Homeಮುಖಪುಟಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

- Advertisement -
- Advertisement -

ಉತ್ತರಾಖಂಡ್‌ನ ಜೋಶಿಮಠ ಪಟ್ಟಣದಲ್ಲಿ ಉಂಟಾಗುತ್ತಿರುವ ಭೂ ಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಅಥವಾ ಆನ್‌ಲೈನ್‌ ವೇದಿಕೆಗಳಲ್ಲಿ ಅಂಕಿ-ಅಂಶಗಳನ್ನು ಹಂಚಿಕೊಳ್ಳಬಾರದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಇಲ್ಲಿನ ನಿವಾಸಿಗಳಲ್ಲಿ ಭೀತಿ ಉಂಟಾಗದಿರಲೆಂದು ಈ ಕ್ರಮ ಜರುಗಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಡಿಸೆಂಬರ್ 27 ಮತ್ತು ಜನವರಿ 8ರ ನಡುವೆ ಜೋಶಿಮಠ ಪಟ್ಟಣವು 5.4 ಸೆಂಟಿಮೀಟರ್‌ಗಳಷ್ಟು ಕುಸಿದಿದೆ ಎಂದು ಇಸ್ರೋ ಬಿಡುಗಡೆ ಮಾಡಿದ ಚಿತ್ರಗಳು ತೋರಿಸಿದ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.

ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಈ ವಿಷಯಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಬಿಡುಗಡೆ ಮಾಡುತ್ತಿವೆ. ಪರಿಸ್ಥಿತಿಯ ಕುರಿತು ತಮ್ಮದೇ ಆದ ವ್ಯಾಖ್ಯಾನಗಳ ಜೊತೆಯಲ್ಲಿ ಮಾಧ್ಯಮಗಳೊಂದಿಗೆ ಸಂವಹನ ನಡೆಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಸರ್ಕಾರಿ ಇಲಾಖೆಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇದು ಸಂತ್ರಸ್ತ ನಿವಾಸಿಗಳಲ್ಲಿ ಮಾತ್ರವಲ್ಲದೆ ದೇಶದ ನಾಗರಿಕರಲ್ಲಿಯೂ ಗೊಂದಲವನ್ನು ಸೃಷ್ಟಿಸುತ್ತಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಗುರುವಾರ ಬಿಡುಗಡೆ ಮಾಡಿದ ಉಪಗ್ರಹ ಚಿತ್ರಗಳು ಜೋಶಿಮಠದ ಬೆಳವಣಿಗೆಗಳ ಕುರಿತು ಬೆಳಕು ಚೆಲ್ಲಿದ್ದವು. ಡಿಸೆಂಬರ್ 27 ರಿಂದ ಜನವರಿ 8ರವರೆಗಿನ 12 ದಿನಗಳಲ್ಲಿ ದಾಖಲಾಗಿರುವ ಭೂ ಕುಸಿತವು, ಏಪ್ರಿಲ್ ಮತ್ತು ನವೆಂಬರ್ ನಡುವೆ ಘಟಿಸಿದ ಒಂಬತ್ತು ಸೆಂಟಿಮೀಟರ್‌ಗಳ ಕುಸಿತಕ್ಕಿಂತ ಹೆಚ್ಚು ವೇಗವಾಗಿದೆ ಎಂದು ವಿವರಿಸಿತ್ತು.

ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್‌ನ ವರದಿಯು ಸೆಂಟ್ರಲ್‌ ಜೋಶಿಮಠದಲ್ಲಿರುವ ಭಾರತೀಯ ಸೇನೆಯ ಹೆಲಿಪ್ಯಾಡ್ ಮತ್ತು ನರಸಿಂಹ ದೇವಾಲಯ ಇರುವ ವಲಯವನ್ನು ಗುರುತಿಸಿತ್ತು.

ಗುರುವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿ, “ದುರಂತದ ಬಗ್ಗೆ ವದಂತಿಗಳು ಹಬ್ಬುತ್ತಿವೆ. ಜೋಶಿಮಠ ಪಟ್ಟಣದ ಬಗ್ಗೆ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ. ಇದು ಇಲ್ಲಿನ ನಿವಾಸಿಗಳು ಮತ್ತು ಜೋಶಿಮಠದ ಆರ್ಥಿಕತೆಗೆ ಹಾನಿಯನ್ನು ಉಂಟು ಮಾಡುತ್ತಿದೆ” ಎಂದಿದ್ದಾರೆ.

“ಚಾರ್‌ ಧಾಮ್‌ ಯಾತ್ರೆಯ ಮೂಲಕ ನಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದ್ದೇವೆ. ಜೋಶಿಮಠವು ಸಂಪೂರ್ಣ ಹಾನಿಗೊಳಗಾಗಿದೆ, ಅಸುರಕ್ಷಿತವಾಗಿದೆ ಎಂದು ಆತಂಕ ಸೃಷ್ಟಿಸಬೇಡಿ” ಎಂದು ಮನವಿ ಮಾಡಿದ್ದಾರೆ.

ಜೋಶಿಮಠ ಮುಳುಗುತ್ತಿರುವುದೇಕೆ?

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಇದನ್ನೂ ಓದಿರಿ: ಬೆಂಗಳೂರು ಮೆಟ್ರೋ ಪಿಲ್ಲರ್‌ ದುರಂತ: ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...