Homeಮುಖಪುಟವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

ವೈದ್ಯರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿಭಟನೆ ಕೈಬಿಟ್ಟ ಹೈದರಾಬಾದ್ ಕಿರಿಯ ವೈದ್ಯರು

- Advertisement -
- Advertisement -

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಹೈದರಾಬಾದ್ ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಕಿರಿಯ ವೈದ್ಯರು 15 ದಿನಗಳ ಗಡುವು ನೀಡಿ ಪ್ರತಿಭಟನೆ ಹಿಂತೆಗೆದುಕೊಂಡಿದ್ದಾರೆ.

ತೆಲಂಗಾಣ ಜೂನಿಯರ್ ಡಾಕ್ಟರ್ ಅಸೋಸಿಯೇಷನ್ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು 15 ದಿನದೊಳಗೆ ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸದಿದ್ದರೆ ಮತ್ತೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಕೋವಿಡ್-19 ವಾರಿಯರ್ ಗಳಾಗಿ ಕೆಲಸ ಮಾಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಂಗಳವಾರದಿಂದ ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರದ ಭರವಸೆಯ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಿದ್ದು ಕರ್ತವ್ಯಕ್ಕೆ ಹಾಜರಾಗುವುದಾಗಿ ಹೇಳಿದೆ.

ಸರ್ಕಾರ ನಡೆಸುತ್ತಿರುವ ಆಸ್ಪತ್ರೆಗಳು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಮತ್ತು ಗಾಂಧೀ ಸಾರ್ವಜನಿಕ ಆಸ್ಪತ್ರೆಯ ಒತ್ತಡವನ್ನು ಕಡಿಮೆ ಮಾಡುವುದಾಗಿ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ. ಅದರಂತೆ ಸರ್ಕಾರ ನಡೆದುಕೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡಾ.ಲೋಹಿತ್ ರೆಡ್ಡಿ ಮಾತನಾಡಿ, ಸರ್ಕಾರ ಗಾಂಧೀ ಆಸ್ಪತ್ರೆಯಲ್ಲಿ ಕೋವಿಡ್ ಅಲ್ಲದ ರೋಗಿಗಳ ಚಿಕಿತ್ಸೆಗೆ ಅವಕಾಶ ನೀಡುವ ಭರವಸೆ ಕೊಟ್ಟಿದೆ. ಜಿಲ್ಲಾಸ್ಪತ್ರೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಲ್ಲೂ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸುವ ಭರವಸೆ ಸಿಕ್ಕಿದೆ ಎಂದು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಕೋವಿಡ್-19 ಚಿಕಿತ್ಸೆ ವಿಕೇಂದ್ರೀಕರಣಗೊಳ್ಳಬೇಕು. ಈ ಸಂಬಂಧ ಸಚಿವ ಸಂಪುಟದ ಜೊತೆ ಮಾತನಾಡುವ ಭರವಸೆ ಆರೋಗ್ಯ ಸಚಿವರಿಂದ ದೊರೆತಿದೆ. 15 ದಿನಗಳೊಳಗೆ ಭರವಸೆ ಈಡೇರಿಸದಿದ್ದರೆ, ಕೆಲಸ ಬಹಿಷ್ಕರಿಸಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ತೆಲಂಗಾಣ ಕಿರಿಯ ವೈದ್ಯರ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ನಮ್ಮ ಬೇಡಿಕೆಗಳ ಈಡೇರಿಕೆಗೆ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ. ಖಾಲಿ ಇರುವ ವೈದ್ಯರು, ನರ್ಸ್, ರೋಗಿಯ ಸೇವಕರು ಮತ್ತು ಸಚ್ಛತಾ ಕಾರ್ಮಿಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಶೇಕಡ 30ರಷ್ಟು ಹೆಚ್ಚುವರಿ ಸಿಬ್ಬಂದಿಯನ್ನು ಮೀಸಲಿಡಬೇಕು ಎಂಬ ಮನವಿಗೆ ಸ್ಪಂದಿಸಿದ್ದಾರೆ.

ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ರಕ್ಷಣಾ ದಳವನ್ನು ನಿಯೋಜನೆ ಮಾಡುವುದಾಗಿ ಮತ್ತು, ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಚಿವರು ಹೇಳಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ.

ಗಾಂಧೀ ಸಾರ್ವಜನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ, ಜ್ವರ, ಬಿಪಿ, ಶುಗರ್ ನಂಥ ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದರಿಂದ ಬಡರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಸೋಸಿಯೇಷನ್ ಹೇಳಿದೆ.

ಕೊರೊನಾ ನಿಯಂತ್ರಣದಲ್ಲಿ ತೊಡಗಿರುವ ಸಿಬ್ಬಂದಿ ವೈಯಕ್ತಿಕ ರಕ್ಷಣಾ ಕಿಟ್ ಗಳನ್ನು ನೀಡಬೇಕು. ಎಲ್ಲಾ ಕಡೆಯು ಪಿಪಿಇ ಕಿಟ್ ಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದೆ.


ಇದನ್ನೂ ಓದಿ: ಪೊಲೀಸ್‌ ಬ್ಯಾರಿಕೇಡ್‌ ಕಿತ್ತೆಸೆದ ವೈದ್ಯರು: ಹೈದರಾಬಾದ್‌ನಲ್ಲಿ ಭಾರೀ ಪ್ರತಿಭಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...