Homeಮುಖಪುಟಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

- Advertisement -
- Advertisement -

ಉತ್ತರಾಖಂಡ್‌ನ ಜೋಶಿಮಠ ಪಟ್ಟಣದಲ್ಲಿ ಉಂಟಾಗುತ್ತಿರುವ ಭೂ ಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಅಥವಾ ಆನ್‌ಲೈನ್‌ ವೇದಿಕೆಗಳಲ್ಲಿ ಅಂಕಿ-ಅಂಶಗಳನ್ನು ಹಂಚಿಕೊಳ್ಳಬಾರದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಇಲ್ಲಿನ ನಿವಾಸಿಗಳಲ್ಲಿ ಭೀತಿ ಉಂಟಾಗದಿರಲೆಂದು ಈ ಕ್ರಮ ಜರುಗಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಡಿಸೆಂಬರ್ 27 ಮತ್ತು ಜನವರಿ 8ರ ನಡುವೆ ಜೋಶಿಮಠ ಪಟ್ಟಣವು 5.4 ಸೆಂಟಿಮೀಟರ್‌ಗಳಷ್ಟು ಕುಸಿದಿದೆ ಎಂದು ಇಸ್ರೋ ಬಿಡುಗಡೆ ಮಾಡಿದ ಚಿತ್ರಗಳು ತೋರಿಸಿದ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.

ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಈ ವಿಷಯಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಬಿಡುಗಡೆ ಮಾಡುತ್ತಿವೆ. ಪರಿಸ್ಥಿತಿಯ ಕುರಿತು ತಮ್ಮದೇ ಆದ ವ್ಯಾಖ್ಯಾನಗಳ ಜೊತೆಯಲ್ಲಿ ಮಾಧ್ಯಮಗಳೊಂದಿಗೆ ಸಂವಹನ ನಡೆಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಸರ್ಕಾರಿ ಇಲಾಖೆಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇದು ಸಂತ್ರಸ್ತ ನಿವಾಸಿಗಳಲ್ಲಿ ಮಾತ್ರವಲ್ಲದೆ ದೇಶದ ನಾಗರಿಕರಲ್ಲಿಯೂ ಗೊಂದಲವನ್ನು ಸೃಷ್ಟಿಸುತ್ತಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಗುರುವಾರ ಬಿಡುಗಡೆ ಮಾಡಿದ ಉಪಗ್ರಹ ಚಿತ್ರಗಳು ಜೋಶಿಮಠದ ಬೆಳವಣಿಗೆಗಳ ಕುರಿತು ಬೆಳಕು ಚೆಲ್ಲಿದ್ದವು. ಡಿಸೆಂಬರ್ 27 ರಿಂದ ಜನವರಿ 8ರವರೆಗಿನ 12 ದಿನಗಳಲ್ಲಿ ದಾಖಲಾಗಿರುವ ಭೂ ಕುಸಿತವು, ಏಪ್ರಿಲ್ ಮತ್ತು ನವೆಂಬರ್ ನಡುವೆ ಘಟಿಸಿದ ಒಂಬತ್ತು ಸೆಂಟಿಮೀಟರ್‌ಗಳ ಕುಸಿತಕ್ಕಿಂತ ಹೆಚ್ಚು ವೇಗವಾಗಿದೆ ಎಂದು ವಿವರಿಸಿತ್ತು.

ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್‌ನ ವರದಿಯು ಸೆಂಟ್ರಲ್‌ ಜೋಶಿಮಠದಲ್ಲಿರುವ ಭಾರತೀಯ ಸೇನೆಯ ಹೆಲಿಪ್ಯಾಡ್ ಮತ್ತು ನರಸಿಂಹ ದೇವಾಲಯ ಇರುವ ವಲಯವನ್ನು ಗುರುತಿಸಿತ್ತು.

ಗುರುವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿ, “ದುರಂತದ ಬಗ್ಗೆ ವದಂತಿಗಳು ಹಬ್ಬುತ್ತಿವೆ. ಜೋಶಿಮಠ ಪಟ್ಟಣದ ಬಗ್ಗೆ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ. ಇದು ಇಲ್ಲಿನ ನಿವಾಸಿಗಳು ಮತ್ತು ಜೋಶಿಮಠದ ಆರ್ಥಿಕತೆಗೆ ಹಾನಿಯನ್ನು ಉಂಟು ಮಾಡುತ್ತಿದೆ” ಎಂದಿದ್ದಾರೆ.

“ಚಾರ್‌ ಧಾಮ್‌ ಯಾತ್ರೆಯ ಮೂಲಕ ನಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದ್ದೇವೆ. ಜೋಶಿಮಠವು ಸಂಪೂರ್ಣ ಹಾನಿಗೊಳಗಾಗಿದೆ, ಅಸುರಕ್ಷಿತವಾಗಿದೆ ಎಂದು ಆತಂಕ ಸೃಷ್ಟಿಸಬೇಡಿ” ಎಂದು ಮನವಿ ಮಾಡಿದ್ದಾರೆ.

ಜೋಶಿಮಠ ಮುಳುಗುತ್ತಿರುವುದೇಕೆ?

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಇದನ್ನೂ ಓದಿರಿ: ಬೆಂಗಳೂರು ಮೆಟ್ರೋ ಪಿಲ್ಲರ್‌ ದುರಂತ: ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...