Homeಮುಖಪುಟಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

ಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

- Advertisement -
- Advertisement -

ಆನ್‌ಲೈನ್‌ನಲ್ಲಿ ಅರೆಕಾಲಿಕ ಉದ್ಯೋಗ ನೀಡುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು 100 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ. ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಶಿಫಾರಸ್ಸಿನ ಮೇಲೆ ಈ ಕ್ರಮವನ್ನು ಕೈಗೊಂಡಿರುವುದಾಗಿ ಕೇಂದ್ರ ಸರಕಾರ ಹೇಳಿದೆ.

ಆಪಾದಿತ 100 ವೆಬ್‌ಸೈಟ್‌ಗಳು ಆರ್ಥಿಕ ವಂಚನೆಗಳಲ್ಲಿ ಭಾಗಿಯಾಗಿದ್ದವು ಮತ್ತು ಈ ಆದಾಯವನ್ನು ಭಾರತದಿಂದ ಹೊರಗೆ ವರ್ಗಾಯಿಸುತ್ತಿದ್ದವು. ಡಿಜಿಟಲ್ ಜಾಹೀರಾತು, ಚಾಟ್ ಮೆಸೆಂಜರ್‌ಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಜನರನ್ನು ವಂಚಿಸುತ್ತಿದ್ದರು ಎನ್ನುವುದು ಬಯಲಾಗಿದೆ. ಈ ರೀತಿಯ ವಂಚನೆಗಳಿಂದ ಗಳಿಸಿದ ಆದಾಯವನ್ನು ಕಾರ್ಡ್ ನೆಟ್‌ವರ್ಕ್‌, ಕ್ರಿಪ್ಟೋ ಕರೆನ್ಸಿ, ಸಾಗರೋತ್ತರ ಎಟಿಎಂ ವಿತ್‌ ಡ್ರಾ ಮತ್ತು ಅಂತಾರಾಷ್ಟ್ರೀಯ ಫಿನ್ಟೆಕ್ ಕಂಪನಿಗಳನ್ನು ಬಳಸಿಕೊಂಡು ಭಾರತದಿಂದ ಹೊರಗೆ ಸಾಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಎನ್‌ಸಿಟಿಎಯು ಕಳೆದ ವಾರ ಸಂಘಟಿತ ಹೂಡಿಕೆ, ಅರೆಕಾಲಿಕ ಉದ್ಯೋಗ ವಂಚನೆಗಳಲ್ಲಿ ತೊಡಗಿರುವ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ಗುರುತಿಸಿತ್ತು ಮತ್ತು ನಿಷೇಧಕ್ಕೆ ಶಿಫಾರಸು ಮಾಡಿತ್ತು. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯಿದೆ 2000ದ ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಿ ಈ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ ಎಂದು ಸರ್ಕಾರ ಹೇಳಿದೆ.

ಈ ವಂಚನೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ 1930 ಮತ್ತು ಎನ್‌ಸಿಆರ್‌ಪಿ  ಮೂಲಕ ಹಲವು ದೂರುಗಳು ಬಂದಿದೆ. ಈ ಅಪರಾಧಗಳು ನಾಗರಿಕರಿಗೆ ಬೆದರಿಕೆಗಳನ್ನು ಒಡ್ಡುವುದಷ್ಟೇ ಅಲ್ಲದೆ ಮಾಹಿತಿ ಭದ್ರತೆಗೆ ಅಪಾಯವೊಡ್ಡಿದೆ ಎಂದು ಸಚಿವಾಲಯ ಹೇಳಿದೆ.

ಗೂಗಲ್ ಮತ್ತು ಮೆಟಾದಂತಹ ಫ್ಲಾಟ್‌ಫಾರ್ಮ್‌ಗಳನ್ನು ಪ್ರಚಾರಕ್ಕೆ ಬಳಸಲಾಗುತ್ತಿತ್ತು. ಮನೆಯಲ್ಲಿ ಕುಳಿತು ಮಾಡಬಹುದಾದ ಕೆಲಸಗಳು, ಮನೆಯಲ್ಲಿ ಕುಳಿತು ಹಣವನ್ನು ಸಂಪಾದಿಸುವುದು ಹೇಗೆ? ಮುಂತಾದ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗುತ್ತದೆ. ನಿವೃತ್ತ ಉದ್ಯೋಗಿಗಳು, ಮಹಿಳೆಯರು ಮತ್ತು ಅರೆಕಾಲಿಕ ಉದ್ಯೋಗಗಳನ್ನು ಹುಡುಕುತ್ತಿರುವವರನ್ನು ಇವರು ಟಾರ್ಗೆಟ್‌ ಮಾಡುತ್ತಿದ್ದರು ಎಂದು ಸಚಿವಾಲಯ ತಿಳಿಸಿದೆ.

ಬಳಕೆದಾರರು ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದ ನಂತರ ವಾಟ್ಸಾಪ್, ಟೆಲಿಗ್ರಾಮ್ ಬಳಸುವ ಏಜೆಂಟ್‌ಗಳು ಕರೆ ಮಾಡಲು ಪ್ರಾರಂಭಿಸುತ್ತಾರೆ. ಆರಂಭದಲ್ಲಿ ವಿಡಿಯೊ ಲೈಕ್‌ನಂತಹ ಕೆಲವು ಕಾರ್ಯಗಳನ್ನು ನಿರ್ವಹಿಸಲು ಸೂಚಿಸುತ್ತಾರೆ. ಕೆಲಸ ಪೂರ್ಣಗೊಂಡಾಗ ಕಮಿಷನ್ ನೀಡಲಾಗುತ್ತದೆ. ಬಳಿಕ ಹೆಚ್ಚಿನ ಆದಾಯಕ್ಕಾಗಿ ಅಧಿಕ ಹೂಡಿಕೆ ಮಾಡಲು ಕೇಳಲಾಗುತ್ತದೆ. ಒಂದು ವೇಳೆ ದೊಡ್ಡ ಮೊತ್ತವನ್ನು ಠೇವಣಿ ಇಟ್ಟರೆ ಅದನ್ನು ಸ್ಥಗಿತಗೊಳಿಸಲಾಗುತ್ತದೆ ಮತ್ತೆ ಅವರು ಸಂಪರ್ಕಕ್ಕೆ ಸಿಗದೆ ವಂಚನೆ ಮಾಡಲಾಗುತ್ತದೆ. ಹೆಚ್ಚಿನ ಕಮಿಷನ್‌-ಪಾವತಿಸುವ ಆನ್‌ಲೈನ್ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಸೂಚಿಸಿದೆ.

ಇದನ್ನು ಓದಿ: ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...