Homeಮುಖಪುಟವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

ವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

- Advertisement -
- Advertisement -

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಹೈದರಾಬಾದ್ ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಕಿರಿಯ ವೈದ್ಯರು 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂತೆಗೆದುಕೊಂಡಿದ್ದಾರೆ.

ತೆಲಂಗಾಣ ಜೂನಿಯರ್ ಡಾಕ್ಟರ್ ಅಸೋಸಿಯೇಷನ್ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು 15 ದಿನದೊಳಗೆ ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸದಿದ್ದರೆ ಮತ್ತೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಕೋವಿಡ್-19 ವಾರಿಯರ್ ಗಳಾಗಿ ಕೆಲಸ ಮಾಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಂಗಳವಾರದಿಂದ ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರದ ಭರವಸೆಯ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಿದ್ದು ಕರ್ತವ್ಯಕ್ಕೆ ಹಾಜರಾಗುವುದಾಗಿ ಹೇಳಿದೆ.

ಸರ್ಕಾರ ನಡೆಸುತ್ತಿರುವ ಆಸ್ಪತ್ರೆಗಳು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಮತ್ತು ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಒತ್ತಡವನ್ನು ಕಡಿಮೆ ಮಾಡುವುದಾಗಿ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ. ಅದರಂತೆ ಸರ್ಕಾರ ನಡೆದುಕೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡಾ.ಲೋಹಿತ್ ರೆಡ್ಡಿ ಮಾತನಾಡಿ, ಸರ್ಕಾರ ಗಾಂಧೀ ಆಸ್ಪತ್ರೆಯಲ್ಲಿ ಕೋವಿಡ್ ಅಲ್ಲದ ರೋಗಿಗಳ ಚಿಕಿತ್ಸೆಗೆ ಅವಕಾಶ ನೀಡುವ ಭರವಸೆ ಕೊಟ್ಟಿದೆ. ಜಿಲ್ಲಾಸ್ಪತ್ರೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಲ್ಲೂ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸುವ ಭರವಸೆ ಸಿಕ್ಕಿದೆ ಎಂದು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಕೋವಿಡ್-19 ಚಿಕಿತ್ಸೆ ವಿಕೇಂದ್ರೀಕರಣಗೊಳ್ಳಬೇಕು. ಈ ಸಂಬಂಧ ಸಚಿವ ಸಂಪುಟದ ಜೊತೆ ಮಾತನಾಡುವ ಭರವಸೆ ಆರೋಗ್ಯ ಸಚಿವರಿಂದ ದೊರೆತಿದೆ. 15 ದಿನಗಳೊಳಗೆ ಭರವಸೆ ಈಡೇರಿಸದಿದ್ದರೆ, ಕೆಲಸ ಬಹಿಷ್ಕರಿಸಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ತೆಲಂಗಾಣ ಕಿರಿಯ ವೈದ್ಯರ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ನಮ್ಮ ಬೇಡಿಕೆಗಳ ಈಡೇರಿಕೆಗೆ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ. ಖಾಲಿ ಇರುವ ವೈದ್ಯರು, ನರ್ಸ್, ರೋಗಿಯ ಸೇವಕರು ಮತ್ತು ಸಚ್ಛತಾ ಕಾರ್ಮಿಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಶೇಕಡ 30ರಷ್ಟು ಹೆಚ್ಚುವರಿ ಸಿಬ್ಬಂದಿಯನ್ನು ಮೀಸಲಿಡಬೇಕು ಎಂಬ ಮನವಿಗೆ ಸ್ಪಂದಿಸಿದ್ದಾರೆ.

ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ರಕ್ಷಣಾ ದಳವನ್ನು ನಿಯೋಜನೆ ಮಾಡುವುದಾಗಿ ಮತ್ತು, ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಚಿವರು ಹೇಳಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ.

ಗಾಂಧೀ ಸಾರ್ವಜನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ, ಜ್ವರ, ಬಿಪಿ, ಶುಗರ್ ನಂಥ ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದರಿಂದ ಬಡರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಸೋಸಿಯೇಷನ್ ಹೇಳಿದೆ.

ಕೊರೊನಾ ನಿಯಂತ್ರಣದಲ್ಲಿ ತೊಡಗಿರುವ ಸಿಬ್ಬಂದಿ ವೈಯಕ್ತಿಕ ರಕ್ಷಣಾ ಕಿಟ್ ಗಳನ್ನು ನೀಡಬೇಕು. ಎಲ್ಲಾ ಕಡೆಯು ಪಿಪಿಇ ಕಿಟ್ ಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದೆ.


ಇದನ್ನೂ ಓದಿ: ಪೊಲೀಸ್‌ ಬ್ಯಾರಿಕೇಡ್‌ ಕಿತ್ತೆಸೆದ ವೈದ್ಯರು: ಹೈದರಾಬಾದ್‌ನಲ್ಲಿ ಭಾರೀ ಪ್ರತಿಭಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...