Homeಮುಖಪುಟ'ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ' ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

- Advertisement -
- Advertisement -

ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಭಟ್ ನೇತೃತ್ವದ ಮುಸ್ಲಿಂ ಲೀಗ್ ಸಂಘಟನೆಯನ್ನು ಕೇಂದ್ರ ಸರ್ಕಾರವು ದೇಶ ವಿರೋಧಿ ಸಂಘಟನೆ ಎಂದು ಘೋಷಿಸಿದ್ದು, ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ 5 ವರ್ಷಗಳವರೆಗೆ ನಿಷೇಧಿಸಿ ಆದೇಶಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ಸಂಘಟನೆಯ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ)/ಎಂಎಲ್‌ಜೆಕೆ-ಎಂಎಯನ್ನು ಯುಎಪಿಎ ಅಡಿಯಲ್ಲಿ ಅಕ್ರಮ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಅಮಿತ್ ಶಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ರಾಷ್ಟ್ರದ ಏಕತೆ, ಸಾರ್ವಭೌಮತ್ವ ಮತ್ತು ಸಮಗ್ರತೆಗೆ ವಿರುದ್ಧವಾಗಿ ವರ್ತಿಸುವ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ. ಅವರು ಕಾನೂನಿನ ಸಂಪೂರ್ಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂಬ ಮೋದಿ ಸರ್ಕಾರದ ಸಂದೇಶವು ಸ್ಪಷ್ಟವಾಗಿದೆ ಎಂದು ಅಮಿತ್‌ ಶಾ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯವನ್ನು ಪಡೆಯುವುದು, ಅದನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸುವುದು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವುದು ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರದ (ಮಸರತ್ ಆಲಂ ಬಣ) ಉದ್ದೇಶವಾಗಿದೆ. ಸಂಘಟನೆಯ ಸದಸ್ಯರು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟವನ್ನು ಬೆಂಬಲಿಸಲು ಪಾಕಿಸ್ತಾನದ ಸಂಘಟನೆಗಳು ಸೇರಿದಂತೆ ವಿವಿಧ ಮೂಲಗಳ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದಾರೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) ಮತ್ತು ಅದರ ಸದಸ್ಯರು ದೇಶದ ಸಾಂವಿಧಾನಿಕ ಸಂಸ್ಥೆಗಳಿಗೆ ಅಗೌರವಿಸುತ್ತಾರೆ ಎಂದು ಗೃಹ ಸಚಿವಾಲಯ ಹೇಳಿದೆ.

ಸಂಘಟನೆಯ ಕಾನೂನುಬಾಹಿರ ಚಟುವಟಿಕೆಗಳು ಭಾರತದ ಸಮಗ್ರತೆ, ಸಾರ್ವಭೌಮತೆ, ಭದ್ರತೆ ಮತ್ತು ಕೋಮು ಸೌಹಾರ್ದತೆಯನ್ನು ಹಾಳುಮಾಡುತ್ತವೆ. ಇದಲ್ಲದೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಸಚಿವಾಲಯ ಹೇಳಿದೆ.

ಈ ಸಂಘಟನೆ ಮತ್ತು ಅದರ ಸದಸ್ಯರು ದೇಶದಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ. ಇದು ದೇಶದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯವನ್ನುಂಟುಮಾಡುತ್ತದೆ. ಈ ಸಂಘಟನೆಯು ಭಾರತದಿಂದ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸುವುದನ್ನು ಪ್ರತಿಪಾದಿಸುವುದನ್ನು ಮುಂದುವರಿಸುವ ಸಾಧ್ಯತೆಯಿದೆ. ಸುಳ್ಳುಗಳನ್ನು ಬಿತ್ತರಿಸಿ ಆ ಪ್ರದೇಶದ ಜನರಲ್ಲಿ ರಾಷ್ಟ್ರವಿರೋಧಿ ಭಾವನೆಗಳನ್ನು ಪ್ರಚೋದಿಸುತ್ತದೆ. ಆದ್ದರಿಂದ, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ- 1967ರಡಿಯಲ್ಲಿ ಕೇಂದ್ರ ಸರ್ಕಾರವು ಮುಸ್ಲಿಮ್ ಲೀಗ್ ಜಮ್ಮು ಕಾಶ್ಮೀರವನ್ನು (ಮಸರತ್ ಆಲಂ ಬಣ) ಕಾನೂನುಬಾಹಿರ ಸಂಘ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸಿದೆ. ನಿಷೇಧವು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಗೃಹ ಇಲಾಖೆಯು ತನ್ನ ಆದೇಶದಲ್ಲಿ ತಿಳಿಸಿದೆ.

ಸೈಯದ್ ಅಲಿ ಶಾ ಗಿಲಾನಿಯವರ ಮರಣದ ನಂತರ ಮಸರತ್ ಆಲಂ ಭಟ್ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಸಂಘಟನೆಯ ಮುಂದಾಳತ್ವ ವಹಿಸಿದ್ದರು. ಕಾಶ್ಮೀರ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಟ್ 2010ರಿಂದ ಜೈಲಿನಲ್ಲಿದ್ದಾರೆ. 2010ರಲ್ಲಿ ಕಾಶ್ಮೀರದಲ್ಲಿ 100ಕ್ಕೂ ಹೆಚ್ಚು ಯುವಕರ ಸಾವಿಗೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳನ್ನು ಸಂಘಟಿಸುವಲ್ಲಿ ಭಟ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

2015ರಲ್ಲಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಅವರನ್ನು ಬಿಡುಗಡೆ ಮಾಡಿದ್ದರು. ಇದು ಪಿಡಿಪಿ-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಯ ಒತ್ತಡದ ಮೇರೆಗೆ, ಅಂದಿನ ರಾಜ್ಯ ಸರ್ಕಾರವು ರ್ಯಾಲಿಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಎತ್ತಿದ ಆರೋಪದಲ್ಲಿ ದೇಶದ್ರೋಹದ ಮತ್ತು ರಾಜ್ಯದ ವಿರುದ್ಧ ಯುದ್ಧಕ್ಕೆ ಪ್ರೇರಣೆ ಆರೋಪದ ಮೇಲೆ ಅವರನ್ನು ಪುನಃಬಂಧಿಸಿತ್ತು.

ಇದನ್ನು ಓದಿ: ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...