Homeಮುಖಪುಟವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

ವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

- Advertisement -
- Advertisement -

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಹೈದರಾಬಾದ್ ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಕಿರಿಯ ವೈದ್ಯರು 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂತೆಗೆದುಕೊಂಡಿದ್ದಾರೆ.

ತೆಲಂಗಾಣ ಜೂನಿಯರ್ ಡಾಕ್ಟರ್ ಅಸೋಸಿಯೇಷನ್ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು 15 ದಿನದೊಳಗೆ ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸದಿದ್ದರೆ ಮತ್ತೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಕೋವಿಡ್-19 ವಾರಿಯರ್ ಗಳಾಗಿ ಕೆಲಸ ಮಾಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಂಗಳವಾರದಿಂದ ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರದ ಭರವಸೆಯ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಿದ್ದು ಕರ್ತವ್ಯಕ್ಕೆ ಹಾಜರಾಗುವುದಾಗಿ ಹೇಳಿದೆ.

ಸರ್ಕಾರ ನಡೆಸುತ್ತಿರುವ ಆಸ್ಪತ್ರೆಗಳು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಮತ್ತು ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಒತ್ತಡವನ್ನು ಕಡಿಮೆ ಮಾಡುವುದಾಗಿ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ. ಅದರಂತೆ ಸರ್ಕಾರ ನಡೆದುಕೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡಾ.ಲೋಹಿತ್ ರೆಡ್ಡಿ ಮಾತನಾಡಿ, ಸರ್ಕಾರ ಗಾಂಧೀ ಆಸ್ಪತ್ರೆಯಲ್ಲಿ ಕೋವಿಡ್ ಅಲ್ಲದ ರೋಗಿಗಳ ಚಿಕಿತ್ಸೆಗೆ ಅವಕಾಶ ನೀಡುವ ಭರವಸೆ ಕೊಟ್ಟಿದೆ. ಜಿಲ್ಲಾಸ್ಪತ್ರೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಲ್ಲೂ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸುವ ಭರವಸೆ ಸಿಕ್ಕಿದೆ ಎಂದು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಕೋವಿಡ್-19 ಚಿಕಿತ್ಸೆ ವಿಕೇಂದ್ರೀಕರಣಗೊಳ್ಳಬೇಕು. ಈ ಸಂಬಂಧ ಸಚಿವ ಸಂಪುಟದ ಜೊತೆ ಮಾತನಾಡುವ ಭರವಸೆ ಆರೋಗ್ಯ ಸಚಿವರಿಂದ ದೊರೆತಿದೆ. 15 ದಿನಗಳೊಳಗೆ ಭರವಸೆ ಈಡೇರಿಸದಿದ್ದರೆ, ಕೆಲಸ ಬಹಿಷ್ಕರಿಸಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ತೆಲಂಗಾಣ ಕಿರಿಯ ವೈದ್ಯರ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ನಮ್ಮ ಬೇಡಿಕೆಗಳ ಈಡೇರಿಕೆಗೆ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ. ಖಾಲಿ ಇರುವ ವೈದ್ಯರು, ನರ್ಸ್, ರೋಗಿಯ ಸೇವಕರು ಮತ್ತು ಸಚ್ಛತಾ ಕಾರ್ಮಿಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಶೇಕಡ 30ರಷ್ಟು ಹೆಚ್ಚುವರಿ ಸಿಬ್ಬಂದಿಯನ್ನು ಮೀಸಲಿಡಬೇಕು ಎಂಬ ಮನವಿಗೆ ಸ್ಪಂದಿಸಿದ್ದಾರೆ.

ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ರಕ್ಷಣಾ ದಳವನ್ನು ನಿಯೋಜನೆ ಮಾಡುವುದಾಗಿ ಮತ್ತು, ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಚಿವರು ಹೇಳಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ.

ಗಾಂಧೀ ಸಾರ್ವಜನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ, ಜ್ವರ, ಬಿಪಿ, ಶುಗರ್ ನಂಥ ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದರಿಂದ ಬಡರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಸೋಸಿಯೇಷನ್ ಹೇಳಿದೆ.

ಕೊರೊನಾ ನಿಯಂತ್ರಣದಲ್ಲಿ ತೊಡಗಿರುವ ಸಿಬ್ಬಂದಿ ವೈಯಕ್ತಿಕ ರಕ್ಷಣಾ ಕಿಟ್ ಗಳನ್ನು ನೀಡಬೇಕು. ಎಲ್ಲಾ ಕಡೆಯು ಪಿಪಿಇ ಕಿಟ್ ಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದೆ.


ಇದನ್ನೂ ಓದಿ: ಪೊಲೀಸ್‌ ಬ್ಯಾರಿಕೇಡ್‌ ಕಿತ್ತೆಸೆದ ವೈದ್ಯರು: ಹೈದರಾಬಾದ್‌ನಲ್ಲಿ ಭಾರೀ ಪ್ರತಿಭಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...