಆದರೆ ಕೊನೆಯ ಪದ Guy ಅನ್ನು ಹಿಂದಿ ರಾಷ್ಟ್ರವಾದಿಗಳು ಗಾಯ್ (ಹಿಂದಿಯಲ್ಲಿ ಹಸು) ಎಂದು ತಪ್ಪಾಗಿ ಕೇಳಿಸಿಕೊಂಡಿದ್ದಾರೆ” ಹೀಗೆ cow ಹಿಡಿದುಕೊಂಡು ತರೂರು ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿ ಮಾಡಿದ ಭಾರತೀಯ ಪಶು ಕಲ್ಯಾಣ ಮಂಡಳಿಯು, ಇದು ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ತರುತ್ತದೆ ಎಂದು ಹೇಳಿತ್ತು. ಇತ್ತೀಚಿನ ವರ್ಷಗಳಲ್ಲಿ ಅದು ಗೋಮೂತ್ರವನ್ನು ಔಷಧವಾಗಿ ಪ್ರಚಾರ ಮಾಡುವುದರಿಂದ ಹಿಡಿದು ಹಸುವಿನ ಸಗಣಿಯಿಂದ ವಿಕಿರಣದ ವಿರುದ್ಧ ರಕ್ಷಣೆ ಪಡೆಯಬಹುದು ಎಂದು ಘೋಷಿಸುವವರೆ ಹಸುವಿನ ಉಪಯೋಗಗಳ ಪಟ್ಟಿ ಮಾಡಿತ್ತು.

ಇದನ್ನೂ ಓದಿ: ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

”ಗೋವಿನ ಅಗಾಧವಾದ ಪ್ರಯೋಜನವನ್ನು ದೃಷ್ಟಿಯಲ್ಲಿಟ್ಟುಕೊಂಡು, ಹಸುವನ್ನು ಅಪ್ಪಿಕೊಳ್ಳುವುದರಿಂದ ಭಾವನಾತ್ಮಕ ಶ್ರೀಮಂತಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಗೋವು ಹಗ್ ಡೇ ಎಂದು ಆಚರಿಸಬಹುದು ಮತ್ತು ತಾಯಿ ಹಸುವಿನ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜೀವನದಲ್ಲಿ ಸಂತೋಷ ಮತ್ತು ಸಕಾರಾತ್ಮಕ ಶಕ್ತಿಯನ್ನು ಪಡೆಯಬಹುದು” ಎಂದು ಇಲಾಖೆ ಹೇಳಿದೆ.

ಭಾರತೀಯ ಪಶು ಕಲ್ಯಾಣ ಮಂಡಳಿಯು ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಡಿಯಲ್ಲಿ ಶಾಸನಬದ್ಧ ಸಂಸ್ಥೆಯಾಗಿದೆ. ಪ್ರಾಣಿ ಕಲ್ಯಾಣಕ್ಕಾಗಿ ಕಾನೂನು ನಿಬಂಧನೆಗಳ ಸಲಹೆ ನೀಡುವುದು ಇದರ ಮುಖ್ಯ ಕಾರ್ಯವಾಗಿದೆ.

ಹಿಂದೂ ಬಲಪಂಥೀಯರು ಈ ಗೋಸಂರಕ್ಷಣೆಯನ್ನು ಭಾರತೀಯ ಸಂಸ್ಕೃತಿಗೆ ಸಮಾನಾರ್ಥಕವೆಂದು ಶ್ಲಾಘಿಸಿದ್ದಾರೆ.  ಇದನ್ನು ನೀವು AWBIನ ಪತ್ರದಲ್ಲಿ ಕಾಣಬಹುದು, “ಪಾಶ್ಚಿಮಾತ್ಯ ನಾಗರಿಕತೆಯ ಬೆರಗು” ಅಡಿಯಲ್ಲಿ “ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ. ಹೀಗೆ ಹಸುವಿನ ಹಗ್ ಡೇ, ಹಿಂದೂ ಬಲಪಂಥೀಯರಿಗೆ ಪ್ರಿಯವಾದ ಎರಡು ಸಮಸ್ಯೆಗಳನ್ನು ಒಟ್ಟುಗೂಡಿಸುತ್ತದೆ. ಒಂದು, ಹಸು. ಮತ್ತೊಂದು ಪಾಶ್ಚಿಮಾತ್ಯ ಅತಿಕ್ರಮಣವಾಗಿ ಕಾಣುವ ವ್ಯಾಲೆಂಟೈನ್ಸ್ ಡೇಗೆ ವಿರೋಧ ವ್ಯಕ್ತಪಡಿಸುವುದು.

ತರೂರ್ ತಮ್ಮ ಟ್ವೀಟ್‌ನಲ್ಲಿ ಸಲಿಂಗಕಾಮಕ್ಕೆ ಬಿಜೆಪಿಯ ವಿರೋಧವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಯನ್ನು ವಿರೋಧಿಸಿದೆ. ಬಿಜೆಪಿಯು ಸಲಿಂಗ ವಿವಾಹವನ್ನು “ಎಡ-ಉದಾರವಾದಿ” ಮತ್ತು “ಪಾಶ್ಚಿಮಾತ್ಯ” ಪರಿಕಲ್ಪನೆ ಎಂದು ಗುರುತಿಸಿದೆ.

AWBI ಯ ಕೌ ಹಗ್ ಡೇ ಮನವಿಯು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯಕ್ಕೆ ಕಾರಣವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸಾಕಷ್ಟು ಹಾಸ್ಯಭರಿತ ಸಂದೇಶಗಳು ವಿಡಿಯೋಗಳು ಹರಿದಾಡಿದ ಬಳಿಕ AWBI ತನ್ನ ಹಿಂಪಡೆಯುವಿಕೆಯನ್ನು ಘೋಷಿಸಿತು. “ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ 14 ಫೆಬ್ರವರಿ 2023 ರಂದು ಹಸುವಿನ ಹಗ್ ಡೇ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ನೀಡಿದ ಮನವಿಯನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...