Homeಮುಖಪುಟಮಹಾದೇವ್ ಆ್ಯಪ್ ಬ್ಲಾಕ್ ಮಾಡುವಂತೆ ಕೇಂದ್ರ ಸರಕಾರ ಆದೇಶ

ಮಹಾದೇವ್ ಆ್ಯಪ್ ಬ್ಲಾಕ್ ಮಾಡುವಂತೆ ಕೇಂದ್ರ ಸರಕಾರ ಆದೇಶ

- Advertisement -
- Advertisement -

ಜಾರಿ ನಿರ್ದೇಶನಾಲಯದ ಮನವಿಯ ಮೇರೆಗೆ ಮಹಾದೇವ್ ಆ್ಯಪ್ ಮತ್ತು ರೆಡ್ಡಿಅನ್ನಪ್ರೆಸ್ಟೋಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಬ್ಲಾಕ್ ಮಾಡುವಂತೆ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಛತ್ತೀಸ್‌ಗಢ ಸರ್ಕಾರವು ಈ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಅಧಿಕಾರ ಹೊಂದಿದ್ದರೂ ಯಾವುದೇ ಮನವಿಯನ್ನು ಕಳುಹಿಸಿಲ್ಲ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದು, ಇಡಿ ಮನವಿಯ ಮೇರೆಗೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತನ್ನ ಹೇಳಿಕೆಯಲ್ಲಿ ಮಹಾದೇವ್ ಆ್ಯಪ್ ಮತ್ತು ರೆಡ್ಡಿಅನ್ನಪ್ರೆಸ್ಟೊಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿ ಆದೇಶಗಳನ್ನು ಹೊರಡಿಸಿದೆ. ಅಕ್ರಮ ಬೆಟ್ಟಿಂಗ್ ಆಪ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ತನಿಖೆಗಳು ಮತ್ತು ಛತ್ತೀಸ್‌ಗಢದ ಮಹಾದೇವ್ ಬುಕ್‌ ಮೇಲಿನ ದಾಳಿಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಸೆಕ್ಷನ್ 69A IT ಕಾಯಿದೆಯ ಅಡಿಯಲ್ಲಿ ಆ್ಯಪ್‌ನ್ನು ಮುಚ್ಚಲು ಶಿಫಾರಸು ಮಾಡುವ ಎಲ್ಲಾ ಅಧಿಕಾರವನ್ನು ಛತ್ತೀಸ್‌ಗಢ ಸರ್ಕಾರ ಹೊಂದಿದೆ. ಆದರೆ ಅವರು ಶಿಫಾರಸು ಮಾಡಲಿಲ್ಲ ಮತ್ತು ಕಳೆದ 1.5 ವರ್ಷಗಳಿಂದ ತನಿಖೆ ನಡೆಸುತ್ತಿರುವಾಗ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ವಿನಂತಿಯನ್ನು ಮಾಡಿಲ್ಲ. ವಾಸ್ತವವಾಗಿ EDಯಿಂದ  ವಿನಂತಿಯನ್ನು ಸ್ವೀಕರಿಸಲಾಗಿದೆ ಮತ್ತು ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಾಜೀವ್‌ ಚಂದ್ರ ಶೇಖರ್‌ ಹೇಳಿದ್ದಾರೆ.

ಛತ್ತೀಸ್‌ಗಢ ಪೊಲೀಸ್ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಭೀಮ್ ಸಿಂಗ್ ಯಾದವ್ ಮತ್ತು ಅಸೀಮ್ ದಾಸ್  ಪ್ರಕರಣಕ್ಕೆ ಸಂಬಂಧಿಸಿ ಪ್ರಸ್ತುತ ಬಂಧನದಲ್ಲಿದ್ದು, ಅಕ್ರಮ ಹಣ ವರ್ಗಾವಣೆ ಕಾಯ್ದೆಯ ನಿಯಾಮಾವಳಿಗಳ ಉಲ್ಲಂಘನೆಗಾಗಿ ಬಂಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಇದಕ್ಕೂ ಮೊದಲು ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರಿಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ನ ಪ್ರವರ್ತಕರು 508 ಕೋಟಿ ನೀಡಿರುವ ಕುರಿತು ಆರಂಭಿಕ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಜಾರಿ ನಿರ್ದೇಶನಾಲಯ ಹೇಳಿತ್ತು. ಇಡಿ ಅಧಿಕಾರಿಗಳ ಹೇಳಿಕೆ ದೇಶದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಮಹಾದೇವ್ ಆ್ಯಪ್‌ ಮೂಲಕ ಅಕ್ರಮವಾಗಿ ಸಂಗ್ರಹಿಸಿದ್ದ ಹಣವನ್ನು ರಾಜಕಾರಣಿಗಳು, ಅಧಿಕಾರಿಗಳಿಗೆ ಲಂಚವಾಗಿ ನೀಡಲಾಗಿದೆ ಎಂದು ಇ.ಡಿ ಹಿಂದೆ ಹೇಳಿತ್ತು. ಅಲ್ಲದೆ, ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಹಲವು ಪ್ರಮುಖರು, ಬಾಲಿವುಡ್‌ ನಟರಿಗೆ ಸಮನ್ಸ್‌ ಜಾರಿ ಮಾಡಿತ್ತು.

ಮಹಾದೇವ್ ಬೆಟ್ಟಿಂಗ್ ಆ್ಯಪ್‌ ಪ್ರಕರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಹಾಜರಾಗುವಂತೆ ನಟ ರಣಬೀರ್‌ ಕಪೂರ್‌, ಹಾಸ್ಯಗಾರ ಕಪಿಲ್ ಶರ್ಮ, ನಟಿಯರಾದ ಹುಮಾ ಖುರೇಷಿ ಮತ್ತು ಹೀನಾ ಖಾನ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿತ್ತು.

ಇದನ್ನು ಓದಿ: ಗುಂಡ್ಲುಪೇಟೆ: ಬಂಡೀಪುರ ಅರಣ್ಯದಲ್ಲಿ ಗುಂಡಿನ ಚಕಮಕಿ: ಯುವಕ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...