Homeಮುಖಪುಟಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ 'ದಿ ಕ್ಯಾರವಾನ್‌'ಗೆ ಸೂಚಿಸಿದ ಕೇಂದ್ರ ಸಚಿವಾಲಯ

ಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ ‘ದಿ ಕ್ಯಾರವಾನ್‌’ಗೆ ಸೂಚಿಸಿದ ಕೇಂದ್ರ ಸಚಿವಾಲಯ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯು ನಾಗರಿಕರಿಗೆ ಚಿತ್ರಹಿಂಸೆ ನೀಡಿದ ಕಥೆಯನ್ನು 24 ಗಂಟೆಗಳ ಒಳಗೆ ತೆಗೆದುಹಾಕುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುದ್ದಿ ನಿಯತಕಾಲಿಕ ‘ದಿ ಕ್ಯಾರವಾನ್‌’ಗೆ ಸೂಚಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಸನ್‌ 69ಎ ಅಡಿಯಲ್ಲಿ ಸಚಿವಾಲಯವು ಈ ಆದೇಶವನ್ನು ನೀಡಿದೆ. ಜತೀಂದರ್ ಕೌರ್ ತುರ್ ಅವರ ‘ಸ್ಕ್ರೀಮ್ಸ್ ಫ್ರಮ್ ದಿ ಆರ್ಮಿ ಪೋಸ್ಟ್’ ಎಂಬ ವರದಿಯನ್ನು ತೆಗೆದು ಹಾಕುವಂತೆ ಪ್ರಸಾರ ಸಚಿವಾಲಯವು ಸೂಚಿಸಿದೆ. ಇದು ಪಠ್ಯ ಮತ್ತು ವೀಡಿಯೋ ರೂಪದಲ್ಲಿತ್ತು.

ಕಾರವಾನ್ ಪ್ರಕಾರ, ಆದೇಶದಲ್ಲಿ ಈ ಎರಡೂ ವಿಷಯಗಳನ್ನು 24 ಗಂಟೆಗಳ ಒಳಗೆ ತೆಗೆದುಹಾಕಬೇಕು. ಕಾರವಾನ್ ವರದಿಯನ್ನು ತೆಗೆದು ಹಾಕದಿದ್ದರೆ, ಭಾರತ ಸರ್ಕಾರವು ವರದಿಯ URLನ್ನು ನಿರ್ಬಂಧಿಸುತ್ತದೆ ಎಂದು ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ಪ್ರದೇಶದಲ್ಲಿ ಭಯೋತ್ಪಾದಕರ ಹೊಂಚುದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ನಂತರ ಭಾರತೀಯ ಸೇನೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ಮೂವರು ನಾಗರಿಕರ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ವರದಿಯಲ್ಲಿ ಉಲ್ಲೇಖವಿದೆ, ವಿದ್ಯುತ್‌ ಆಘಾತ ಸೇರಿದಂತೆ ಸೈನ್ಯದ ಚಿತ್ರಹಿಂಸೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಸೇನೆಯ ಮಾಹಿತಿದಾರರಾಗಿ ಕೆಲಸ ಮಾಡುತ್ತಿದ್ದ ಜನರ ಮೇಲೆ ನಡೆದ ಚಿತ್ರಹಿಂಸೆಯನ್ನು ವರದಿಯು ವಿವರವಾಗಿ ವಿವರಿಸಿದೆ. ಡಿ.22ರಂದು ಟೋಪಾ ಪೀರ್‌ನಲ್ಲಿ ಸೇನೆಯು ಹತ್ಯೆಗೈದ ಮೂವರು ನಾಗರಿಕರಾದ ಸಫೀರ್, ಶಬೀರ್ ಮತ್ತು ಶೌಕತ್ ಅವರ ಕುಟುಂಬಗಳೊಂದಿಗೆ ಪತ್ರಕರ್ತರು ವರದಿಯನ್ನು ಸಿದ್ದಪಡಿಸುವ ವೇಳೆ ಮಾತನಾಡಿದ್ದರು. ಇದಲ್ಲದೆ ಸಂತ್ರಸ್ತರ ಕುಟುಂಬಗಳಿಗೆ ಸೈನ್ಯವು ಹೇಗೆ ನಗದು ರೂಪದಲ್ಲಿ ಲಂಚವನ್ನು ನೀಡಿದೆ ಎಂಬ ಬಗ್ಗೆ ವರದಿಯು ಉಲ್ಲೇಖಿಸಿತ್ತು

ಫೆ.12ರಂದು ದಿ ಕ್ಯಾರವಾನ್ ನಿಯತಕಾಲಿಕದ ಸಂಪಾದಕರಿಗೆ ಸಚಿವಾಲಯವು ನೊಟೀಸ್‌ ನೀಡಿದ್ದು, ವರದಿಯು ರಾಷ್ಟ್ರೀಯ ಭದ್ರತೆಗೆ ಅಪಾಯವಾಗಿದೆ ಮತ್ತು 24 ಗಂಟೆಗಳ ಒಳಗೆ ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದರು. ಪತ್ರಿಕೆಯು ಆದೇಶವನ್ನು ಅನುಸರಿಸುತ್ತದೆ ಮತ್ತು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತದೆ ಎಂದು ಹೇಳಿದೆ.

ಸೆನ್ಸಾರ್‌ಶಿಪ್ ಕುರಿತು ಅಧಿಕೃತ ಪ್ರಕಟಣೆಯನ್ನು ಮಾಡುತ್ತಾ ಕಾರವಾನ್ ಸಾಮಾಜಿಕ ಮಾದ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ನಾವು ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಐಟಿ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಆದೇಶವನ್ನು ಸ್ವೀಕರಿಸಿದ್ದೇವೆ, ಈ ವೀಡಿಯೊವನ್ನು 24 ಗಂಟೆಗಳಲ್ಲಿ ತೆಗೆದುಹಾಕಲು ನಮಗೆ ನಿರ್ದೇಶಿಸಲಾಗಿದೆ ಎಂದು ಓದುಗರಿಗೆ ತಿಳಿಸುತ್ತಿದ್ದೇವೆ ಎಂದು ಹೇಳಿದೆ.

ಇದನ್ನು ಓದಿ: ದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...