Homeಮುಖಪುಟಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

ಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

- Advertisement -
- Advertisement -

ಆನ್‌ಲೈನ್‌ನಲ್ಲಿ ಅರೆಕಾಲಿಕ ಉದ್ಯೋಗ ನೀಡುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು 100 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ. ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಶಿಫಾರಸ್ಸಿನ ಮೇಲೆ ಈ ಕ್ರಮವನ್ನು ಕೈಗೊಂಡಿರುವುದಾಗಿ ಕೇಂದ್ರ ಸರಕಾರ ಹೇಳಿದೆ.

ಆಪಾದಿತ 100 ವೆಬ್‌ಸೈಟ್‌ಗಳು ಆರ್ಥಿಕ ವಂಚನೆಗಳಲ್ಲಿ ಭಾಗಿಯಾಗಿದ್ದವು ಮತ್ತು ಈ ಆದಾಯವನ್ನು ಭಾರತದಿಂದ ಹೊರಗೆ ವರ್ಗಾಯಿಸುತ್ತಿದ್ದವು. ಡಿಜಿಟಲ್ ಜಾಹೀರಾತು, ಚಾಟ್ ಮೆಸೆಂಜರ್‌ಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಜನರನ್ನು ವಂಚಿಸುತ್ತಿದ್ದರು ಎನ್ನುವುದು ಬಯಲಾಗಿದೆ. ಈ ರೀತಿಯ ವಂಚನೆಗಳಿಂದ ಗಳಿಸಿದ ಆದಾಯವನ್ನು ಕಾರ್ಡ್ ನೆಟ್‌ವರ್ಕ್‌, ಕ್ರಿಪ್ಟೋ ಕರೆನ್ಸಿ, ಸಾಗರೋತ್ತರ ಎಟಿಎಂ ವಿತ್‌ ಡ್ರಾ ಮತ್ತು ಅಂತಾರಾಷ್ಟ್ರೀಯ ಫಿನ್ಟೆಕ್ ಕಂಪನಿಗಳನ್ನು ಬಳಸಿಕೊಂಡು ಭಾರತದಿಂದ ಹೊರಗೆ ಸಾಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಎನ್‌ಸಿಟಿಎಯು ಕಳೆದ ವಾರ ಸಂಘಟಿತ ಹೂಡಿಕೆ, ಅರೆಕಾಲಿಕ ಉದ್ಯೋಗ ವಂಚನೆಗಳಲ್ಲಿ ತೊಡಗಿರುವ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ಗುರುತಿಸಿತ್ತು ಮತ್ತು ನಿಷೇಧಕ್ಕೆ ಶಿಫಾರಸು ಮಾಡಿತ್ತು. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯಿದೆ 2000ದ ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಿ ಈ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ ಎಂದು ಸರ್ಕಾರ ಹೇಳಿದೆ.

ಈ ವಂಚನೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ 1930 ಮತ್ತು ಎನ್‌ಸಿಆರ್‌ಪಿ  ಮೂಲಕ ಹಲವು ದೂರುಗಳು ಬಂದಿದೆ. ಈ ಅಪರಾಧಗಳು ನಾಗರಿಕರಿಗೆ ಬೆದರಿಕೆಗಳನ್ನು ಒಡ್ಡುವುದಷ್ಟೇ ಅಲ್ಲದೆ ಮಾಹಿತಿ ಭದ್ರತೆಗೆ ಅಪಾಯವೊಡ್ಡಿದೆ ಎಂದು ಸಚಿವಾಲಯ ಹೇಳಿದೆ.

ಗೂಗಲ್ ಮತ್ತು ಮೆಟಾದಂತಹ ಫ್ಲಾಟ್‌ಫಾರ್ಮ್‌ಗಳನ್ನು ಪ್ರಚಾರಕ್ಕೆ ಬಳಸಲಾಗುತ್ತಿತ್ತು. ಮನೆಯಲ್ಲಿ ಕುಳಿತು ಮಾಡಬಹುದಾದ ಕೆಲಸಗಳು, ಮನೆಯಲ್ಲಿ ಕುಳಿತು ಹಣವನ್ನು ಸಂಪಾದಿಸುವುದು ಹೇಗೆ? ಮುಂತಾದ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗುತ್ತದೆ. ನಿವೃತ್ತ ಉದ್ಯೋಗಿಗಳು, ಮಹಿಳೆಯರು ಮತ್ತು ಅರೆಕಾಲಿಕ ಉದ್ಯೋಗಗಳನ್ನು ಹುಡುಕುತ್ತಿರುವವರನ್ನು ಇವರು ಟಾರ್ಗೆಟ್‌ ಮಾಡುತ್ತಿದ್ದರು ಎಂದು ಸಚಿವಾಲಯ ತಿಳಿಸಿದೆ.

ಬಳಕೆದಾರರು ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದ ನಂತರ ವಾಟ್ಸಾಪ್, ಟೆಲಿಗ್ರಾಮ್ ಬಳಸುವ ಏಜೆಂಟ್‌ಗಳು ಕರೆ ಮಾಡಲು ಪ್ರಾರಂಭಿಸುತ್ತಾರೆ. ಆರಂಭದಲ್ಲಿ ವಿಡಿಯೊ ಲೈಕ್‌ನಂತಹ ಕೆಲವು ಕಾರ್ಯಗಳನ್ನು ನಿರ್ವಹಿಸಲು ಸೂಚಿಸುತ್ತಾರೆ. ಕೆಲಸ ಪೂರ್ಣಗೊಂಡಾಗ ಕಮಿಷನ್ ನೀಡಲಾಗುತ್ತದೆ. ಬಳಿಕ ಹೆಚ್ಚಿನ ಆದಾಯಕ್ಕಾಗಿ ಅಧಿಕ ಹೂಡಿಕೆ ಮಾಡಲು ಕೇಳಲಾಗುತ್ತದೆ. ಒಂದು ವೇಳೆ ದೊಡ್ಡ ಮೊತ್ತವನ್ನು ಠೇವಣಿ ಇಟ್ಟರೆ ಅದನ್ನು ಸ್ಥಗಿತಗೊಳಿಸಲಾಗುತ್ತದೆ ಮತ್ತೆ ಅವರು ಸಂಪರ್ಕಕ್ಕೆ ಸಿಗದೆ ವಂಚನೆ ಮಾಡಲಾಗುತ್ತದೆ. ಹೆಚ್ಚಿನ ಕಮಿಷನ್‌-ಪಾವತಿಸುವ ಆನ್‌ಲೈನ್ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಸೂಚಿಸಿದೆ.

ಇದನ್ನು ಓದಿ: ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...