Homeಮುಖಪುಟ'ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ' ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

- Advertisement -
- Advertisement -

ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಭಟ್ ನೇತೃತ್ವದ ಮುಸ್ಲಿಂ ಲೀಗ್ ಸಂಘಟನೆಯನ್ನು ಕೇಂದ್ರ ಸರ್ಕಾರವು ದೇಶ ವಿರೋಧಿ ಸಂಘಟನೆ ಎಂದು ಘೋಷಿಸಿದ್ದು, ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ 5 ವರ್ಷಗಳವರೆಗೆ ನಿಷೇಧಿಸಿ ಆದೇಶಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ಸಂಘಟನೆಯ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ)/ಎಂಎಲ್‌ಜೆಕೆ-ಎಂಎಯನ್ನು ಯುಎಪಿಎ ಅಡಿಯಲ್ಲಿ ಅಕ್ರಮ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಅಮಿತ್ ಶಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ರಾಷ್ಟ್ರದ ಏಕತೆ, ಸಾರ್ವಭೌಮತ್ವ ಮತ್ತು ಸಮಗ್ರತೆಗೆ ವಿರುದ್ಧವಾಗಿ ವರ್ತಿಸುವ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ. ಅವರು ಕಾನೂನಿನ ಸಂಪೂರ್ಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂಬ ಮೋದಿ ಸರ್ಕಾರದ ಸಂದೇಶವು ಸ್ಪಷ್ಟವಾಗಿದೆ ಎಂದು ಅಮಿತ್‌ ಶಾ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯವನ್ನು ಪಡೆಯುವುದು, ಅದನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸುವುದು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವುದು ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರದ (ಮಸರತ್ ಆಲಂ ಬಣ) ಉದ್ದೇಶವಾಗಿದೆ. ಸಂಘಟನೆಯ ಸದಸ್ಯರು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟವನ್ನು ಬೆಂಬಲಿಸಲು ಪಾಕಿಸ್ತಾನದ ಸಂಘಟನೆಗಳು ಸೇರಿದಂತೆ ವಿವಿಧ ಮೂಲಗಳ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದಾರೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) ಮತ್ತು ಅದರ ಸದಸ್ಯರು ದೇಶದ ಸಾಂವಿಧಾನಿಕ ಸಂಸ್ಥೆಗಳಿಗೆ ಅಗೌರವಿಸುತ್ತಾರೆ ಎಂದು ಗೃಹ ಸಚಿವಾಲಯ ಹೇಳಿದೆ.

ಸಂಘಟನೆಯ ಕಾನೂನುಬಾಹಿರ ಚಟುವಟಿಕೆಗಳು ಭಾರತದ ಸಮಗ್ರತೆ, ಸಾರ್ವಭೌಮತೆ, ಭದ್ರತೆ ಮತ್ತು ಕೋಮು ಸೌಹಾರ್ದತೆಯನ್ನು ಹಾಳುಮಾಡುತ್ತವೆ. ಇದಲ್ಲದೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಸಚಿವಾಲಯ ಹೇಳಿದೆ.

ಈ ಸಂಘಟನೆ ಮತ್ತು ಅದರ ಸದಸ್ಯರು ದೇಶದಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ. ಇದು ದೇಶದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯವನ್ನುಂಟುಮಾಡುತ್ತದೆ. ಈ ಸಂಘಟನೆಯು ಭಾರತದಿಂದ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸುವುದನ್ನು ಪ್ರತಿಪಾದಿಸುವುದನ್ನು ಮುಂದುವರಿಸುವ ಸಾಧ್ಯತೆಯಿದೆ. ಸುಳ್ಳುಗಳನ್ನು ಬಿತ್ತರಿಸಿ ಆ ಪ್ರದೇಶದ ಜನರಲ್ಲಿ ರಾಷ್ಟ್ರವಿರೋಧಿ ಭಾವನೆಗಳನ್ನು ಪ್ರಚೋದಿಸುತ್ತದೆ. ಆದ್ದರಿಂದ, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ- 1967ರಡಿಯಲ್ಲಿ ಕೇಂದ್ರ ಸರ್ಕಾರವು ಮುಸ್ಲಿಮ್ ಲೀಗ್ ಜಮ್ಮು ಕಾಶ್ಮೀರವನ್ನು (ಮಸರತ್ ಆಲಂ ಬಣ) ಕಾನೂನುಬಾಹಿರ ಸಂಘ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸಿದೆ. ನಿಷೇಧವು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಗೃಹ ಇಲಾಖೆಯು ತನ್ನ ಆದೇಶದಲ್ಲಿ ತಿಳಿಸಿದೆ.

ಸೈಯದ್ ಅಲಿ ಶಾ ಗಿಲಾನಿಯವರ ಮರಣದ ನಂತರ ಮಸರತ್ ಆಲಂ ಭಟ್ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಸಂಘಟನೆಯ ಮುಂದಾಳತ್ವ ವಹಿಸಿದ್ದರು. ಕಾಶ್ಮೀರ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಟ್ 2010ರಿಂದ ಜೈಲಿನಲ್ಲಿದ್ದಾರೆ. 2010ರಲ್ಲಿ ಕಾಶ್ಮೀರದಲ್ಲಿ 100ಕ್ಕೂ ಹೆಚ್ಚು ಯುವಕರ ಸಾವಿಗೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳನ್ನು ಸಂಘಟಿಸುವಲ್ಲಿ ಭಟ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

2015ರಲ್ಲಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಅವರನ್ನು ಬಿಡುಗಡೆ ಮಾಡಿದ್ದರು. ಇದು ಪಿಡಿಪಿ-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಯ ಒತ್ತಡದ ಮೇರೆಗೆ, ಅಂದಿನ ರಾಜ್ಯ ಸರ್ಕಾರವು ರ್ಯಾಲಿಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಎತ್ತಿದ ಆರೋಪದಲ್ಲಿ ದೇಶದ್ರೋಹದ ಮತ್ತು ರಾಜ್ಯದ ವಿರುದ್ಧ ಯುದ್ಧಕ್ಕೆ ಪ್ರೇರಣೆ ಆರೋಪದ ಮೇಲೆ ಅವರನ್ನು ಪುನಃಬಂಧಿಸಿತ್ತು.

ಇದನ್ನು ಓದಿ: ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...